- ಮರಳು ಲಾರಿಗಳಿಗೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ
- ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದ ಲಾರಿ ಮಾಲೀಕ
ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆ ಪಿಎಸ್ಐ ಶೀಲಾ ನ್ಯಾಮನ್, ಕಾನ್ಸ್ಟೇಬಲ್ ಪರಶುರಾಮರೆಡ್ಡಿ ಲೋಕಾಯುಕ್ತ ಬಲೆಗೆ ಸಿಕ್ಕಿದ್ದಾರೆ.
ಅನುಮತಿ ಪಡೆದು ಮೂರು ಲಾರಿ ಮುಖಾಂತರ ಮರಳು ಸಾಗಾಣಿಕೆ ನಡೆಸುತ್ತಿದ್ದ ಇರ್ಷಾದ, ಪ್ರತಿ ಲಾರಿಗೆ ಪ್ರತಿ ತಿಂಗಳು 7 ಸಾವಿರ ರೂಪಾಯಿ ನೀಡುವಂತೆ ಪೊಲೀಸರು ಬೇಡಿಕೆ ಇಟ್ಟಿದ್ದರು.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕೋಳಿ ಸಾಂಬರ್ಗಾಗಿ ಜಗಳ; ಮಗನನ್ನೇ ಹತ್ಯೆಗೈದ ತಂದೆ
ದೂರುದಾರ ಇರ್ಷಾದ ಪಟೇಲ್ನಿಂದ 21 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚ ಸಮೇತ ಪೊಲೀಸರನ್ನು ಹಿಡಿದಿದ್ದಾರೆ. ಬೀದರ್ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.