ಶಿವಮೊಗ್ಗ | ಸಮಸ್ಯೆಗಳ ಆಗರವಾಗಿದೆ ತೇವರೇಚಟ್ನಳ್ಳಿ ವಾರ್ಡ್‌; ಅಳಲು ಕೇಳುವವರೇ ಇಲ್ಲ

Date:

Advertisements

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ತೇವರೇಚಟ್ನಳ್ಳಿಯ ಸೇತುವೆ ನಿರ್ಮಾಣವಾಗಿ ನಾಲ್ಕೇ ವರ್ಷಕ್ಕೆ ಶಿಥಿಲಗೊಂಡಿದೆ. ಸೇತುವೆಯ  ತಡೆಗೋಡೆಗಳು ಬಿರುಕು ಬಿಟ್ಟಿವೆ. ಸೇತುವೆ ಯಾವಾಗ ಕುಸಿಯಾತ್ತದೋ ಎಂಬ ಆತಂಕದಲ್ಲೇ ಸಾರ್ವಜನಿಕರು ಸೇತುವೆಯನ್ನು ಬಳಸುತ್ತಿದ್ದಾರೆ.

ಸೇತುವೆಯು ತೇವರೇಚಟ್ನಳ್ಳಿಯಿಂದ ರಾಗಿಗುಡ್ಡ, ನವುಲೇ ಹಾಗೂ ಮುತ್ತೋಡ ಗ್ರಾಮಗಳಿಗೆ ಸಂಪರ್ಕಕೊಂಡಿಯಾಗಿದೆ. ಸೇತುವೆಗೆ ತೀಕ್ಷ್ಣ ತಿರುವಿದ್ದು, ಗುಂಡಿಗಳೂ ಬಿದ್ದಿವೆ. ರಾತ್ರಿ ವೇಳೆಯಲ್ಲಿ ಸೇತುವೆಯ ರಸ್ತೆ ಸರಿಯಾಗಿ ಕಾಣಿಸುವುದೇ ಕಷ್ಟವಾಗಿದೆ. ಸೇತುವೆ ಬದಿಗಳಲ್ಲಿ ವಿದ್ಯುತ್ ದೀಪಗಳಾಗಲೀ, ಸೂಚನಾ ಫಲಕಗಳಾಗಲಿ ಹಾಕಲಾಗಿಲ್ಲ. ರಾತ್ರಿ ವೇಳೆ ಸೇತುವೆ ಮೇಲೆ ಅಪಘಾತವಾಗುವ ಭಯ ಜನರಲ್ಲಿ ಕಾಡುತ್ತಿದೆ.

ತೇವರೇಚಟ್ನಳ್ಳಿಯಲ್ಲಿರುವ ಪದವಿ ಪೂರ್ವ ಕಾಲೇಜಿಗೆ ದಿನನಿತ್ಯ ಕಾಲೇಜು ಬಸ್‌ಗಳು ಓಡಾಡುತ್ತವೆ. ಒಂದು ಬದಿಯಿಂದ 4 ಚಕ್ರದ ವಾಹನ ಸೇತುವೆ ಮೇಲೆ ಬಂದರೆ, ಮತ್ತೊಂದು ಬದಿಯಿಂದ ಬರುವ ವಾಹನಕ್ಕೆ ಜಾಗವಿರುವುದಿಲ್ಲ.

Advertisements

ತೆರೆ 1

ಸೇತುವೆ ಕೆಳಗಿರುವ ನಾಲೆಯೂ ಗೆಬ್ಬೆದ್ದು ನಾರುತ್ತಿದೆ. ಶೌಚಾಲಯದ ಕೊಳಕು ನೀರು, ಕಸ ಕಡ್ಡಿ ತ್ಯಾಜ್ಯಗಳಿಂದ ತುಂಬಿ ಕೊಳಚೆ ಗುಂಡಿಯಂತಾಗಿದೆ. ಆದರೂ, ಪಾಲಿಕೆ ಅಧಿಕಾರಿಗಳು ಅದನ್ನು ಸ್ವಚ್ಛಗೊಳಿಸಲು ಮುಂದಾಗಿಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೇವರೇಚಟ್ನಳ್ಳಿ ವಾರ್ಡ್‌ನಲ್ಲಿನ ಚರಂಡಿ ನೀರು ನಿಂತಲ್ಲೇ ನಿಂತಿದೆ. ಚರಂಡಿಗಳು ಸ್ವಚ್ಛಗೊಳಿಸಿಲ್ಲ. ರಾಜಕಾಲುವೆಗೆ ಕಲುಷಿತ ನೀರು ಸೇರುವ ಹಾಗೆ ವ್ಯವಸ್ಥೆ ಮಾಡಿಲ್ಲ. ನಾಲೆ ಕೊಳಚೆಯಾಗಿರುವ ಕಾರಣ, ಇಲ್ಲಿನ ನಿವಾಸಿಗಳಿಗೆ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಭೀತಿಯಲ್ಲಿ ಎದುರಾಗಿದೆ. ಮಹಾನಗರ ಪಾಲಿಕೆ ಸದಸ್ಯರು ವಾರ್ಡ್‌ಗೆ ಬರುವುದೇ ಇಲ್ಲ. ಸಮಸ್ಯೆಗಳ ಬಗ್ಗೆ ಗಮನ ಕೊಡುತ್ತಿಲ್ಲ.  ಏನು ನೋಡುತ್ತಿಲ್ಲ, ಸರಿಪಡಿಸುತ್ತಿಲ್ಲ ಎಂದು ದೂರುತ್ತಿದ್ದಾರೆ.

ಸತತವಾಗಿ 3 ಬಾರಿ ಕಾರ್ಪೊರೇಟರ್‌ ಆಗಿರವು ಎಚ್.ಸಿ ಯೋಗೇಶ್ ಅವರು ಕೂಡ ಸಮಸ್ಯೆ ಬಗ್ಗೆ ಗಮನ ಹರಿಸಿಲ್ಲ ಎಂದು ಕಿಡಿಕಾರಿದ್ದಾರೆ.

ಈದಿನ.ಕಾಮ್‌ ಜೊತೆ ಮಾತನಾಡಿದ ಕಾರ್ಪೊರೇಟರ್ ಎಚ್.ಸಿ ಯೋಗೇಶ್ ಅವರು ವಿಷಯದ ಬಗ್ಗೆ ಮಾಹಿತಿ ಪಡೆದುಕೊಂಡು ತಿಳಿಸುತ್ತೇನೆ ಎಂದಿರುತ್ತಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಈ.ದಿನ.ಕಾಮ್ ಜೊತೆ ಮಾತನಾಡಿ, ಸೇತುವೆ ಪಾಲಿಕೆ ವ್ಯಾಪ್ತಿಯಲ್ಲಿ ಬರುವುದಿಲ್ಲ. ಕಾಲುವೆಗಳಿಗೆ ಶೌಚಾಲಯದ ನೀರು ಹಾಗೂ ಕಸ ಕಡ್ಡಿ ತ್ಯಾಜ್ಯ ಸೇರದಂತೆ ತಡೆಗಟ್ಟಲು ಒಳಚರಂಡಿ ಮತ್ತು ನೀರಾವರಿ ಇಲಾಖೆ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇವೆ” ಎಂದು ತಿಳಿಸಿದ್ದಾರೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X