ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೌಡಗಾಂವ್‌ ಗ್ರಾಮದಿಂದ ಬೀದರ್‌ಗೆ ಪಾದಯಾತ್ರೆ

Date:

Advertisements

ಔರಾದ ತಾಲೂಕಿನ ಕೌಡಗಾಂವ್‌ ಗ್ರಾಮದಲ್ಲಿ ಡಾ.ಬಿ.ಆರ್.‌ ಅಂಬೇಡ್ಕರ್‌ ಭಾವಚಿತ್ರವಿರುವ ಕಟ್ಟೆಯ ಪಕ್ಕದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಕೇಸರಿ ಬಾವುಟದ ಕಟ್ಟೆ ನಿರ್ಮಿಸಲಾಗಿದೆ ಆ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ ತಂದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಹೋರಾಟ ಸಮಿತಿ ಔರಾದ (ಬಿ) ಮತ್ತು ದಲಿತ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ಕೌಡಗಾಂವ್‌ ಗ್ರಾಮದ ಪರಿಶಿಷ್ಟ ಸಮುದಾಯದ ಮಹಿಳೆಯರು, ಮಕ್ಕಳು ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಪ್ರಮುಖರು ಕೌಡಗಾಂವ್‌ ಗ್ರಾಮದಿಂದ ಸುಮಾರು 22 ಕಿ.ಮೀ. ಕಾಲ್ನಡಿಗೆ ಮೂಲಕ ಬೀದರ್‌ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.

ನಂತರ ಜಿಲ್ಲಾಧಿಕಾರಿ ಕಚೇರಿ ಎದುರಿನ ಮುಖ್ಯ ರಸ್ತೆ ಬಂದ್‌ ಮಾಡಿಸಿ 2 ಗಂಟೆಗಳ ಕಾಲ ಪ್ರತಿಭಟನಾ ಧರಣಿ ನಡೆಸಿ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

Advertisements

ಬಳಿಕ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಎಸ್ಪಿ ಚನ್ನಬಸವಣ್ಣ ಎಸ್.ಎಲ್‌ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹಕ್ಕೊತ್ತಾಯ ಪತ್ರ ಸ್ವೀಕರಿಸಿ ಮಾತನಾಡಿ, “ನಿಮ್ಮ ಎಲ್ಲ ಬೇಡಿಕೆಗಳನ್ನು ಕಾನೂನು ಚೌಕಟ್ಟಿನಲ್ಲಿ ಈಡೇರಿಸಲು ನಾವು ಸಿದ್ಧರಿದ್ದೇವೆ. ಗ್ರಾಮದಲ್ಲಿ ಎರಡು ಸಮುದಾಯಗಳ ಮಧ್ಯೆ ಸೃಷ್ಠಿಯಾದ ಭಿನ್ನಾಪ್ರಾಯಗಳು ಹೋಗಲಾಡಿಸಿ ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಬಾಳಬೇಕೆಂಬ ಅಪೇಕ್ಷೆ ನಮ್ಮದಾಗಿದೆ. ಇದಕ್ಕೆ ತಮ್ಮೆಲ್ಲರ ಸಹಕಾರ ಅಗತ್ಯವಿದೆ. ಈ ಬಗ್ಗೆ ಸೂಕ್ತ ತನಿಖೆ ಕೈಗೊಂಡು ತಪ್ಪಿಸ್ಥ ಪೊಲೀಸ್‌ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ರಾಹುಲ್‌ ಖಂದಾರೆ, ಸುಭಾಷ ಲಾಧಾ, ರಾಜಕುಮಾರ ಮೂಲಭಾರತಿ, ಪ್ರದೀಪ್‌ ನಾಟೇಕರ್‌, ಕಪೀಲ್‌ ಗೊಡಬಲೆ, ವಿನೋದ್‌ ರತ್ನಾಕರ್‌, ಮಹೇಶ ಗೊರನಾಳಕರ್‌, ಗೌತಮ್‌ ದೊಡ್ಡಿ, ವಿಠ್ಠಲದಾಸ ಪ್ಯಾಗೆ, ಬಾಬುರಾವ್‌ ಪಾಸ್ವಾನ್‌, ಉಮೇಶ ಸೋರಳ್ಳಿಕರ್‌, ಪ್ರಕಾಶ ರಾವಣ, ರಾಹುಲ್ ಸೇರಿದಂತೆ ಹಲವರು ಮಾತನಾಡಿ, “ಕೌಡಗಾಂವ್‌ ಗ್ರಾಮದಲ್ಲಿ ಕಳೆದ 40 ವರ್ಷಗಳಿಂದ ಅಂಬೇಡ್ಕರ್‌ ಪ್ರತಿಮೆಯಿತ್ತು. ರಾಷ್ಟೀಯ ಹೆದ್ದಾರಿ ವಿಸ್ತರಣೆ ವೇಳೆ ತೆರವುಗೊಳಿಸಿದರು. ಇದೀಗ ಅದೇ ಸ್ಥಳದಲ್ಲಿ ಅಂಬೇಡ್ಕರ್‌ ವೃತ್ತ ಮರು ಪ್ರತಿಷ್ಠಾಪನೆ ಮಾಡಲಾಗಿತ್ತು. ಆದರೆ ಅದೇ ಗ್ರಾಮದ ಕೆಲ ಯುವಕರು ಪೊಲೀಸರ ಸಮ್ಮುಖದಲ್ಲಿಯೇ ಅಂಬೇಡ್ಕರ್‌ ವೃತ್ತದ ಪಕ್ಕದಲ್ಲಿ ಕೇಸರಿ ಧ್ವಜ ನೆಟ್ಟು ಬಸವಣ್ಣನವರ ಕಟ್ಟೆ ನಿರ್ಮಿಸಿದ್ದಾರೆ. ಇದಕ್ಕೆ ಪೊಲೀಸ್‌ ಇಲಾಖೆಯವರ ಕುಮ್ಮಕ್ಕಿದೆ ಹಾಗೂ ಈ ವಿವಾದ ಬಗೆಹರಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ” ಎಂದು ಆರೋಪಿಸಿದರು.

