ಕುಡುಪು ಘಟನೆ | ಇದೇ ಕಟ್ಟಕಡೆಯ ಗುಂಪು ಹತ್ಯೆಯಾಗಬೇಕು: ಸಂತ್ರಸ್ತ ಅಶ್ರಫ್ ಸಹೋದರ ಜಬ್ಬಾರ್

Date:

Advertisements

ಮಂಗಳೂರು ನಗರದ ಕುಡುಪು ಎಂಬಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರ ತಂಡವು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿದ ಸತ್ಯಶೋಧನಾ ವರದಿಯನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದೆ.

ಸತ್ಯಶೋಧನಾ ಸಮಿತಿಯು ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗುಂಪು ಹತ್ಯೆಗೊಳಗಾದ ಅಶ್ರಫ್ ಅವರ ಸಹೋದರ ಅಬ್ದುಲ್ ಜಬ್ಬಾರ್ ಕೂಡ ಭಾಗವಹಿಸಿದ್ದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “2025ರ ಏಪ್ರಿಲ್ 27ರಂದು ನಡೆದಿದ್ದ ನನ್ನ ಸಹೋದರನನ್ನು ಗುಂಪು ಹತ್ಯೆ ನಡೆಸಿ ಕೊಲ್ಲಲಾಗಿತ್ತಾದರೂ, ನಮ್ಮ ಕುಟುಂಬಕ್ಕೆ ಮಾಹಿತಿ ಸಿಕ್ಕಿದ್ದು ಏಪ್ರಿಲ್ 29ರಂದು. ಮಂಗಳೂರಿನ ಗುಜರಿ ವ್ಯಾಪಾರಿಯಾಗಿರುವ ಸಯೀದ್ ಎನ್ನುವವರ ಅಂಗಡಿಗೆ ತಾನು ಹೆಕ್ಕುತ್ತಿದ್ದ ಎಲ್ಲ ಗುಜರಿಗಳನ್ನು ನನ್ನ ಸಹೋದರ ನೀಡುತ್ತಿದ್ದ. ಪೊಲೀಸರು ವಿವರ ಕಲೆ ಹಾಕುತ್ತಿದ್ದ ವೇಳೆ ಈ ಸಂಗತಿ ಅವರಿಗೆ ಗೊತ್ತಾಯಿತು. ಸಯೀದ್ ಅವರ ಮೂಲಕ ಕೇರಳದಲ್ಲಿರುವ ನಮ್ಮ ಕುಟುಂಬದ ಸದಸ್ಯರೋರ್ವರಿಗೆ ವಿಚಾರ ಗೊತ್ತಾಯಿತು” ಎಂದು ವಿವರಿಸಿದರು.

Advertisements

“ಅಶ್ರಫ್ ಕೊಲೆಯಾದ ವಿಚಾರವನ್ನು ಪೊಲೀಸರ ಮೂಲಕ ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಷಡ್ಯಂತ್ರ ನಡೆದಿತ್ತು. ಮಂಗಳೂರಿನ ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಅವರು ಪ್ರಾಮಾಣಿಕ ಪೊಲೀಸ್ ಅಧಿಕಾರಿ ಎಂಬ ಹೆಸರು ಇರುವುದರಿಂದ ನಮ್ಮ ಸಹೋದರನಿಗೆ ನ್ಯಾಯ ಸಿಗುವ ನಂಬಿಕೆ ಇದೆ” ಎಂದು ಜಬ್ಬಾರ್ ತಿಳಿಸಿದರು.

