ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವಂತಿಲ್ಲ ಎನ್ನುವ ಆದೇಶ ನಮ್ಮದಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements
  • ಕೇಂದ್ರ ಸರ್ಕಾರ ಬಳೆ ತೊಡುವಂತಿಲ್ಲ ಮಾರ್ಗಸೂಚಿ ಹೊರಡಿಸಿದೆ
  • ಕಟೀಲ್ ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ: ಕಾಂಗ್ರೆಸ್‌ ವ್ಯಂಗ್ಯ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆ ತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ ಎಂಬ ಸುದ್ದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಲಗಳೆದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ ಎನ್ನುವ ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ” ಎಂದು ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ.

Advertisements

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ ಎಂದು ಹಲವು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದರಿಂದಾಗಿ ಬಿಸಿಯೂಟ ತಯಾರು ಮಾಡುವ ಅಡುಗೆ ಸಿಬ್ಬಂದಿ, ಮಹಿಳಾ ಹೋರಾಟಗಾರ್ತಿಯರು ಸೇರಿದಂತೆ ಹಿಂದು ಸಂಘಟನೆಗಳಿಂದ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಸ್ಪಷ್ಟನೆ ನೀಡಿದ್ದಾರೆ.

ಧಿಕ್ಕಾರ ಹಾಕಿ ಕಟೀಲ್‌ ಟ್ವೀಟ್

“ಹಿಂದೂಗಳ ವಿರುದ್ಧ ಸದಾ ವಿಷಕಾರುವ ಕಾಂಗ್ರೆಸ್‌ ಸರ್ಕಾರದಿಂದ ಮತ್ತೊಂದು ದ್ವೇಷದ ಆದೇಶ ಹೊರಬಿದ್ದಿದೆ. ʼಬಿಸಿಯೂಟ ಅಡುಗೆದಾರರುʼ ಕೈಗೆ ಬಳೆ ಧರಿಸಬಾರದು ಎಂದಿರುವ ಕಾಂಗ್ರೆಸಿಗರು ಆ ಬಳೆಗಳನ್ನು ತಾವು ಧರಿಸಿಕೊಳ್ಳಬೇಕೆಂದಿದ್ದಾರೆಯೇ? ಎಂಬುದೇ ತಿಳಿಯುತ್ತಿಲ್ಲ. ಹಿಂದೂ ಆಚರಣೆಗಳನ್ನು ಹತ್ತಿಕ್ಕಬೇಕೆಂಬ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರವಿರಲಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್‌ ಮಾಡಿದ್ದರು.

ಕಾಂಗ್ರೆಸ್‌ ತಿರುಗೇಟು

“ತಮ್ಮದೇ ಸರ್ಕಾರ ರೂಪಿಸುವ ನೀತಿ ನಿಯಮಗಳ ಬಗ್ಗೆ ಅರಿವಿಲ್ಲದ ನಳಿನ್ ಕುಮಾರ್ ಅವರು ಸಂಸದ ಸ್ಥಾನಕ್ಕೆ ಅಪಚಾರವಿದ್ದಂತೆ. ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಕೈಗೆ ಉಗುರುಬಣ್ಣ ಹಚ್ಚಬಾರದು, ಬಳೆ ತೊಟ್ಟಿರಬಾರದು ಎಂದು ಕೇಂದ್ರ ಸರ್ಕಾರ 2020ರಲ್ಲೇ ಆದೇಶ ಹೊರಡಿಸಿದೆ. ನಳಿನ್‌ ಕುಮಾರ್‌ ಕಟೀಲ್‌ ಅವರೇ, ಆ ಬಳೆಯನ್ನು ತಾವು ಧರಿಸಿಕೊಳ್ಳಲೆಂದು ಮೋದಿಯವರು ಈ ಆದೇಶ ಹೊರಡಿಸಿದ್ದೇ? ಹಿಂದೂ ಆಚರಣೆಗಳನ್ನು ಹತ್ತಿಕ್ಕಲು ಈ ಕ್ರಮ ಕೈಗೊಂಡರೇ? ಕಟೀಲ್ ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ” ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿ ಕಾಲೆಳೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X