ಬೆಳಗಾವಿಯವರೆಗೆ ಸಂಚರಿಸಲಿದೆ ʼವಂದೇ ಭಾರತ್‌’ ರೈಲು

Date:

Advertisements

ಬೆಂಗಳೂರಿನಿಂದ ಧಾರವಾಡವರೆಗೆ ಮಾತ್ರ ಸಂಚರಿಸುತ್ತಿದ್ದ ವಂದೇ ಭಾರತ್ ರೈಲಿನ ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸಲಾಗಿದೆ. ವಂದೇ ಭಾರತ್ ರೈಲು ಮಂಗಳವಾರ ಪ್ರಾಯೋಗಿಕವಾಗಿ ಸಂಚಾರ ನಡೆಸಿದೆ.

ವಂದೇ ಭಾರತ್ ಎ‌ಕ್ಸ್‌ಪ್ರೆಸ್ ಬೆಳಗಾವಿ ನಿಲ್ದಾಣಕ್ಕೆ ಮಧ್ಯಾಹ್ನ 1.30ಕ್ಕೆ ಆಗಮಿಸಿದ ರೈಲು, 2 ಗಂಟೆಗೆ ಹೊರಟಿತು. ಈ ರೈಲು ಬೆಳಗಾವಿ ನಿಲ್ದಾಣ ಪ್ರವೇಶಿಸುತ್ತಿದ್ದಂತೆ, ಬೆಳಗಾವಿ ಭಾಗದ ಜನರು ಸಂತೋಷ ವ್ಯಕ್ತಪಡಿಸಿದರು. ಮೊದಲ ದಿನ ಬೆಳಗಾವಿಗೆ ಆಗಮಿಸಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ವೀಕ್ಷಿಸಿದ ರೈಲು ಪ್ರಯಾಣಿಕರು ಬೆಳಗಾವಿಯಿಂದ ಬೆಂಗಳೂರಿಗೆ‌ ಹೊರಡುವ ಸಮಯ ಮತ್ತು ಪ್ರಯಾಣದ ವೆಚ್ಚದ ಮಾಹಿತಿ‌ ಪಡೆದರು.

ಬೆಳಗಾವಿ ರೈಲ್ವೆ ನಿಲ್ದಾಣದ ವ್ಯವಸ್ಥಾಪಕ ಅನಿಲಕುಮಾರ್‌ ಮಾತನಾಡಿ, “ಈ ರೈಲು ಪ್ರಾಯೋಗಿಕವಾಗಿ ಸಂಚರಿಸಿದೆ. ನಿಯಮಿತವಾಗಿ ಸೇವೆ ಆರಂಭಿಸುವ ದಿನಾಂಕ ಘೋಷಣೆಯಾಗಬೇಕಿದೆ. ಹಾಗಾಗಿ ರೈಲಿನ ಸ್ವಾಗತಕ್ಕಾಗಿ ಇಂದು ಯಾವುದೇ ಕಾರ್ಯಕ್ರಮ ಆಯೋಜಿಸಿಲ್ಲ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ಕುರಿ ಮೇಯಿಸುತ್ತಿದ್ದ ವೃದ್ಧೆಯ ಕಗ್ಗೊಲೆ; ಆರೋಪಿಗಳ ಪತ್ತೆಗೆ ಶೋಧ

“ಬೆಂಗಳೂರಿನಿಂದ ಬೆಳಿಗ್ಗೆ 5.45ಕ್ಕೆ ಹೊರಡಲಿರುವ ರೈಲು(ಸಂಖ್ಯೆ 20661) ಮಧ್ಯಾಹ್ನ 1.30ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ 2ಕ್ಕೆ ಹೊರಡಲಿರುವ ರೈಲು(ಸಂಖ್ಯೆ 20662) ರಾತ್ರಿ 10.10ಕ್ಕೆ ಬೆಂಗಳೂರು ತಲುಪಲಿದೆ” ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈಲ್ವೆ ಜೋನಲ್‌ ಯೂಸರ್ಸ್‌ ಕನ್ಸಲ್ಟೇಟಿವ್‌ ಕಮಿಟಿ ಸದಸ್ಯ ಪ್ರಸಾದ್ ಕುಲಕರ್ಣಿ ಉಪಸ್ಥಿತರಿದ್ಧರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X