ಬಿಜೆಪಿ ಬದಲಿಸಿದ್ದ ಪಠ್ಯಗಳನ್ನು ಕಾಂಗ್ರೆಸ್‌ ತೆಗೆಯಬೇಕು: ಕುಂ.ವೀ

Date:

  • ಇಲ್ಲಿಯವರೆಗೆ 16 ಬೆದರಿಕೆ ಪತ್ರ ಬಂದಿವೆ, ಲೇಖಕನಿಗೆ ಬೆದರಿಕೆ ಪತ್ರಗಳು ಪ್ರೇಮಪತ್ರಗಳಂತೆ
  • ಭಾರತೀಯತೆ, ಸಂಸ್ಕೃತಿ ಪಠ್ಯಕ್ರಮ ಎಂದು ಸುನೀಲ್ ಕುಮಾರ್ ಹೇಳಿರುವುದು ಅಪಕ್ವ ಹೇಳಿಕೆ

ಸರ್ಕಾರಗಳು ಬಂದಾಗ ಶಾಲಾ ಪಠ್ಯಗಳು ಬದಲಾಗುತ್ತವೆ, ಈ ಹಿಂದೆ ಬಿಜೆಪಿ ನೇತೃತ್ವದ ಸರ್ಕಾರ ಮಾಡಿದ್ದ ಪಠ್ಯವನ್ನು ಕಾಂಗ್ರೆಸ್ ಸರ್ಕಾರ ತೆಗೆಯಬೇಕು ಎಂದು ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮಾಡಿದ್ದ ಪಠ್ಯ 500 ವರ್ಷಗಳ ಹಿಂದಕ್ಕೆ ಕರೆದುಕೊಂಡು ಹೋಗಿದೆ, ಅವರು ರೂಪಿಸಿದ್ದ ಪಠ್ಯದಲ್ಲಿ ಮಕ್ಕಳ ಭವಿಷ್ಯ ಇರಲಿಲ್ಲ, ವೈಚಾರಿಕತೆ ಇರಲಿಲ್ಲ, ಪಠ್ಯ ರಚನೆ ಸಮಿತಿಗೆ ಅಪಕ್ವ ರೋಹಿತ್ ಚಕ್ರತೀರ್ಥ ಅಧ್ಯಕ್ಷನನ್ನಾಗಿ ಮಾಡಿದ್ದು, ನಾಗೇಶ್ ಮಾಡಿದ ಮೊದಲ ತಪ್ಪು ಎಂದು ಕಿಡಿಕಾರಿದರು.

ಹೊಸ ಸರ್ಕಾರ ಬಂದಿದ್ದು, ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯವನ್ನೇ ಜಾರಿ ಮಾಡಬೇಕು. ಸಾವರ್ಕರ್, ಹೆಡಗೆವಾರ್‌ ಎಂಬ ಹುಸಿ ದೇಶಭಕ್ತರ ಪಠ್ಯವನ್ನು ತೆಗೆಯಬೇಕು. ಯಾವ ಪಠ್ಯವನ್ನು ಬೋಧಿಸಬೇಕೆಂದು ಸರ್ಕಾರ ಕೂಡಲೇ ಸುತ್ತೋಲೆ ಹೊರಡಿಸಬೇಕು ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭಾರತೀಯತೆ, ಸಂಸ್ಕೃತಿ ಪಠ್ಯಕ್ರಮ ಎಂದು ಸುನೀಲ್ ಕುಮಾರ್ ಹೇಳಿರುವುದು ಅಪಕ್ವ ಹೇಳಿಕೆ. ಭಾರತೀಯತೆ ಎಂದರೆ ಸಮಗ್ರತೆ, ಎಲ್ಲರನ್ನೂ ಒಳಗೊಳ್ಳುವ ಸಮಗ್ರತೆ. ಹಿಂದೂ, ಮುಸ್ಲಿಂ, ಜೈನ, ಕ್ರೈಸ್ತ, ಪಾರ್ಸಿ ಎಲ್ಲರನ್ನೂ ಒಳಗೊಳ್ಳಬೇಕು, ಆರ್ ಎಸ್ ಎಸ್ ಪ್ರಣೀತ ಭಾರತೀಯತೆಯಲ್ಲ. ಶೇ. 1.5ರಷ್ಟು ಜನರ ಭಾರತೀಯತೆ ಅಲ್ಲ ಎಂದು ತಿರುಗೇಟು ನೀಡಿದರು.

ಈ ಹಿಂದೆ ನಡೆಸಿದ್ದ ಹಿಂದುಳಿದ ವರ್ಗಗಳ ಆರ್ಥಿಕ, ಸಾಮಾಜಿಕ ಗಣತಿ ವರದಿ ಬಹಿರಂಗವಾಗಬೇಕು ಮತ್ತು ಜಾರಿಯಾಗಬೇಕು. ಬ್ರಾಹ್ಮಣ ಸೇರಿದಂತೆ ಎಲ್ಲ ವರ್ಗಗಳಲ್ಲಿ ಯಾರು ಹಿಂದುಳಿದವರೋ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ, ಅನುದಾನ ಕೊಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಔರಾದ ಶಾಸಕರ ಊರಿನಲ್ಲೇ ಇಲ್ಲ ಖಾಯಂ ಶಿಕ್ಷಕರು

ಕಳೆದ 15 ದಿನಗಳ ಹಿಂದೆಯೂ ನನಗೆ ಬೆದರಿಕೆ ಪತ್ರ ಬಂದಿದೆ. ಯಾವ ಲೇಖಕನಿಗೆ ಹೆಚ್ಚು ಬೆದರಿಕೆ ಪತ್ರ ಬರುವುದೋ ಆತನೇ ನಿಜವಾದ ಲೇಖಕ. ಲೇಖಕನಿಗೆ ಬೆದರಿಕೆ ಪತ್ರಗಳು ಪ್ರೇಮಪತ್ರಗಳು ಇದ್ದಂತೆ ಎಂದುಕೊಂಡಿದ್ದೇನೆ, ಮೋದಿಯನ್ನು ಅವಹೇಳನ ಮಾಡುತ್ತೀರಿ, ಮುಸ್ಲಿಮರನ್ನು ಒಲೈಸುತ್ತೀರಿ ಎಂದು ಬೆದರಿಕೆ ಪತ್ರಗಳು ಬರುತ್ತಿದ್ದು, ಒಟ್ಟು ನನಗೆ 16 ಪತ್ರಗಳು ಬಂದಿದೆ ಎಂದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಸಂಬಂಧ ಮಾತನಾಡಿ, ಗ್ಯಾರಂಟಿ ಯೋಜನೆಗಳು ಬಡವರ ಪರವಾದ ಯೋಜನೆಗಳು, ಬಡವರಿಗೆ 10 ಕೆಜಿ ಅಕ್ಕಿ ಕೊಟ್ಟರೇ ಇವರಪ್ಪನ ಗಂಟು ಹೋಗೋದೇನೂ..? ಬಿಜೆಪಿ ಅವರು ಲೋಕಸಭೆಯಲ್ಲಿ ಗೆಲ್ಲಬೇಕಾದರೆ ಗ್ಯಾರಂಟಿ ಯೋಜನೆ ಬೆಂಬಲಿಸಬೇಕು ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...