ತಿಪಟೂರು | ಕೆ. ಜಿ. ಉಂಡೆ ಕೊಬ್ಬರಿಗೆ 1 ರೂ ಬೆಂಬಲ ಬೆಲೆ ಹೆಚ್ಚಳ : ಜ. 23 ರಂದು ರೈತರಿಂದ ಉಪವಾಸ ಸತ್ಯಾಗ್ರಹ

Date:

Advertisements

ಕೇಂದ್ರ ಸರ್ಕಾರ ಉಂಡೆ ಕೊಬ್ಬರಿಗೆ ಬೆಂಬಲ ಬೆಲೆಯಾಗಿ ಕೆ.ಜಿಗೆ ಒಂದು ರೂಪಾಯಿ ಹೆಚ್ಚಳ ಮಾಡಿ ರೈತರಿಗೆ ಅವಮಾನಗೊಳಿಸಿದೆ. ಇದರ ವಿರುದ್ಧ ಜನವರಿ 23 ರಂದು ತಿಪಟೂರು ಆಡಳಿತ ಸೌಧದದ ಎದುರು ಉಪವಾಸ ಸತ್ಯಾಗ್ರಹ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಜಯಾನಂದಯ್ಯ ತಿಳಿಸಿದ್ದಾರೆ.

ತಿಪಟೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಉಂಡೆ ಕೊಬ್ಬರಿಗೆ  ಉತ್ಪಾದನಾ ವೆಚ್ಚ 18638  ತಗಲಿದೆ. ಇದರ ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿಬೇಕು ಎಂದು ರೈತರು ನಿರಂತರವಾಗಿ ಒತ್ತಾಯಿಸುತ್ತಾ ಬಂದರು, ಈ ಬೇಡಿಕೆ ಪರಿಗಣಿಸದೆ 2024 – 25 ಉಂಡೆ ಕೊಬ್ಬರಿ ಬೆಂಬಲ ಬೆಲೆಯನ್ನು 1  ಕೆ. ಜಿಗೆ ಕೇವಲ 1 ರೂಪಾಯಿ ಹೆಚ್ಚಿಸಿ ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡಿದೆ ಎಂದು ಆರೋಪಿಸಿದರು.

1000935019

 ರೈತ ಮುಖಂಡ  ತಿಮ್ಲಾಪುರ ದೇವರಾಜ್ ಮಾತನಾಡಿ ರೈತರು ಬೆಳೆಯುವ ಬೆಳೆಗಳ ಉತ್ಪಾದನಾ ವೆಚ್ಚ ದುಪ್ಪಟ್ಟಾಗುತ್ತಿದೆ. ಉತ್ಪಾದನಾ ವೆಚ್ಚಕ್ಕೆ ಆಧಾರವಾಗಿ ಬೆಂಬಲ ಬೆಲೆ ನೀಡುತ್ತಿಲ್ಲ. ಸರ್ಕಾರ ಬಹು ಸಂಖ್ಯಾತರ ಹಿತ ಮರೆತು, ಕಾರ್ಪೋರೇಟ್ ಶಕ್ತಿಗಳ ಪರ ಕೆಲಸ ಮಾಡುತ್ತಿದೆ. ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ನೀಡದೆ 1 ರೂಪಾಯಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ರೈತರನ್ನು ಕೇಂದ್ರ ಸರ್ಕಾರ ಅಣಕಿಸಿದೆ ಎಂದು ಆರೋಪಿಸಿದರು.

Advertisements

ಬೆಳೆ ಕಾವಲು ಸಮಿತಿ ಮುಖಂಡ ಬಿಳಿಗೆರೆ ಪಾಳ್ಯ ನಾಗೇಶ್ ಮಾತನಾಡಿ ದೇಶದಲ್ಲಿ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೊಳಿಸಬೇಕು ಹಾಗೂ ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ಅಖಿಲ ಭಾರತ ರೈತ ಸಂಯುಕ್ತ ಹೋರಾಟ ನಾಯಕ ಜಗಜೀತ್ ಸಿಂಗ್ ದಲೈವಾಲ ಹಾಗೂ ರೈತ ಮುಖಂಡರು ನಡೆಸುತ್ತಿರುವ ಹೋರಾಟಕ್ಕೆ ನಾವೆಲ್ಲ ಬೆಂಬಲಿಸಿ ತಿಪಟೂರು ಆಡಳಿತ ಸೌಧದ ಮುಂಭಾಗ ಜನವರಿ 23 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ತಾಲೂಕಿನ ರೈತಪರಸಂಘಟನೆಗಳು ಭಾಗವಹಿಸಬೇಕು ಎಂದು ಮನವಿ ಮಾಡಿದರು.

1000935018

ನಮ್ಮ ಹೋರಾಟಕ್ಕೆ,ಬೆಲೆ ಕಾವಲು ಸಮಿತಿ, ವಕೀಲರ ಸಂಘ, ರವಾನೆದಾರರ ಸಂಘ, ವರ್ತಕರ ಸಂಘಬಗರ್ ಹುಕುಂ ಹೋರಾಟ ಸಮಿತಿ, ಭಾರತೀಯ ವೈದ್ಯಕೀಯ ಸಂಘ, ಕಲ್ಪತರು ವಿದ್ಯಾ ಸಂಸ್ಥೆ ಆಡಳಿತ ಮಂಡಳಿ, ನಾಗರೀಕ ಜಾಗೃತಿ ಹಾಗೂ ಹಿತರಕ್ಷಣಾ ಸಮಿತಿ, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ,ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘ,ಜೀವವಿಮಾ ಪ್ರತಿನಿಧಿಗಳ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಭಾಗವಹಿಸುತ್ತಿವೆ ಎಲ್ಲಾರೈತರು ಭಾಗವಹಿಸಿ ಹೋರಾಟ ಬೆಂಬಲಿಸಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬೆಲೆ ಕಾವಲು ಸಮಿತಿ ರಾಜ್ಯ ಕಾರ್ಯದರ್ಶಿ  ಶ್ರಿಕಾಂತ್ ಕೆಳಹಟ್ಟಿ,  ಸೌಹಾರ್ದ ತಿಪಟೂರು ಮುಖಂಡ ಅಲ್ಲಾ ಭಕ್ಷು ,ರೈತ ಮುಖಂಡ ಸಿದ್ದಪ್ಪ ಬಳುವನೇರಲು,ರೈತ ಮುಖಂಡ ಯೋಗನಂದಸ್ವಾಮಿ ,ಜಯನಂದಯ್ಯ,ತಿಮ್ಲಪುರದೇವರಾಜು,ರಂಗಾಪುರ ಚನ್ನಬಸವಣ್ಣ,ನಾಗೇಶ್ ಬಿಳಿಗೆರೆಪಾಳ್ಯ, ತಡಸೂರು ನಾಗರಾಜು‌ ಬೆಳೂರನಹಳ್ಳಿ ಚನ್ನಬಸವಯ್ಯ,ರವೀಂದ್ರ ಕುಮಾರ್,ದೇವಾನಂದ್ ,ರಾಜಮ್ಮ ,ಸತೀಶ್ ಎಸ್.ಎಫ್  ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X