ಬೆಂಗಳೂರು | ಕಳ್ಳರಿಗೆ ಅಸ್ತ್ರವಾದ ಮಳೆ: ಶ್ರೀಗಂಧದ ಮರ ರಾತ್ರೋರಾತ್ರಿ ನಾಪತ್ತೆ!

Date:

Advertisements

ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇದೇ ಅವಕಾಶವನ್ನು ಬಳಸಿಕೊಂಡ‌ ಮರಗಳ್ಳರು, ನಗರದ ಪ್ರತಿಷ್ಠಿತ ಬಡಾವಣೆಯಲ್ಲಿದ್ದ ಶ್ರೀಗಂಧದ ಮರವನ್ನೇ ಕಳವುಗೈದಿದ್ದಾರೆ.

ಬೆಂಗಳೂರಿನ ಪ್ರತಿಷ್ಠಿತ ನ್ಯಾಯಾಂಗ ಬಡಾವಣೆಯ ಪಾರ್ಕ್‌ನಲ್ಲಿರುವ ಶ್ರೀಗಂಧದ ಮರವನ್ನು ಬೆಳಗಿನ ಜಾವ ಸುಮಾರು ಮೂರು ಗಂಟೆ ಸಮಯದಲ್ಲಿ ಖದೀಮರು ಕತ್ತರಿಸಿಕೊಂಡು ಹೋಗಿದ್ದಾರೆ.

ಸುರಿಯುತ್ತಿರುವ ಮಳೆಯಿಂದಾಗಿ ಅಕ್ಕಪಕ್ಕದ ಮನೆಗಳಿಗೆ ಶಬ್ದ ಕೇಳಿಸುವುದಿಲ್ಲ ಎಂಬ ದೃಢಪಡಿಸಿಕೊಂಡ ಕಳ್ಳರು, ಶ್ರೀಗಂಧದ ಮರವನ್ನು ಕತ್ತರಿಸಿಕೊಂಡು ಹೋಗಿದ್ದಾರೆ.

Advertisements

ಈ ಬಗ್ಗೆ ಯಲಹಂಕ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಯನ್ನು ನಡೆಸಿದ್ದು, ಶ್ರೀಗಂಧದ ಮರವನ್ನು ಕಳವು ಮಾಡಿಕೊಂಡು ಹೋದ ಆರೋಪಿಯನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.

1002050926

ನ್ಯಾಯಾಂಗ ಬಡಾವಣೆಯಲ್ಲಿ ಕಳ್ಳತನಗಳು ಸಾಮಾನ್ಯ ಸಂಗತಿ ಎಂದು ಸ್ಥಳೀಯ ನಿವಾಸಿಗಳು ಸುಮ್ಮನಾಗಿಬಿಡುತ್ತಾರೆ. ಯಾರು ಸಂಬಂಧಪಟ್ಟವರಿಗೆ ದೂರನ್ನು ನೀಡಲು ಮುಂದಾಗುವುದಿಲ್ಲ. ಆದರೆ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್ಎಂ ವೆಂಕಟೇಶ್ ಅವರು ತಕ್ಷಣ ಪೊಲೀಸ್ ಠಾಣೆಗೆ ಕಳ್ಳತನದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಎಎಸ್ಐ ನಾರಾಯಣಸ್ವಾಮಿ ಪರಿಶೀಲನೆ ನಡೆಸಿ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಎಫ್ಐಆರ್ ಮಾಡಲು ಸಹಕರಿಸಿದ್ದಾರೆ.

ನ್ಯಾಯಾಂಗ ಬಡಾವಣೆಯಲ್ಲಿ ಮನೆಗಳ್ಳತನ, ಅಂಗಡಿಗಳ ಕಳ್ಳತನ, ಶ್ರೀಗಂಧ ಮರಗಳ ಕಳ್ಳತನ ನಿರಂತರವಾಗಿ ನಡೆಯುತ್ತಿರುವುದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಾಮಾಜಿಕ ಹೋರಾಟಗಾರ ಹೆಚ್.ಎಂ. ವೆಂಕಟೇಶ್ ಪೋಲಿಸರು ರಾತ್ರಿ ಪಾಳಿಯ ಗಸ್ತನ್ನು ಇನ್ನಷ್ಟು ಹೆಚ್ಚಿಸಬೇಕೆಂದು ಒತ್ತಾಯಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X