ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರವು ವಿಶೇಷ ಗಮನಹರಿಸಲಿ: ಜಮಾಅತೆ ಇಸ್ಲಾಮೀ ಹಿಂದ್ ಆಗ್ರಹ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ತಮಜಲಿನಲ್ಲಿ ಅಬ್ದುಲ್ ರಹ್ಮಾನ್ ಎಂಬ ಯುವಕನ ಹತ್ಯೆಯನ್ನು ಜಮಾಅತ್ ಇಸ್ಲಾಮೀ ಹಿಂದ್, ಕರ್ನಾಟಕವು ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ. ಮುಹಮ್ಮದ್ ಸಾದ್ ಬೆಲ್ಗಾಮಿ, “ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರವು ವಿಶೇಷ ಗಮನಹರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಜನತೆಯು ಯಾವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡುವಂತೆ ನಾವು ವಿನಂತಿಸುತ್ತೇವೆ. ಕರಾವಳಿ ಪ್ರದೇಶದಲ್ಲಿ ದ್ವೇಷ ಭಾಷಣ, ಪ್ರತೀಕಾರದ ಕೊಲೆಗಳು, ಮತ್ತು ಪ್ರಚೋದನಕಾರಿ ರಾಜಕಾರಣವು ಸಾಮಾನ್ಯವಾಗಿದ್ದು, ಇವುಗಳನ್ನು ವ್ಯವಸ್ಥಿತವಾಗಿ ಪೋಷಿಸಲಾಗುತ್ತಿದೆ. ಕೊಲೆಗಾರನಿಗೆ ತಾನು ಯಾಕೆ ಕೊಲೆ ಮಾಡುತ್ತಿದ್ದೇನೆ ಮತ್ತು ಕೊಲೆಯಾಗುವವನಿಗೆ ತಾನು ಯಾಕೆ ಕೊಲೆಯಾಗುತ್ತಿದ್ದೇನೆ ಎಂಬುದೇ ತಿಳಿಯದ ತಲೆಮಾರು ಇಲ್ಲಿ ಸೃಷ್ಟಿಯಾಗುತ್ತಿರುವುದು ದುರಂತವಾಗಿದೆ ಎಂದು ತಿಳಿಸಿದ್ದಾರೆ.

Advertisements

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸರ್ಕಾರವು ವಿಶೇಷ ಗಮನಹರಿಸಬೇಕು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಣಕ್ಕಾಗಿ ‘ಕೋಮು ಹಿಂಸೆ ನಿಗ್ರಹ ಕಾರ್ಯಪಡೆ’ ರಚನೆಯ ಸರ್ಕಾರದ ನಿರ್ಧಾರಕ್ಕೆ ಅಬ್ದುಲ್‌ ರಹ್ಮಾನ್ ಕೊಲೆ ದೊಡ್ಡ ಸವಾಲು ಎಸೆದಿದೆ. ಯುವಕರನ್ನು ತಪ್ಪುದಾರಿಗೆ ತಳ್ಳುವ ದ್ವೇಷ ಭಾಷಣಕಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಈ ಅಮಾನವೀಯ ಕೃತ್ಯವನ್ನು ನಡೆಸಿದ ಅಪರಾಧಿಗಳನ್ನು ತಕ್ಷಣ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಜಮಾಅತ್ ಇಸ್ಲಾಮೀ ಹಿಂದ್, ಕರ್ನಾಟಕವು ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X