ಅನಧಿಕೃತ ಶಾಲೆಗಳನ್ನು ಆ. 14ರೊಳಗಾಗಿ ಮುಚ್ಚವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಸೂಚನೆ

Date:

Advertisements

ಕರ್ನಾಟಕದಲ್ಲಿ ನೋಂದಣಿ ಆಗದೆ ಅನಧಿಕೃತವಾಗಿ ನಡೆಯುತ್ತಿರುವ ಶಾಲೆಗಳನ್ನು ಆ. 14ರೊಳಗಾಗಿ ಮುಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.

ಶಿಕ್ಷಣ ಕಾಯಿದೆ-1983 ಸೆಕ್ಷನ್-30 ಮತ್ತು 31ರಂತೆ ನೋಂದಣಿ ಅನುಮತಿಯನ್ನು ಪಡೆಯದ ಶಾಲೆಯನ್ನು ಮುಚ್ಚಿಸಲು ಆದೇಶಿಸಿದ್ದಾರೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಜಿಲ್ಲಾ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದು, “ರಾಜ್ಯದಲ್ಲಿನ ಕೆಲವು ಖಾಸಗಿ ಶಾಲಾ ಆಡಳಿತ ಮಂಡಳಿಗಳು ಕರ್ನಾಟಕ ಶಿಕ್ಷಣ ಕಾಯಿದೆ-1983 ಸೆಕ್ಷನ್-30, 31ರ ಪ್ರಕಾರ ಇಲಾಖಾ ವತಿಯಿಂದ ಯಾವುದೇ ನೋಂದಣಿ ಪಡೆಯದೆ ಅನಧಿಕೃತವಾಗಿ ಶಾಲೆ ನಡೆಸುವುದು ಕಾನೂನು ಬಾಹಿರವಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

Advertisements

“ನಿಮ್ಮ ಜಿಲ್ಲೆಯಲ್ಲಿ ನೋಂದಣಿ ಪಡೆಯದೆ ಅನಧಿಕೃತವಾಗಿ ಶಾಲೆ ನಡೆಸುತ್ತಿರುವುದು, ನೋಂದಣಿ ಇಲ್ಲದೆ ಉನ್ನತೀಕರಿಸಿದ ತರಗತಿ ನಡೆಸುತ್ತಿರುವುದು, ಅನಧಿಕೃತ ಪಠ್ಯಕ್ರಮ ಮತ್ತು ಅನಧಿಕೃತ ಪಠ್ಯಪುಸ್ತಕ ಬೋಧಿಸುತ್ತಿರುವುದು ಹಾಗೂ ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜಿಸಿದ ನಂತರವೂ ರಾಜ್ಯ ಪಠ್ಯಕ್ರಮದ ಶಾಲೆ ನಡೆಸುತ್ತಿರುವುದು ಅತ್ಯಂತ ಆಕ್ಷೇಪಾರ್ಹ ಮತ್ತು ನಿಯಮಬಾಹಿರವಾಗಿರುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆ ಬಾಡಿಗೆ ಹಣ ಕೇಳಿದಕ್ಕೆ ಚಾಕುವಿನಿಂದ ಹಲ್ಲೆ

“ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ನೋಂದಣಿ ಪಡೆಯದ ನಡೆಯುತ್ತಿರುವ ಶಾಲೆಗಳು ಯಾವುದು ಇರುವುದಿಲ್ಲವೆಂದು ದೃಢೀಕರಣ ನೀಡಬೇಕು. 2023-24ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಾರಂಭವಾಗುವ ಮುನ್ನ ತಕ್ಷಣ ನಿಯಮಾನುಸಾರ ಕ್ರಮವಹಿಸಬೇಕು. 45 ದಿನಗಳ ಒಳಗಾಗಿ ಮಕ್ಕಳ ದಾಖಲಾತಿಗಳನ್ನು ನೀಡಬೇಕು. ಈ ಕ್ರಮ ಮುಗಿದ ನಂತರದಲ್ಲಿ ಶಾಲೆ ಮುಂದುವರೆಸಿದ್ದಲ್ಲಿ ಅಂತಹ ಶಾಲೆಗಳಿಗೆ ಪೋಷಕರು ಮಕ್ಕಳನ್ನು ದಾಖಲಿಸದಂತೆ ಸಾರ್ವಜನಿಕವಾಗಿ ಪ್ರಕಟಣೆ ಪ್ರಕಟಿಸಬೇಕು” ಎಂದು ತಿಳಿಸಿದ್ದಾರೆ.

ಸರ್ಕಾರ

“ಸಾರ್ವಜನಿಕರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಣಿ ಪಡೆಯದ ಅನಧಿಕೃತವಾಗಿ ಶಾಲೆಗಳು ನಡೆಯುತ್ತಿವೆ ಎಂದು ದೂರು ಬಂದಲ್ಲಿ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದುʼ’ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X