ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ನದಿಗೆ ಇಳಿದಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ(38) ಸೋಮವಾರ ಬೆಳಿಗ್ಗೆ ನದಿಯಲ್ಲಿ ಈಜಲು ಹೋಗಿ ನಂತರ ನಾಪತ್ತೆಯಾಗಿದ್ದರು. ನದಿಯ ದಡದಲ್ಲಿ ಮೊಬೈಲ್, ಬಟ್ಟೆ, ಚಪ್ಪಲಿಯ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು ಹೇಳಲಾಗಿತ್ತು. ಅಗ್ನಿಶಾಮಕ ದಳದವರ ತೀವ್ರಶೋಧದ ಬಳಿಕ ಇಂದು ಬೆಳಿಗ್ಗೆ ಶವ ಪತ್ತೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ
ತುಂಗಾ ನದಿಯಲ್ಲಿ ಅಗ್ನಿಶಾಮಾಕದಳ, ಪೊಲೀಸರು ಸಿಬ್ಬಂದಿಗಳು ಮಂಗಳವಾರ ಸ್ಥಳದಲ್ಲಿ ಹುಡುಕಾಟ ನಡೆಸಿದ್ದರು. ಬ್ಯಾಂಕ್ ಮ್ಯಾನೇಜರ್ ತೀರ್ಥಹಳ್ಳಿಯಲ್ಲಿ ಒಬ್ಬರೇ ಇದ್ದರೆಂದು ಹೇಳಲಾಗುತ್ತಿದ್ದು, ಸಂಬಂಧಿಕರು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವುದಾಗಿ ಮಾಹಿತಿ ತಿಳಿದುಬಂದಿದೆ.