ಜಬ್ಬಾರ್ ಪಿಕ್

” ಗುಂಪು ಹತ್ಯೆಯ ಬಗ್ಗೆ ಕರ್ನಾಟಕದ ಕೆಲವು ಮಾನವ ಹಕ್ಕು ಸಂಘಟನೆಗಳು ಸತ್ಯಶೋಧನಾ ವರದಿಯನ್ನು ನಡೆಸಿದೆ. ಅದರಲ್ಲಿ ಕೂಡ ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ನಮಗೆ ಹಲವು ಮಾಹಿತಿ ಸಿಕ್ಕಿದೆ. ಅಶ್ರಫ್ ಗುಂಪು ಹತ್ಯೆ ಬಗ್ಗೆ ಕೇರಳ ಸರ್ಕಾರ ಕೂಡ ಕರ್ನಾಟಕ ಸರ್ಕಾರಕ್ಕೆ ಹೆಚ್ಚು ಒತ್ತಡ ಹಾಕಿಲ್ಲ ಎಂಬುದು ಕೂಡ ನಮಗಿರುವ ಮಾಹಿತಿ. ಉತ್ತರ ಪ್ರದೇಶದಲ್ಲಿ ಗುಂಪು ಹತ್ಯೆಯಾದ ಅಖ್ಲಾಕ್ ವಿಚಾರಗಳನ್ನೆಲ್ಲ ಪ್ರಸ್ತಾಪಿಸಿ ಕೇರಳದಲ್ಲಿ ಪಿಣರಾಯಿ ಸರ್ಕಾರ ಅಧಿಕಾರಕ್ಕೆ ಬಂದಿತ್ತಾದರೂ, ಮಲಯಾಳಿಯಾಗಿರುವ ಅಶ್ರಫ್ ಗುಂಪು ಹತ್ಯೆಯ ವಿಚಾರದಲ್ಲಿ ಹೆಚ್ಚು ಆಸಕ್ತಿ ತೋರಿಲ್ಲ ಎಂಬುದು ವಾಸ್ತವ” ಎಂದು ಬೇಸರಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು ಗುಂಪು ಹತ್ಯೆ | ಸತ್ಯಶೋಧನಾ ವರದಿ ಬಿಡುಗಡೆ; 2 ತಿಂಗಳಾದರೂ ಸರ್ಕಾರಿ ವಕೀಲರನ್ನೇ ನೇಮಿಸದ ರಾಜ್ಯ ಸರ್ಕಾರ!

“ಇದೇ ಕಟ್ಟಕಡೆಯ ಗುಂಪು ಹತ್ಯೆಯಾಗಬೇಕು. ಇನ್ನು ಯಾವತ್ತೂ ಯಾರನ್ನೂ ಥಳಿಸಿ ಕೊಲ್ಲಬಾರದು. ಅಶ್ರಫ್ ಅವರನ್ನು ಥಳಿಸಿ ಕೊಂದವರೆಲ್ಲರೂ ತಮ್ಮ ಅಪರಾಧಕ್ಕೆ ಶಿಕ್ಷೆ ಅನುಭವಿಸಬೇಕು. ಜಾತಿ-ಧರ್ಮ ನೋಡಿ ಕೊಲ್ಲುವುದು ದೇಶದ್ರೋಹ. ಸಹೋದರನಿಗೆ ನ್ಯಾಯ ಸಿಗಬೇಕೆಂಬುದೇ ನಮ್ಮ ಆಗ್ರಹವಾಗಿದೆ. ಅಶ್ರಫ್‌ನನ್ನು ಕೊಂದ ಬಳಿಕವೂ ಕ್ರಿಕೆಟ್ ಆಡಿದ್ದ ಮನೋಭಾವದ ವಿರುದ್ಧವಾಗಿದೆ ನಮ್ಮ ಹೋರಾಟ. ಸಹೋದರನಿಗೆ ನ್ಯಾಯ ಸಿಗಲಿದೆ ಎಂಬುದು ನಮಗೆ ನಂಬಿಕೆ ಇದೆ” ಎಂದು ಗುಂಪು ಹತ್ಯೆಗೊಳಗಾದ ಅಶ್ರಫ್ ಅವರ ಸಹೋದರ ಅಬ್ದುಲ್ ಜಬ್ಬಾರ್ ತಿಳಿಸಿದರು.

WhatsApp Image 2025 06 28 at 5.57.51 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X