ರಾಯಚೂರು | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಎಲ್ಲ ಶಾಸಕರ ಮನೆ ಮುಂದೆ ಡಿ.14ರಂದು ತಮಟೆ ಚಳವಳಿ

Date:

Advertisements

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಸೆಂಬರ್ 14ರಂದು ರಾಜ್ಯದ ಎಲ್ಲ ಶಾಸಕರ ಮನೆಮುಂದೆ ತಮಟೆ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನರಸಪ್ಪ ದಂಡೋರ ಹೇಳಿದರು.

ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿಸೆಂಬರ್ 16ರಂದು ಒಳಮೀಸಲಾತಿ ಹಕ್ಕೊತ್ತಾಯ ಸಮಾವೇಶವನ್ನು ಬೆಳಗಾವಿಯಲ್ಲಿ ಬೆಳಿಗ್ಗೆ 11.30 ಕ್ಕೆ ನಡೆಯಲಿದೆ ಎಂದರು.

ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ ಒಳಮೀಸಲಾತಿಯನ್ನು ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿ ನಾಲ್ಕು ತಿಂಗಳಾದರೂ ರಾಜ್ಯ ಸರ್ಕಾರ ಅಮೆ ಗತಿಯಲ್ಲಿ ಸಾಗಿದೆ. ಕಾಟಾಚಾರಕ್ಕೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ರಚಿಸಿದ್ದು, ಬಿಟ್ಟರೆ ಬೇರೆ ಏನು ಮಾಡಿಲ್ಲ. 2 ತಿಂಗಳಲ್ಲಿ ಆಯೋಗ ವರದಿ ಕೊಡುತ್ತದೆ ಎಂದು ಸರ್ಕಾರ ಹೇಳಿತ್ತು. ಆದರೆ 45 ದಿನವಾದರೂ ಆಯೋಗ ಕೆಲಸ ಆರಂಭಿಸಿಲ್ಲ, ಆಯೋಗಕ್ಕೆ ಬೇಕಾದ ಕಛೇರಿ, ಸಿಬ್ಬಂದಿ, ಹಣಕಾಸಿನ ನೆರವುಕೊಡದೆ ಕಾಲ ಹರಣ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

Advertisements

2011ರ ಜನಗಣತಿಯ ಅಂಕಿ-ಅಂಶಗಳ ಆಧಾರದಲ್ಲಿ ವರ್ಗೀಕರಣ ಮಾಡಿದೆ. ಈಗ ಮತ್ತೆ ನಾಗಮೋಹನ್ ದಾಸ್ ಆಯೋಗಕ್ಕೆ ಅದೇ ಕೆಲಸ ಕೊಡಲಾಗಿದೆ. ಸರ್ಕಾರದ ಈ ನಿಧಾನಗತಿಯ ನಿರ್ಲಕ್ಷ್ಯದ ಧೋರಣೆ ನೋಡಿದರೆ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕೊಡುವ ಮನಸ್ಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ದೊಮ್ಮರಾಜು ಗುಕೇಶ್: ಹದಿನೆಂಟರ ಪೋರ, ಚೆಸ್ ಲೋಕದ ಸಾಮ್ರಾಟ

ಒಳಮೀಸಲಾತಿ ಜಾರಿ ಆಗುವ ವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ಕೊಟ್ಟಿತ್ತು. ಆದರೆ ಈ ಭರವಸೆ ಜಾರಿಯಾಗಿಲ್ಲ, ನೇಮಕಾತಿಯ ಘೋಷಣೆಗಳು ವಿವಿಧ ಇಲಾಖೆಯಿಂದ ಬರುತ್ತಲೆ ಇದೆ. ಇದು ಖಂಡನಾರ್ಹ ಎಂದರು.

ಈ ಸಂದರ್ಭದಲ್ಲಿ ರವೀಂದ್ರ ಜಲ್ದಾರ್, ಪಿ. ಲಕ್ಷ್ಮಣ್ ಸೀತಾಮಠ ಯಲ್ಲಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X