ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಸೂಚನೆ

Date:

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ, ಉತ್ತರ ಒಳನಾಡಿನ ಒಂದೆರಡು ಕಡೆ ಶುಕ್ರವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಉತ್ತರ ಒಳನಾಡಿನಲ್ಲಿ ಬಿರುಗಾಳಿಯಿಂದ ಕೂಡಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ಇರಲಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆ ಮತ್ತು ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 2–3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. 

ಬೆಂಗಳೂರಿನಲ್ಲಿ  ಸಂಜೆ ಅಥವಾ ರಾತ್ರಿಯ ವೇಳೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ತಲುಪಲಿದೆ ಎಂದು ಇಲಾಖೆ ತಿಳಿಸಿದೆ. 

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ; 39% ಕಾಮಗಾರಿ ಪೂರ್ಣ

ಮುಂದಿನ ಐದು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. 

ಗುರುವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಯ ಅವಧಿಯಲ್ಲಿ ಚಿತ್ರದುರ್ಗದ ಬಿ. ದುರ್ಗದಲ್ಲಿ ಗರಿಷ್ಠ (7 ಸೆಂ.ಮೀ.) ಮಳೆಯಾಗಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ (39.8 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ʼಕೈಗಾರಿಕೆ ಆರಂಭಿಸಿ, ಇಲ್ಲವೇ ಭೂಮಿ ಬಿಡಿʼ; ಸಂತ್ರಸ್ತ ರೈತರ ಹೋರಾಟ

ಬಿಎಸ್‌ಎಎಲ್ ಸ್ಟೀಲ್ ಕೈಗಾರಿಕೆಗಾಗಿ 1995 ಹಾಗೂ 1998ರಲ್ಲಿ ಭೂಮಿ ಕಳೆದುಕೊಂಡು ವಂಚನೆಗೊಳಗಾಗಿರುವ...

ಈ ದಿನ ಫಲಶ್ರುತಿ | ಚುಂಚಘಟ್ಟ ಕೆರೆಯ ಸ್ವಚ್ಛತೆಯಲ್ಲಿ ತೊಡಗಿದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನ ಜೆ ಪಿ ನಗರದಲ್ಲಿರುವ ಚುಂಚಘಟ್ಟ ಕೆರೆಯ ದಂಡೆ...

ಧಾರವಾಡ | ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಯುವಕನನ್ನು...

ಚಿತ್ರದುರ್ಗ | ಶೋಷಿತ ಸಮುದಾಯಗಳ ಪ್ರಗತಿಯ ಹರಿಕಾರ ಬಿ ಕೃಷ್ಣಪ್ಪ

ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ...