ಬೀದರ್‌ | ಕಲ್ಯಾಣಕ್ಕೆ ಅಸ್ಮಿತೆ ತಂದುಕೊಟ್ಟ ವಚನಕಾರರು : ವೀರಶೆಟ್ಟಿ ಗಾರಂಪಳ್ಳಿ

Date:

Advertisements

ವಚನಕಾರರು ಕಲ್ಯಾಣಕ್ಕೆ ಸಾಂಸ್ಕೃತಿಕ ಅಸ್ಮಿತೆ ತಂದುಕೊಟ್ಟಿದ್ದಾರೆ. ಖಚಿತ ಆಕರಗಳನ್ನು ಆಧರಿಸಿ ಕಲ್ಯಾಣದ ಚರಿತ್ರೆಯ ಪುನರ್ ಕಟ್ಟುವಿಕೆ ಆಗಬೇಕು ಎಂದು ಕಲಬುರ್ಗಿಯ ವಿಭಾಗೀಯ ಪತ್ರಾಗಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಾ. ವೀರಶೆಟ್ಟಿ ಗಾರಂಪಳ್ಳಿ ಹೇಳಿದರು.

ಬಸಕಲ್ಯಾಣದ ಎಸ್‌ಎಸ್‌ಕೆ ಬಸವೇಶ್ವರ ಸ್ನಾತಕ ಹಾಗೂ ಸ್ನಾತಕೋತ್ತರ ಕಾಲೇಜಿನಲ್ಲಿ ಕಲಬುರ್ಗಿಯ ವಿಭಾಗೀಯ ಪತ್ರಾಗಾರ ಇಲಾಖೆ ಮತ್ತು ಇತಿಹಾಸ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಸವಕಲ್ಯಾಣ ಇತಿಹಾಸ ಮತ್ತು ಸಂಸ್ಕೃತಿ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ʼಪ್ರಭುತ್ವ, ವಾಸ್ತುಶಿಲ್ಪ, ಸಂಸ್ಕೃತಿ ಹಾಗೂ ಹಲವು ಪಂಥಗಳು ಪ್ರವಹಿಸಿದ ಕಲ್ಯಾಣದ ಚರಿತ್ರೆಗೆ ಬಹುತ್ವದ ಆಯಾಮವಿದೆʼ ಎಂದರು.

ನಿವೃತ್ತ ಪ್ರಾಧ್ಯಾಪಕ ಡಾ.ಚಂದ್ರಶೇಖರ ಬಿರಾದಾರ ಮಾತನಾಡಿ, ʼಬಸವಕಲ್ಯಾಣ ಚರಿತ್ರೆಗೆ ಸಂಬಂಧಿಸಿದ ಶಾಸನಗಳು, ಕೃತಿಗಳು ದಾಖಲೆಗಳಾಗಿವೆ. ರಾಷ್ಟ್ರಕೂಟರು ಸೇರಿ ಹಲವು ಅರಸರ, ವಚನಕಾರರ, ಸೂಫಿಗಳಿಂದ ಕಲ್ಯಾಣದ ಅಸ್ತಿತ್ವ ರೂಪುಗೊಂಡಿದೆʼ ಎಂದರು.

Advertisements

ಪ್ರಾಧ್ಯಾಪಕ ಡಾ. ಶಿವಕುಮಾರ ಉಪ್ಪೆ ಮಾತನಾಡಿ, ʼಜಾಗತಿಕ ಚರಿತ್ರೆಗೆ ಮಹತ್ವ ಬರಬೇಕಾದರೆ ಮೊದಲು ಸ್ಥಳೀಯ ಚರಿತ್ರೆಯ ರಚನೆಗೆ ಆದ್ಯತೆಯಿರಲಿ. ಭಾರತದಲ್ಲಿ ಇತಿಹಾಸದ ಬರವಣಿಗೆಗೆ ಆದ್ಯತೆ ನೀಡಿದ ಕಾರಣ ಸ್ಥಳೀಯ ಚರಿತ್ರೆ ದಾಖಲಾಗಿಲ್ಲʼ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಬಸವರಾಜ ಎವಲೆ ಮಾತನಾಡಿ, ʼಬಸವಕಲ್ಯಾಣದ ಇತಿಹಾಸ ಮತ್ತು ಸಂಸ್ಕೃತಿಯ ಕುರಿತು ಹಲವು ದಾಖಲೆಗಳಿವೆ. ಕಲ್ಯಾಣದ ಕುರಿತು ಸಮಗ್ರ ಸಂಗತಿಗಳು ಒಳಗೊಂಡ ಪುಸ್ತಕ ಪ್ರಕಟವಾಗುವ ಅಗತ್ಯವಿದೆ. ವಿದ್ಯಾರ್ಥಿಗಳಲ್ಲಿ ಇತಿಹಾಸ ಪ್ರಜ್ಞೆ ಬೆಳೆಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ದೊಡ್ಡದುʼ ಎಂದರು.

ಇತ್ತೀಚೆಗೆ ಪ್ರಾಧ್ಯಾಪಕರಾಗಿ ಬಡ್ತಿ ಹೊಂದಿದ ಎಸ್‌ಎಸ್‌ಕೆಬಿ ಕಾಲೇಜು ಪ್ರಾಚಾರ್ಯ ಪ್ರೊ. ಬಸವರಾಜ ಎವಲೆ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಚನಗಳಲ್ಲಿ ಸಂವಿಧಾನದ ಆಶಯವಿದೆ : ಎನ್.ಕೆ.ಫಣೀಂದ್ರ

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ಡಾ.ಶಿವಕುಮಾರ ಪಾಟೀಲ, ಪ್ರೊ. ವಿಠೋಬಾ ಡೊಣ್ಣೇಗೌಡರು, ಡಾ. ರಮೇಶ, ಡಾ. ಸುರೇಶ್ ಎಚ್.ಆರ್, ಲಕ್ಷ್ಮೀಬಾಯಿ ಬಂಕೂರ, ಭಾರತಿ ಮಠ, ಭೀಮಾಶಂಕರ ಪೂಜಾರಿ, ಡಾ. ಬಸವರಾಜ ಖಂಡಾಳೆ, ಅಧ್ಯಾಪಕ ಡಾ. ಭೀಮಾಶಂಕರ ಬಿರಾದಾರ ಸೇರಿದಂತೆ ಎಸ್‌ಎಸ್‌ಕೆಬಿ ಕಾಲೇಜು, ಶ್ರೀ ಬಸವೇಶ್ವರ ಪದವಿ ಕಾಲೇಜು, ರಾಜೀವ್ ಗಾಂಧಿ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಶಿವಕುಮಾರ ಕೊಲ್ಲೆ ಸ್ವಾಗತಿಸಿದರು, ಮಹಾದೇವ ದೇಗಾಂವ ನಿರೂಪಿಸಿದರು . ಕಲ್ಯಾಣಪ್ಪಾ ನಾವದಗಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X