ಹಾಸನ | ಕುರಾನ್ ಪಠಣ ವಿವಾದದಿಂದ ರಥೋತ್ಸವಕ್ಕೆ ಅಡ್ಡಿಯಾಗದು; ವಿದ್ಯುಲ್ಲತಾ ಸ್ಪಷ್ಟನೆ

Date:

Advertisements
  • ಏಪ್ರಿಲ್ 1ರ ಒಳಗೆ ಗೊಂದಲ ಇತ್ಯರ್ಥವಾಗಲಿದೆ
  • ವಿವಾದದ ಕುರಿತು ಮೇಲಧಿಕಾರಿ ಗಮನಕ್ಕೆ ತರಲಾಗಿದೆ

ಬೇಲೂರು ಚನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಕುರಾನ್ ಪಠಣ ಮಾಡಬಾರದೆಂದು ಹಿಂದುತ್ವವಾದಿ ಕೋಮು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ರಥೋತ್ಸವದಲ್ಲಿ ಕುರಾಣ್‌ ಪಠಣ ಸಂಬಂಧ ಉಂಟಾಗಿರುವ ಗೊಂದಲ ಏಪ್ರಿಲ್ 1ರ ಒಳಗೆ ಇತ್ಯರ್ಥ ಆಗಲಿದೆ. ವಿವಾದರಿಂದ ರಥೋತ್ಸವಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಚನ್ನಕೇಶವ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ವಿದ್ಯುಲ್ಲತಾ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಬೇಲೂರು ಚನ್ನಕೇಶವ ಸ್ವಾಮಿ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಮಾಡುವುದು ಬೇಡ ಎಂದು ಭಜರಂಗದಳ ಕಾರ್ಯಕರ್ತರು ವಾರದ ಹಿಂದೆ ಮನವಿ ಸಲ್ಲಿಸಿದ್ದಾರೆ. ಈ ವಿಷಯವನ್ನು ಮುಜರಾಯಿ ಇಲಾಖೆ ಆಯುಕ್ತರ ಗಮನಕ್ಕೆ ತರಲಾಗಿದೆ” ಎಂದು ತಿಳಿಸಿದ್ದಾರೆ.

“ಸೋಮವಾರ ಆಯುಕ್ತರನ್ನು ನೇರವಾಗಿ ಭೇಟಿ ಮಾಡಿ ಎಲ್ಲವನ್ನೂ ಸೂಕ್ಷ್ಮವಾಗಿ ತಿಳಿಸಿ ಅವರ ಗಮನಕ್ಕೆ ತಂದಿದ್ದೇನೆ. ಆಗಮ ಪಂಡಿತರನ್ನು ನಿಯೋಜನೆ ಮಾಡಿಕೊಡಬೇಕೆಂದು ಕೇಳಿದ್ದೇವೆ” ಎಂದು ಹೇಳಿದ್ದಾರೆ.

Advertisements

“ಇದು ಧಾರ್ಮಿಕ ವಿಚಾರ ಆಗಿರುವುದರಿಂದ ಆಗಮಿಕ ಪಂಡಿತರು ವಿವಾದವ್ನು ಬಗೆಹರಸಿಬೇಕಾಗಿದೆ. ಇದಕ್ಕೆ ಆಯುಕ್ತರು ಒಪ್ಪಿಕೊಂಡಿದ್ದು, ಎರಡು – ಮೂರು ದಿನಗಳಲ್ಲಿ ಆಗಮ ಪಂಡಿತರು ಬರುತ್ತಾರೆ” ಎಂದು ತಿಳಿಸಿದ್ದಾರೆ.

“ಎಲ್ಲರನ್ನೂ ಕರೆದು ಸಭೆ ಮಾಡಿ ವರದಿಯನ್ನು ಆಯುಕ್ತರಿಗೆ ಸಲ್ಲಿಸಲಾಗುವುದು, ವರದಿ ಅಧಾರದ ಮೇಲೆ ಏನು ಆದೇಶ ನೀಡುತ್ತಾರೋ ಅದನ್ನು ಪಾಲನೆ ಮಾಡುತ್ತೇವೆ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಬೇಲೂರು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಬಂದು ಏಳು ವರ್ಷ ಆಗಿದೆ. ಆಗಿನಿಂದಲೂ ಕುರಾನ್ ಪಠಣ ಸಂಪ್ರದಾಯ ನಡೆಯುತ್ತಿದೆ. ಪ್ರಧಾನ ಅರ್ಚಕರು, 40 ವರ್ಷದಿಂದ ಕೆಲಸ ಮಾಡುತ್ತಿರುವವರ ಜೊತೆ ಸಭೆ ಮಾಡಿದ್ದೇವೆ. 2012 ರಿಂದ ಈಚೆಗೆ ರಥದ ಮುಂದೆ ಕುರಾನ್ ಓದಿಸುತ್ತಿದ್ದೇವೆ. ಅದಕ್ಕಿಂತ ಹಿಂದೆ ಈ ಪದ್ಧತಿ ಇರಲಿಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎತ್ತಿನ ಹೊಳೆ ಯೋಜನೆಯಲ್ಲಿ ಅಕ್ರಮ ಆರೋಪ; ಶಾಸಕ ಶಿವಲಿಂಗೇಗೌಡ ವಿರುದ್ಧ ದೂರು

“ದೇವಸ್ಥಾನದ ಮೆಟ್ಟಿಲ ಬಳಿ ನಿಂತು ಕುರಾನ್ ಓದಿ ಹೋಗುತ್ತಿದ್ದರು ಎಂದು ತಿಳಿಸಿದ್ದಾರೆ. ಈ ವಿಷಯವನ್ನು ಆಯುಕ್ತರ ಗಮನಕ್ಕೆ ತಂದಿದ್ದೇವೆ. 1932ರಲ್ಲಿ ಮ್ಯಾನುಯಲ್ ನಲ್ಲಿ ಎರಡು – ಮೂರು ಕಡೆ ಪ್ರಸ್ತಾಪ ಮಾಡಿದ್ದಾರೆ. ರಥದ ಮುಂದೆ ಕುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ. ಆದರೆ, ಆಹ್ವಾನ ನೀಡುವಂತೆ ಪುಸ್ತಕದಲ್ಲಿ ಬರೆದಿದ್ದಾರೆ, ಅದರಂತೆ ಆಹ್ವಾನ ಪತ್ರಿಕೆ ಕಳುಹಿಸುತ್ತೇವೆ, ಅವರು ಬರುತ್ತಾರೆ. ಎರಡು ಆಣಿ, ಅಕ್ಕಿ ಕೊಡುವಂತೆ ಪುಸ್ತಕದಲ್ಲಿ ಉಲ್ಲೇಖ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X