ಕೌಡಗಾಂವ್‌
ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹಾಗೂ ಎಸ್ಪಿ ಚನ್ನಬಸವಣ್ಣ ಎಸ್‌. ಎಲ್. ಅವರಿಗೆ ಮನವಿ ಸಲ್ಲಿಸಿದರು.

“ಕಳೆದ 20 ದಿನಗಳಿಂದ ಗ್ರಾಮದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದ್ದು, ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಯ ಜನರು ಹೋರಾಟ ನಡೆಸುತ್ತಿದ್ದರೂ ಇಲ್ಲಿಯವರೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ಗ್ರಾಮದ ಸಮಸ್ಯೆ ಕುರಿತು ಸ್ಪಂದಿಸದೇ ಮೌನವಹಿಸಿರುವುದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕೌಡಗಾಂವ ಗ್ರಾಮದಲ್ಲಿ ಖಾಲಿ ಇರುವ ಸರ್ಕಾರಿ ಭೂಮಿಯಲ್ಲಿ 5 ಎಕರೆ ಜಮೀನು ನಮ್ಮ ಜನರ ಸಭೆ ಸಮಾರಂಭ, ಗ್ರಂಥಾಲಯ ಹಾಗೂ ಸಾಂಸ್ಕೃತಿ ಚಟುವಟಿಕೆಗಳಿಗಾಗಿ ಭೂಮಿ ಮಂಜೂರು ಮಾಡಬೇಕು. ಗ್ರಾಮದಲ್ಲಿ ಫೆ.5 ರಂದು ಡಾ.ಅಂಬೇಡ್ಕರ್ ವೃತದ ಹತ್ತಿರ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳ ಸಮ್ಮುಖದಲ್ಲಿಯೇ ಕೆಸರಿ ಧ್ವಜ ನೆಡಲು ಸಹಕರಿಸಿದ ಪೊಲೀಸ್‌ ಸಿಬ್ಬಂದಿಯನ್ನು ಅಮಾನತ್ತುಗೊಳಿಸಬೇಕು. ವಿವಾದಾತ್ಮಕ ಸ್ಥಳದಲ್ಲಿ ಕೆಸರಿ ಧ್ವಜ ನೆಟ್ಟಿರುವ ಯುವಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್‌ 2024-25 | 3,71,383 ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸುತ್ತಿರುವ ಸಿದ್ದರಾಮಯ್ಯ

ಪ್ರತಿಭಟನೆಯಲ್ಲಿ ಕೌಡಗಾಂವ್‌ ಗ್ರಾಮದ ದಲಿತ ಸಮುದಾಯದ ಮಹಿಳೆಯರು, ಮಕ್ಕಳು ಸೇರಿದಂತೆ ಜಿಲ್ಲೆಯ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X