ತಿಪಟೂರು | ಕಲ್ಪತರು ನಾಡಿನ ನೂತನ ಶಾಸಕರಿಗೆ ಸರಣಿ ಸವಾಲು

Date:

ಕಲ್ಪತರು ನಾಡಿನಲ್ಲಿ ಒಮ್ಮೆ ಗೆದ್ದವರ ಮರುಆಯ್ಕೆ ಕಷ್ಟಸಾಧ್ಯ ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು, ನೂತನ ಶಾಸಕರಾಗಿ ಕೆ ಷಡಕ್ಷರಿ ಆಯ್ಕೆಯಾಗಿದ್ದಾರೆ.

ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕೆ ಷಡಕ್ಷರಿ ಮೂರನೇ ಬಾರಿಗೆ ಆಯ್ಕೆಯಾಗಿದ್ದು, ದಾಖಲೆ ಬರೆದಿದ್ದಾರೆ. ಎರಡು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದರೂ ಅವರ ಮುಂದೆ ಸಾಗರದಷ್ಟು ಸವಾಲು, ಸಾವಿರದಷ್ಟು ನಿರೀಕ್ಷೆಗಳಿವೆ. ಇವುಗಳನ್ನು ಸರಿದೂಗಿಸಿಕೊಂಡು ಆಡಳಿತ ನಡೆಸುವುದು ಅವರ ಎದುರಿಗಿರುವ ಸದ್ಯದ ಸವಾಲಾಗಿದೆ.

‘ಕಲ್ಪತರು ನಾಡು’, ‘ಕೊಬ್ಬರಿ ಕಣಜ’ ಎಂದೇ ಪ್ರಖ್ಯಾತಿ ಪಡೆದಿರುವ ತಿಪಟೂರು ತಾಲೂಕು ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಕೊಬ್ಬರಿ ಮಾರುಕಟ್ಟೆ ಹೊಂದಿದೆ. ಕಳೆದ ವರ್ಷ ಕ್ವಿಂಟಲ್ ಕೊಬ್ಬರಿ ದರ ₹19,000 ತಲುಪಿತ್ತು. ಆದರೆ, ಐದು ತಿಂಗಳಿನಿಂದ ಕೊಬ್ಬರಿ ದರದಲ್ಲಿ ಭಾರೀ ಕುಸಿತವಾಗಿರುವುದು ರೈತರನ್ನು ಕೆಂಗೆಡಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ತಾಲೂಕು ರೈತ ಸಂಘ ಕೊಬ್ಬರಿ ಬೆಲೆ ಏರಿಕೆಗೆ ಒತ್ತಾಯಿಸಿ 35 ದಿನ ಧರಣಿ ನಡೆಸಿತ್ತು. ಆಗ ಸ್ಥಳಕ್ಕೆ ಕೆ.ಷಡಕ್ಷರಿ ಬಂದಿದ್ದು, ಬೆಂಬಲ ವ್ಯಕ್ತಪಡಿಸಿದ್ದರು.  ಚುನಾವಣೆ ಪ್ರಚಾರ ವೇಳೆ ತಾಲೂಕಿಗೆ ಬಂದಿದ್ದ ಸಿದ್ದರಾಮಯ್ಯ ಕೊಬ್ಬರಿ ಬೆಲೆಯನ್ನು ₹15,000 ಏರಿಸುವ ಭರವಸೆ ನೀಡಿದ್ದರು. ಹಾಗಾಗಿ ಆಸೆ ಕಂಗಳಿನಿಂದ ಎದುರು ನೋಡುವಂತಾಗಿದೆ” ಎಂಬುದು ರೈತರ ಅಭಿಪ್ರಾಯವಾಗಿದೆ.

“ತಮ್ಮ ಬಳಿ ಈಗಾಗಲೇ ಕೊಬ್ಬರಿ ಶೇಖರಣೆಯಾಗಿದ್ದು, ತುಂಬಾ ತಡವಾದರೆ ಕೊಬ್ಬರಿಯ ಗುಣಮಟ್ಟ ಕಳಪೆಯಾಗುವ ಆತಂಕವಾಗಿದೆ. ಇನ್ನೂ ಕೊಬ್ಬರಿ ಬೆಲೆ ಕುಸಿತ ಕಂಡಾಗ ಕೊಬ್ಬರಿ ಹಾಳಾಗದಂತೆ ಶೇಖರಣೆ ಮಾಡಲು ಶಿತಲೀಕರಣ ಘಟಕದ ಅಗತ್ಯವಿದೆ. ಎಪಿಎಂಸಿಯಲ್ಲಿ ರೈತರದ್ದೇ ಸಾಕಷ್ಟು ಹಣ ಇದೆ. ಅದನ್ನು ಸದ್ಬಳಕೆ ಮಾಡಿಕೊಂಡು ಶಿತಲೀಕರಣ ಘಟಕ ಸ್ಥಾಪಿಸಬೇಕೆನ್ನುವುದು ಬಹುದಿನದ ಬೇಡಿಕೆಯಾಗಿದೆ” ಎಂದು ತಿಳಿಸಿದ್ದಾರೆ.

