ಅಪ್ರಾಪ್ತ ಬಾಲಕಿಯರ ವಿಡಿಯೋ, ಫೋಟೋ ಕ್ಲಿಕ್ಕಿಸಿದ್ದ ಶಿಕ್ಷಕ; ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

Date:

Advertisements

ಅಪ್ರಾಪ್ತ ಬಾಲಕಿಯರ ವಿಡಿಯೋ ಮತ್ತು ಫೋಟೋ ಕ್ಲಿಕ್ಕಿಸಿದ ಆರೋಪದ ಮೇಲೆ ಕೋಲಾರ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ (46) ವಿರುದ್ಧ ಪೋಕ್ಸೋ ಮತ್ತು ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಈ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದ್ದು, ಪ್ರಕರಣವನ್ನು ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದೆ.

ಶಿಕ್ಷಕ ಮುನಿಯಪ್ಪ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯರು ಬಟ್ಟೆ ಬದಲಿಸುವಾಗ ಅವರ ವಿಡಿಯೋ ಮತ್ತು ಫೋಟೋ ಕ್ಲಿಕ್ಕಿಸಿದ್ದ ಎಂದು ಆರೋಪಿಸಲಾಗಿದೆ. ಆತನ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಆರೋಪಿ ಮುನಿಯಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆತನ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಈ ವರದಿ ಓದಿದ್ದೀರಾ?: ಮಹಿಳೆಯರ ಮೇಲಿನ ನಿಲ್ಲದ ಶೋಷಣೆ; ಶಿಕ್ಷಣ ಒಂದೇ ಪರಿಹಾರ

Advertisements

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ”ಆಘಾತಕಾರಿ ಸಂಗತಿಯೆಂದರೆ ಆರೋಪಿಯ ಬಳಿ ವಿವಿಧ ಬ್ರಾಂಡ್‌ಗಳ ಐದು ಮೊಬೈಲ್ ಫೋನ್‌ಗಳಿವೆ. ಎಲ್ಲ ಮೊಬೈಲ್‌ಗಳನ್ನು ವಶಪಡಿಸಿಕೊಂಡು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಪ್ರತಿ ಮೊಬೈಲ್ ಫೋನ್‌ನಲ್ಲಿ ಸುಮಾರು 1,000 ಚಿತ್ರಗಳನ್ನು ಮತ್ತು ನೂರಾರು ವೀಡಿಯೊಗಳಿವೆ. ಶಿಕ್ಷಕನಾಗಿರುವ ಆರೋಪಿಯ ಬಳಿ ಐದು ಮೊಬೈಲ್‌ಗಳು ಏಕೆ ಇವೆ? ಅವುಗಳಲ್ಲಿನ ವಿಡಿಯೋಗಳು ಮತ್ತು ಚಿತ್ರಗಳು ಯಾವುವು ಎಂಬುದು ತನಿಖೆಯ ವಿಷಯವಾಗಿದೆ. ವಿಡಿಯೋ ಮತ್ತು ಚಿತ್ರಗಳ ಮಾಹಿತಿಯು ಸಂಪೂರ್ಣ ತನಿಖೆಯಿಂದ ಮಾತ್ರವೇ ಹೊರಬರಲು ಸಾಧ್ಯ” ಎಂದು ಹೇಳಿದೆ.

“ದೂರು, ತನಿಖೆಯ ವೇಳೆ ದಾಖಲಾದ ಆರೋಪಿಯ ಹೇಳಿಕೆಗಳು ಮತ್ತು ಎಫ್‌ಎಸ್‌ಎಲ್ ವರದಿಗಳನ್ನು ಗಮನಿಸಿದರೆ, ಆತನ ಕೃತ್ಯವು ಭಯಾನಕವಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X