ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ತನಿಖೆಗೆ ಸಮಿತಿ ರಚನೆ

Date:

  • ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರಬರೆದಿದ್ದ ಶಾಸಕ ಸಿ ಪುಟ್ಟರಂಗಶೆಟ್ಟಿ
  • ಸಿಮ್ಸ್‌ ನಿರ್ದೇಶಕರ ಸಂಜೀವ್‌ ರೆಡ್ಡಿ ಮುಖಕ್ಕೆ ಮಸಿ ಬಳಿದಿದ್ದ ಕಾರ್ಯಕರ್ತರು

ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಚಾಮರಾಜನಗರ ವೈದ್ಯಕೀಯ ಶಿಕ್ಷಣ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ. ಜಿ.ಎಂ ಸಂಜೀವ್ ವಿರುದ್ಧ ತನಿಖೆ ನಡೆಸಲು ಸಮಿತಿ ರಚಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶಿಸಿದೆ.

ಡೀನ್‌ ಅವರನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಕೋರಿ ಸ್ಥಳೀಯ ಶಾಸಕ ಸಿ ಪುಟ್ಟರಂಗಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಪತ್ರ ಬರೆದಿದ್ದರು.

ಇದಕ್ಕೆ ಸ್ಪಂದಿಸಿದ್ದ ಸಿ.ಎಂ ಸಿದ್ದರಾಮಯ್ಯ, ಆರೋಪಗಳ ಬಗ್ಗೆ ಪರಿಶೀಲಿಸಿ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ ಅವರಿಗೆ ಸೂಚಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಚಾಮರಾಜನಗರ

ತಕ್ಷಣವೇ ತನಿಖೆಗೆ ಕ್ರಮ ವಹಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರಿಗೆ ವಂದಿತ ಶರ್ಮಾ ಸೂಚಿಸಿದ್ದರು. ನವೀನ್‌ ಸಿಂಗ್ ಅವರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಡಾ. ರವಿ ಮತ್ತು ಮುಖ್ಯ ಆಡಳಿತಾಧಿಕಾರಿ ಕೆ ಎ ಉಮಾ ಅವರನ್ನೊಳಗೊಂಡ ತನಿಖಾ ಸಮಿತಿ ರಚಿಸಿದ್ದಾರೆ.

“ಸಮಿತಿಯು ಚಾಮರಾಜನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಸಿಮ್ಸ್‌ಗೆ ತಕ್ಷಣವೇ ಭೇಟಿ ನೀಡಿ ಪರಿಶೀಲಿಸಬೇಕು. ಕೂಡಲೇ ವರದಿ ನೀಡಬೇಕು” ಎಂದು ನವೀನ್ ರಾಜ್ ಸಿಂಗ್ ಆದೇಶದಲ್ಲಿ ಹೇಳಿದ್ದಾರೆ.

ಘಟನೆ ಹಿನ್ನೆಲೆ

“ಸಿಮ್ಸ್‌ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ. ಗಿರೀಶ್ ಮತ್ತು ಡಾ. ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್‌ನ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ.ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ದೂರು-ಪ್ರತಿದೂರು ದಾಖಲು

ದೂರಿನ ಪ್ರತಿಯು ಅಂಬೇಡ್ಕರ್‌ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಬಳಿಕ ಸಿಮ್ಸ್‌ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್‌ ನಿರ್ದೇಶಕರ ಡಾ. ಸಂಜೀವ್‌ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು. ಬಳಿಕ ಎರಡೂ ಕಡೆಯಿಂದ ದೂರು ಪ್ರತಿದೂರು ದಾಖಲಾಗಿತ್ತು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂವಿಧಾನ, ಪ್ರಜಾಪ್ರಭುತ್ವ ಉಳುವಿಗಾಗಿ ಕಾಂಗ್ರೆಸ್‌ಗೆ ಬೆಂಬಲ; ದಸಂಸ ತೀರ್ಮಾನ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳುವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ...

ತುಮಕೂರು | ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ: ಡಾ. ಜಿ ಪರಮೇಶ್ವರ್

ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...