ಆಶಾ ಕಾರ್ಯಕರ್ತೆಯರಿಗೆ ಗೌರವಧನ, ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ಒತ್ತಾಯ

Date:

Advertisements

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ರಾಜ್ಯ ಸರ್ಕಾರದ ಗೌರವಧನ ಮತ್ತು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಬಿಡುಗಡೆಯಾಗಿಲ್ಲ. ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ನೂತನ ಆಡಳಿತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

“ಕಳೆದ ಮೂರು ನಾಲ್ಕು ತಿಂಗಳುಗಳಿಂದ ಆಶಾ ಕಾರ್ಯಕರ್ತೆಯರು ಬಿರು ಬಿಸಿಲಿನಲ್ಲಿ ನಿಷ್ಠೆಯಿಂದ ಇಲಾಖೆಯ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಸೇವೆಗೆ ವೇತನ ನೀಡದೆ ಇಲಾಖೆ ಅವರನ್ನು ಸಂಕಷ್ಟಕ್ಕೆ ದೂಡಿದೆ. ಒಂಟಿ ಮಹಿಳೆಯರು ಸೇರಿದಂತೆ ಬಹುತೇಕ ಆಶಾ ಕಾರ್ಯಕರ್ತೆಯರು ಇದನ್ನೇ ನಂಬಿ ಬದುಕು ನಡೆಸುತ್ತಿದ್ದಾರೆ. ಆದರೆ, ವೇತನ ಇಲ್ಲದೆ ಜೀವನ ನಡೆಸಲು ಅತ್ಯಂತ ತೊಂದರೆ ಉಂಟಾಗಿದೆ” ಎಂದು  ಸಂಘದ ರಾಜ್ಯ ಕಾರ್ಯದರ್ಶಿ ಡಿ ನಾಗಲಕ್ಷ್ಮಿ ಅವಲತ್ತುಕೊಂಡಿದ್ದಾರೆ.

“ವೇತನ ಬಿಡುಗಡೆ ಮಾಡುವಂತೆ ಕಳೆದ ಒಂದೂವರೆ ತಿಂಗಳಿಂದ ಇಲಾಖೆಯ ಮುಖ್ಯಸ್ಥರಿಗೆ ಹಲವು ಬಾರಿ ಮೌಖಿಕವಾಗಿ ಮತ್ತು ವಿವಿಧ ಸಭೆಗಳಲ್ಲಿ ಮನವಿ ನೀಡಲಾಗಿತ್ತು. ಪ್ರತಿ ಬಾರಿ ಒಂದು ವಾರದಲ್ಲಿ ಗೌರವಧನ – ಪ್ರೋತ್ಸಾಹಧನ ಬಿಡುಗಡೆ ಆಗುವುದೆಂದು ಭರವಸೆಗಳನ್ನು ನೀಡುತ್ತಲೇ ಇದ್ದರು. ಆದರೆ, ಮೂರ್ನಾಲ್ಕು ತಿಂಗಳಿಂದ ಗೌರವಧನ ಬಿಡುಗಡೆ ಆಗಿಲ್ಲ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಪಿಂಚಣಿ ಮೊತ್ತ ಪರಿಷ್ಕರಣೆಗೆ ಒತ್ತಾಯಿಸಿ ಬ್ಯಾಂಕ್ ಪಿಂಚಣಿದಾರರ ಧರಣಿ

“ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಗೌರವಧನ-ಪ್ರೋತ್ಸಾಹಧನ ಬಿಡುಗಡೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

ಸಂಘದ ರಾಜ್ಯಾಧ್ಯಕ್ಷ ಕೆ ಸೋಮಶೇಖರ್‌ ಯಾದಗಿರಿ, ರಾಜ್ಯ ಕಾರ್ಯದರ್ಶಿ ಡಿ ನಾಗಲಕ್ಷ್ಮಿ ಈ ಮೂಲಕ ಪ್ರಕಟಣೆಗೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X