ಕೊಡಗು | ಬಾಳುಗೋಡು ಆದಿವಾಸಿಗಳ ನೀರಿನ ದಾಹಕ್ಕೆ ಕೊನೆಗೂ ಮುಕ್ತಿ: ಕೊಳವೆಬಾವಿ ಕೊರೆಸಿದ ಗ್ರಾಮ ಪಂಚಾಯತಿ

Date:

Advertisements

ಕುಡಿಯುವ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳುಗೋಡಿನ ಜನರು ದಶಕಗಳ ಬಳಿಕ ಪರಿಹಾರ ದೊರಕಿದೆ.

ಯಾವುದೇ ಮೂಲಭೂತ ಸೌಕರ್ಯವಿಲ್ಲದೆ ಬದುಕುತ್ತಿದ್ದ ಬಾಳುಗೋಡಿನ ಆದಿವಾಸಿ ಜನರ ಸಮಸ್ಯೆಯ ಬಗ್ಗೆ ಕೊಡಗು ಜಿಲ್ಲಾಡಳಿತಕ್ಕೆ ಪತ್ರಗಳ ಮೂಲಕ ನೈಜ ಹೋರಾಟಗಾರರ ವೇದಿಕೆಯ ಮುಖಂಡ ಹೆಚ್ ಎಂ ವೆಂಕಟೇಶ್ ಮತ್ತವರ ತಂಡ ಮನವಿ ಮಾಡಿತ್ತು. ಆದರೆ, ಇದಕ್ಕೆ ಯಾವುದೇ ರೀತಿಯ ಸಕಾರಾತ್ಮಕ ಸ್ಪಂದನೆ ನೀಡದ ಜಿಲ್ಲಾಡಳಿತದ ವಿರುದ್ಧವೇ ಮಾನವ ಹಕ್ಕುಗಳ ಆಯೋಗಕ್ಕೆ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್ಎಂ ವೆಂಕಟೇಶ್ ಮತ್ತು ವೇದಿಕೆಯ ನಿಯೋಗವು ದೂರು ನೀಡಿತ್ತು.

ಬಬಬ

ಈ ದೂರಿನ ಆಧಾರದ ಮೇರೆಗೆ ಇತ್ತೀಚೆಗೆ ಮಾನವ ಹಕ್ಕುಗಳ ಆಯೋಗವು ಬಾಳುಗೋಡಿನ ಆದಿವಾಸಿ ಜನರು ವಾಸಿಸುವ ಸ್ಥಳಕ್ಕೆ ಬಂದು ಪರಿಶೀಲಿಸಿತ್ತು. ಅಲ್ಲದೇ, ಒಂದು ವಾರದೊಳಗೆ ಬೋರ್‌ವೆಲ್ ಅನ್ನು ಕೊರೆಸಿ ಶಾಶ್ವತ ನೀರನ್ನು ಒದಗಿಸುವಂತೆ ತಿಳಿಸಿದ್ದರು. ಅಲ್ಲದೇ, ತಾತ್ಕಾಲಿಕವಾಗಿ ಟ್ಯಾಂಕರ್‌ನಲ್ಲಿ ನೀರನ್ನು ಸರಬರಾಜು ಮಾಡುವಂತೆ ಸೂಚಿಸಿದ್ದರು.

Advertisements

22

ಮಾನವ ಹಕ್ಕುಗಳ ಆಯೋಗದ ಸೂಚನೆಯ ಹಿನ್ನೆಲೆಯಲ್ಲಿ ಬಿಟ್ಟಂಗಲ ಗ್ರಾಮ ಪಂಚಾಯತಿಯವರು ಕೊನೆಗೂ ಕೊಳವೆಬಾವಿ ಕೊರೆಸಿದ್ದು, ಅದನ್ನು ಇಂದು ಬಾಳುಗೋಡಿನ ನಿವಾಸಿಗಳು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ನೀರನ್ನು ಬಳಸಲು ತೊಡಗಿದ್ದಾರೆ. ಇದೇ ವೇಳೆ ನೈಜ ಹೋರಾಟಗಾರರ ಹೋರಾಟಕ್ಕೆ, ಮಾನವ ಹಕ್ಕುಗಳ ಆಯೋಗ ನೀಡಿರುವ ಬೆಂಬಲಕ್ಕೆ ಬಾಳುಗೋಡಿನ ಜನರು ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನು ಓದಿದ್ದೀರಾ? ಕೊಡಗು | ಬಾಳುಗೋಡಿನ ಜನರ ಗೋಳಿಗೆ ಸ್ಪಂದಿಸಿದ ಮಾನವ ಹಕ್ಕುಗಳ ಆಯೋಗ; ದಶಕಗಳ ನಂತರ ಕುಡಿಯುವ ನೀರು

ಹೋರಾಟದ ಬಗ್ಗೆ ಮಾತನಾಡಿರುವ ನೈಜ ಹೋರಾಟಗಾರರ ವೇದಿಕೆಯ ಹೆಚ್ ಎಂ ವೆಂಕಟೇಶ್, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕುಡಿಯುವ ನೀರಿನ ದಾಹದಲ್ಲಿ ವರ್ಷಾನುಗಟ್ಟಲೆ ಬಳಲಿ ಬೆಂಡಾದ ನಾಗರಿಕ ಸಮಾಜದಲ್ಲಿ ಬದುಕುತ್ತಿರುವ ನಮ್ಮವರು ವರ್ಷಗಳಿಂದ ನೀರಿನ ದಾಹಕ್ಕೆ ಒಂದು ಒಂದೂವರೆ ಕಿಲೋಮೀಟರ್ ನಡೆಯುತ್ತಿದ್ದರು. ಕುಡಿಯುವ ನೀರಿನ ಭವಣೆಗೆ ಕೊನೆಗೂ ಕೊಳವೆಬಾವಿ ತೆಗೆಸಿಕೊಡಲಾಗಿದೆ. ಬಿಟ್ಟಂಗಲ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಹಾಗೂ ಸದಸ್ಯರೆಲ್ಲರಿಗೂ ನೈಜ್ಯ ಹೋರಾಟಗಾರರ ವೇದಿಕೆಯ ಅಭಿನಂದನೆಗಳು ನಮ್ಮ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಸ್ಥಳಕ್ಕೆ ಆಗಮಿಸಿದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಸದಸ್ಯರಿಗೆ ಅಭಿನಂದನೆ” ಸಲ್ಲಿಸುವುದಾಗಿ ತಿಳಿಸಿದ್ದಾರೆ.

356

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X