ಚಿಕ್ಕಮಗಳೂರು | ನಾಲೆಗೆ ಬಿದ್ದವರ ರಕ್ಷಿಸಲು ಹೋಗಿ ಮೂವರು ನೀರು ಪಾಲು

Date:

ಕಾಲುವೆಗೆ ಆಕಸ್ಮಿಕವಾಗಿ ಬಿದ್ದ ಒಬ್ಬರನ್ನು ರಕ್ಷಿಸಲು ಮುಂದಾದ ವೇಳೆ ಮೂವರು ಕಾಲುವೆಗೆ ಬಿದ್ದು, ಮೃತಪಟ್ಟಿರುವ ಹೃದಯ ವಿದ್ರಾವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ.

ರವಿ (31), ಅನನ್ಯ (17), ಶಾಮವೇಣಿ (16) ಮೃತಪಟ್ಟವರು. ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನಾಲೆಗೆ ಬಿದ್ದಿದ್ದು, ಒಬ್ಬರನ್ನು ರಕ್ಷಿಸಲು ಮತ್ತೊಬ್ಬರು ಮುಂದಾಗಿದ್ದಾರೆ. ಈ ವೇಳೆ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ.

ಮೃತ ರವಿ ಮೂಲತಃ ಲಕ್ಕವಳ್ಳಿ ನಿವಾಸಿ, ಅನನ್ಯ, ಶಾಮವೇಣಿ ರವಿಯ ಸಹೋದರಿಯರ ಮಕ್ಕಳಾಗಿದ್ದಾರೆ. ರವಿ ಮೃತದೇಹ ಪತ್ತೆಯಾಗಿದೆ, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಧಾನಸೌಧ ಆವರಣಕ್ಕೆ ‘ಗೋ ಮೂತ್ರ’ ಎರಚಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಪೂಜೆ!

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...