ಹಾಸನ l ಬೇಡಿಕೆ ಈಡೇರಿಸುವ ಭರವಸೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯ

Date:

Advertisements

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಿದ ಅಹೋರಾತ್ರಿ ಧರಣಿ ಇಂದು ಅಂತ್ಯಗೊಂಡಿದೆ.

ಮೊದಲ ದಿನ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೋರಟ ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರವಾಗಿ ಪ್ರತಿಭಟಿಸಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ರಾತ್ರಿಯೂ ಅಹೋರಾತ್ರಿ ಧರಣಿ ನಡೆಸಿದರು.

Screenshot 2024 12 18 19 11 52 95 7352322957d4404136654ef4adb64504

ಬುಧವಾರ ಸರ್ಕಾರಕ್ಕೆ ಗಡುವು ನೀಡಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಪರ ಜಿಲ್ಲಾಧಿಕಾರಿ ಕೆ.ಟಿ ಶಾಂತಲಾ ಮಾಧ್ಯಮದವರಿಗೆ ಮಾಹಿತಿ ತಿಳಿಸಿದರು. ರಾಜ್ಯ ಹಾಗೂ ಸ್ಥಳೀಯ ಮಟ್ಟದಲ್ಲಿ ಆಗುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

Advertisements

ಅಂಗನವಾಡಿ ನೌಕರರ ಹಲವು ಬೇಡಿಕೆಗಳ ಬಗ್ಗೆ ಕಳೆದ ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತದೆ ಆದರೆ ಈವರೆಗೂ ಆಳುವ ಸರ್ಕಾರಗಳು ಕೇವಲ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಬಿ.ಎಂ ಪುಷ್ಪ ಮಾತನಾಡಿದರು.

ಇದನ್ನೂ ಓದಿದ್ದೀರಾ?ಹಾಸನ l ಅಂಗನವಾಡಿ ಅಮ್ಮಂದಿರ ಅಹೋರಾತ್ರಿ ಪ್ರತಿಭಟನೆ

ಈ ವೇಳೆ ಉಪಾಧ್ಯಕ್ಷರಾದ ಶಾರದ,ಕಾಮಾಕ್ಷಿ ರಾಜು, ಹೆಚ್.ಟಿ.ಮೀನಾಕ್ಷಿ, ಕಾರ್ಯದರ್ಶಿಗಳಾದ ಟಿ.ಹೆಚ್  ಜಯಂತಿ, ಕೆ ಪಿ.ವೀಣಾ, ಸುಮಿತ್ರಾ, ವಿಣಾ, ಗೀತಾ, ಜರೀನಾ ಹಾಗೂ ಬಿ ಕೆ.ಸಂಗೀತ, ಪೂರ್ಣಿಮಾ ಇನ್ನಿತರರು ಉಪಸ್ಥಿತಿಯಲಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X