“2013ರಲ್ಲಿ ಕೆ.ಷಡಕ್ಷರಿ ಶಾಸಕರಾದಾಗ ತಿಪಟೂರು ತಾಲೂಕು ಗಣಿಬಾಧಿತ ಪ್ರದೇಶವಾಗಿರುವುದರಿಂದ ಸುಮಾರು ₹750 ಕೋಟಿ ಅನುದಾನ ಪ್ರದೇಶ ಅಭಿವೃದ್ಧಿಗೆ ಮೀಸಲಾಗಿದೆ. ಮೂರು ಜಿಲ್ಲೆಗಳಿಗೆ ಅನುಕೂಲವಾಗುವಂತಹ ಸರ್ಕಾರಿ ಹೈಟೆಕ್ ಸೂಪರ್ ಸ್ಫೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಗುರಿ ಹೊಂದಿದೆ. ಹಾಗಾಗಿ ತಾಲೂಕಿನ ತಿಮ್ಲಾಪುರದ ಬಳಿ ಜಾಗ ಗುರುತಿಸಲಾಗಿತ್ತು. ಇದೀಗ ಆಸ್ಪತ್ರೆ ನಿರ್ಮಾಣ ಕಾರ್ಯ ಜಾರಿಗೆ ಬರುವ ನಿರೀಕ್ಷೆಯಿದೆ” ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಾರ್ವಜನಿಕ ಸಾರಿಗೆಯಲ್ಲಿ ಬರುವ ಪ್ರವಾಸಿಗರಿಗೆ ಬನ್ನೇರುಘಟ್ಟ ಚಿಟ್ಟೆ ಉದ್ಯಾನಕ್ಕೆ ಉಚಿತ ಪ್ರವೇಶ

“ತಾಲೂಕಿನ ಕೆಲ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ಬಾಕಿ ಇದೆ. ಶಾಸಕರ ಅನುದಾನದಲ್ಲಿ, ವಿಶೇಷ ಅನುದಾನದಲ್ಲಿ ರಸ್ತೆಗಳ ಅಭಿವೃದ್ಧಿ ಆಗುವ ಸಾಧ್ಯತೆ ಇದೆ. ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ಜಲಜೀವನ್ ಮಿಷನ್ ಅಡಿಯಲ್ಲಿ ನೀರು ಸರಬರಾಜು ಮಾಡುತ್ತಿದ್ದು, ಶುದ್ಧ ಕುಡಿಯುವ ನೀರಿನ ಅಭಾವ ಇದೆ. ಹಾಗಾಗಿ ಬಹುತೇಕ ಗ್ರಾಮಗಳಿಗೆ ಶುದ್ಧ ನೀರಿನ ಘಟಕ ನಿರ್ಮಾಣ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಜನರ ನಂಬಿಕೆ ಉಳಿಸುವ ಯತ್ನ ರಾಜ್ಯದಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸುವುದರಿಂದ ತಾಲೂಕಿನ ಅಭಿವೃದ್ಧಿಗೆ ಸಕಲ ಪ್ರಯತ್ನ ಮಾಡಲಾಗುವುದು. ಈಗಾಗಲೇ ಅನೇಕ ಯೋಜನೆ ಜಾರಿಗೆ ತಂದಿದ್ದು, ಸಾವಿರಾರು ಕೋಟಿ ಅನುದಾನವನ್ನು ಹಿಂದೆಯೂ ತಂದಿದ್ದೇನೆ. ಮುಂದಿನ ದಿನಗಳಲ್ಲಿಯೂ ಹಲವು ನೂತನ ಯೋಜನೆಗಳೊಂದಿಗೆ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಜನರ ನಂಬಿಕೆ ಉಳಿಸಿಕೊಳ್ಳುತ್ತೇನೆ” ಎಂದು ಶಾಸಕ ಕೆ.ಷಡಕ್ಷರಿ ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಲೋಕಸಭಾ ಕ್ಷೇತ್ರ | ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ 18 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ...

ಯಾವ ಉಚ್ಚಾಟನೆಗೂ ಹೆದರಲ್ಲ: ಈಶ್ವರಪ್ಪ

ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ...

ಬೀದರ್‌ | ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

ಬೀದರ್‌ ಜಿಲ್ಲೆಯಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಹೊಲದಲ್ಲಿ ಕೃಷಿ...