ರಾಜ್ಯದ ಹೆಣ್ಣು ಮಕ್ಕಳಿಗಾಗಿ ಆರಂಭವಾಗಿದ್ದ ‘ಶುಚಿ ಯೋಜನೆ’ ಸ್ಥಗಿತ; ರಾಯಚೂರು ಬಾಲಕಿಯರಿಗೆ ಸಂಕಷ್ಟ

Date:

Advertisements

ಯಾದಗಿರಿ ಜಿಲ್ಲೆಯನ್ನು ಒಳಗೊಂಡಿರುವ ರಾಯಚೂರು ಶೈಕ್ಷಣಿಕ ಜಿಲ್ಲೆಯ ಬಡ ವಿದ್ಯಾರ್ಥಿಗಳಿಗೆ ʼಶುಚಿ ಯೋಜನೆʼ ಅಡಿ ಗುಣಮಟ್ಟದ ಮುಟ್ಟಿನ ಪ್ಯಾಡ್‌ಗಳನ್ನು ಪೂರೈಸುವುದು ಹಾಗೂ ಋತುಚಕ್ರದ ಸಮಯದಲ್ಲಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕಿಯರು ಶಾಲೆಗೆ ಗೈರುಹಾಜರಾಗುವುದನ್ನು ಕಡಿಮೆ ಮಾಡಲು ಆರಂಭಿಸಿದ್ದ ಯೋಜನೆ ಏಕಾಏಕಿ ಸ್ಥಗಿತಗೊಂಡಿದೆ.

ನಾಲ್ಕು ವರ್ಷಗಳ ಅಂತರದ ನಂತರ, ಕರ್ನಾಟಕ ಸರ್ಕಾರವು ಕಳೆದ ಫೆಬ್ರವರಿಯಲ್ಲಿ ‘ಶುಚಿ ಯೋಜನೆʼಯನ್ನು ಪುನರುಜ್ಜೀವನಗೊಳಿಸಿತ್ತು. ಈ ಕಾರ್ಯಕ್ರಮವು ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ಸುಮಾರು 19 ಲಕ್ಷ ಮಂದಿ ಹದಿಹರೆಯದ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ತಲುಪಿಸುವತ್ತ ಗಮನ ಹರಿಸುತ್ತಿದೆ.

“ಕರ್ನಾಟಕ ಆರೋಗ್ಯ ಇಲಾಖೆಯು ನೇರವಾಗಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸಲಿದೆ. ಪ್ರತಿ ಪ್ಯಾಕ್‌ನಲ್ಲಿ 10 ಸ್ಯಾನಿಟರಿ ನ್ಯಾಪ್‌ಕಿನ್‌ಗಳಿವೆ. ಅಲ್ಲದೆ, ವಿದ್ಯಾರ್ಥಿನಿಯರಿಗೆ ಒಂದು ವರ್ಷಕ್ಕೆ ಸಾಕಾಗುವಷ್ಟು ಪ್ಯಾಡ್‌ಗಳನ್ನು ನೀಡಲಾಗುವುದು. ರಾಜ್ಯದಲ್ಲಿ ಹೆಣ್ಣು ಮಕ್ಕಳ ಸ್ವಚ್ಛತೆ ಮತ್ತು ಆರೋಗ್ಯಕ್ಕೆ ಶುಚಿ ಯೋಜನೆ ಮಹತ್ವದ್ದಾಗಿದೆ. ಸಿದ್ದರಾಮಯ್ಯ ಅವರ ಹಿಂದಿನ ಅಧಿಕಾರವಧಿಯಲ್ಲಿ ಪ್ರಾರಂಭಿಸಲಾದ ಈ ಕಾರ್ಯಕ್ರಮವನ್ನು ನಂತರ ಬಿಜೆಪಿ ಆಡಳಿತದಲ್ಲಿ ನಿಲ್ಲಿಸಲಾಗಿತ್ತು. ನಾವು ₹47 ಕೋಟಿ ವೆಚ್ಚದಲ್ಲಿ 19 ಲಕ್ಷ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುತ್ತಿದ್ದೇವೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕುಂಭಮೇಳದಲ್ಲಿ ಕಾಲ್ತುಳಿತ; ನಾಲ್ವರು ಸಾವು, ಒಬ್ಬರಿಗೆ ಗಾಯ

ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಮತ್ತು ಹಿಂದೂಸ್ತಾನ್ ಲೈಫ್ ಕೇರ್ ಲಿಮಿಟೆಡ್‌ನ ಸಿಎಸ್‌ಆರ್ ನಿಧಿಯಿಂದ ಈ ಹಿಂದೆ ₹1.1 ಲಕ್ಷ ಮೌಲ್ಯದ ಪ್ಯಾಡ್ ಸರಬರಾಜು ಮತ್ತು ವಿಲೇವಾರಿ ಯಂತ್ರಗಳನ್ನು ಹೊಂದಿರುವ ಶಾಲೆಗಳಿಗೆ ಬೆಂಬಲ ನೀಡಲಾಗಿತ್ತು. ಈ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲು, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳು ಉಚಿತ ಮುಟ್ಟಿನ ಸಾಮಗ್ರಿಗಳನ್ನು ಪಡೆದವು. ಆದರೆ ಈ ಯೋಜನೆ ಈಗ ಏಕಾಏಕಿ ಸ್ಥಗಿತಗೊಂಡಿರುವುದರಿಂದ ಪ್ರತಿ ಜಿಲ್ಲೆಯ 200ಕ್ಕೂ ಹೆಚ್ಚು ಶಾಲೆಗಳ ವಿದ್ಯಾರ್ಥಿನಿಯರು ಬಟ್ಟೆಯನ್ನು ಬಳಸುವಂತಾಗಿದೆ. ಇದರಿಂದ ವಿದ್ಯಾರ್ಥಿನಿಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

“ಶುಚಿ ಪ್ಯಾಡ್ ವಿತರಣೆಯಲ್ಲಿ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತಿದೆ. ಗ್ರಾಮೀಣ ಕುಟುಂಬಗಳು ಪ್ಯಾಡ್‌ಗಳನ್ನು ಖರೀದಿಸಲು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಉಚಿತ ಪ್ಯಾಡ್‌ಗಳನ್ನು ಪಡೆದ ವಿದ್ಯಾರ್ಥಿಗಳು ಈಗ ಬಟ್ಟೆ ಬಳಕೆಯನ್ನು ಮುಂದುವರೆಸುವಂತಾಗಿದೆ” ಎಂದು ರಾಯಚೂರು ಜಿಲ್ಲೆಯ ಪೋಷಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಸ್ಯಾನಿಟರಿ ಪ್ಯಾಡ್‌ ವಿತರಣೆಯನ್ನು ಸ್ಥಗಿತಗೊಳಿಸಿರುವುದು ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ವಿದ್ಯಾರ್ಥಿನಿಯರ ಮೇಲೆ ಪರಿಣಾಮ ಬೀರಿದೆ. ಶೈಕ್ಷಣಿಕ ವರ್ಷ ಪ್ರಾರಂಭವಾದಾಗಿನಿಂದ ಸರಬರಾಜು ನಿಲ್ಲಿಸಿರುವ ಬಗ್ಗೆ ಬಡವರು ಹಾಗೂ ದಲಿತ ವಿದ್ಯಾರ್ಥಿನಿಯರ ಪೋಷಕರು ಚಿಂತಿತರಾಗಿದ್ದಾರೆ. ಇಂತಹ ಪ್ರಮುಖ ವಿಷಯವನ್ನು ಸರ್ಕಾರ ನಿರ್ಲಕ್ಷಿಸಿರುವುದು ಎದ್ದು ಕಾಣುತ್ತಿದೆ ಎಂಬುದು ಸ್ಥಳೀಯರ ಆರೋಪವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X