ಕೋಲಾರ | ಉತ್ತಮ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ : ನಸೀರ್ ಅಹಮದ್

Date:

Advertisements

ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಜ್ಞಾನ ಸಂಪತ್ತನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸಲಹೆ ನೀಡಿದರು.

ಕೋಲಾರ ನಗರದ ಮಹಿಳಾ ಸಮಾಜ ಕಾಲೇಜಿನಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಓದಲು ಪೂರಕವಾದ ವಾತಾವರಣ ಇರಲಿಲ್ಲ. ಪ್ರಸ್ತುತ ಕಣ್ಣು ಮುಂದೆ ತಂತ್ರಜ್ಞಾನವನ್ನು ನೋಡಬಹುದಾದ ಸಂದರ್ಭದಲ್ಲಿ ನಾವು ಇದ್ದೇವೆ. ಬೇರೆ ಬೇರೆ ದೇಶಗಳಲ್ಲಿ ನಡೆಯುವ ವಿಚಾರಗಳನ್ನು ನೋಡಬಹುದು. ಮೊದಲು ಅಲ್ಲಿಗೆ ಹೋಗಬೇಕಾಗಿತ್ತು. ಇವತ್ತು ಇಲ್ಲೇ ಅಂತಹ ಅವಕಾಶಗಳು ಇವೆ. ಕಾಲೇಜುಗಳಲ್ಲಿ ಹೊಸ ಹೊಸ ಕೋರ್ಸ್ ಗಳ ಜೊತೆಗೆ ಸೌಲಭ್ಯಗಳನ್ನು ಕೊಡುವ ಕೆಲಸ ನಡೆಯುತ್ತಿದೆ ಎಂದರು.

ಹಿಂದೆ ಕೋಲಾರ ಜಿಲ್ಲೆ ಎಂದರೆ ಸಿವಿಲ್ ಸರ್ವಿಸ್ ಹುದ್ದೆಗಳ ತವರು ಮನೆಯಾಗಿತ್ತು. ಎಲ್ಲಾ ಇಲಾಖೆಗಳಲ್ಲಿ ಜಿಲ್ಲೆಯ ಅಧಿಕಾರಿ ವರ್ಗ ಇತ್ತು. ಅಂತಹ ಸಂದರ್ಭ ಮತ್ತೆ ಬರಬೇಕಾದರೆ ನೀವು ಎಲ್ಲರೂ ಶಿಸ್ತುನಿಂದ ಕಲಿಯಬೇಕು. ಸಾಧನೆ ಮಾಡುವವರು ನಿಮ್ಮಲ್ಲಿ ಸಹ ಇದ್ದಾರೆ. ಆದರೆ ಸಾಧಿಸುವ ಛಲ ಬರಬೇಕಾಗಿದೆ. ಕಾಲೇಜುಗಳಲ್ಲಿ ಹೆಚ್ಚಾಗಿ ಕೌಶಲ್ಯಕ್ಕೆ ಸಂಬಂಧಿಸಿದ ತರಬೇತಿ ಕೋರ್ಸುಗಳನ್ನು ತೆರೆದು ಓದಿನ ನಂತರ ನೇರವಾಗಿ ಉದ್ಯೋಗ ಸಿಗುವಂತಾಗಬೇಕು ಎಂದು ನಸೀರ್ ಅಹಮದ್ ಹೇಳಿದರು.

Advertisements

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ವಿಧ್ಯಾರ್ಥಿಗಳೇ ದೇಶದ ಆಸ್ತಿಯಾಗಿದ್ದಾರೆm ಗುರುಗಳ ಮಾರ್ಗದರ್ಶನದಲ್ಲಿ ನೀವು ಎಲ್ಲರ ಒಳ್ಳೆಯ ಹೆಸರು ಗಳಿಸಬೇಕು. ಸಾಧನೆ ಎಲ್ಲರೂ ಮಾಡಬಹುದು. ಅದಕ್ಕೆ ಪರಿಶ್ರಮ ಮುಖ್ಯ. ಸಾಧನೆ ಮಾಡಿದಾಗ ನಿಮ್ಮ ತಂದೆ ತಾಯಿಯ ಜೊತೆಗೆ ವಿದ್ಯೆ ಕಲಿಸಿದ ಗುರುಗಳಿಗೂ ಗೌರವ ಸಿಗುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಶಿಕ್ಷಕರು ಸಹ ದೇಶದ ಪ್ರಥಮ ಪ್ರಜೆಯಾಗಬಹುದು ಎಂಬುದನ್ನು ಸರ್ವಪಲ್ಲಿ ರಾಧಾಕೃಷ್ಣನ್ ತೋರಿಸಿದ್ದಾರೆ. ಅವರ ನಡುವಳಿಕೆ, ವ್ಯಕ್ತಿತ್ವ ಮತ್ತು ಸಾಧನೆ ನಮಗೆ ಸ್ಪೂರ್ತಿಯಾಗಬೇಕು. ಸಾಧನೆ ಮಾಡಿದ ಮಹನೀಯರ ದಾರಿಯಲ್ಲಿ ನಡೆದಾಗ ನಮಗೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿನಿಮಾ ನಿರ್ಮಾಣ ಸಂಸ್ಥೆಗಳಲ್ಲೂ ಲೈಂಗಿಕ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿಗಳು ಇರಲಿ

ಕಾರ್ಯಕ್ರಮದಲ್ಲಿ ಮಹಿಳಾ ಸಮಾಜ ಆಡಳಿತಾಧಿಕಾರಿ ಎಂ.ನವೀನಾ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಸದಸ್ಯರಾದ ರಾಕೇಶ್, ಅಂಬರೀಷ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ಜೈದೀಪ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಮುಖಂಡರಾದ ಗಂಗಣ್ಣ, ಕುರಿಗಳ ರಮೇಶ್ ಅಬ್ದುಲ್ ಖಯ್ಯೂಂ, ಮಹಿಳಾ ಸಮಾಜ ಕಾಲೇಜಿನ ಕಾರ್ಯದರ್ಶಿ ಎಂ.ನಂದನಾ, ಉಪಾಧ್ಯಕ್ಷೆ ಲಕ್ಷ್ಮೀ ಚಂದ್ರಪ್ಪ, ಖಜಾಂಚಿ ಪದ್ಮ, ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀನಿವಾಸ್ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X