ತೀರ್ಥಹಳ್ಳಿ | ದೇವಸ್ಥಾನದ ಹುಂಡಿ ಕಳ್ಳತನ : ಆರೋಪಿ ಬಂಧನ

Date:

Advertisements

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಹುಂಡಿಯಲ್ಲಿನ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಚಾಣಾಕ್ಷತನದ ಈ ತ್ವರಿತ ಕಾರ್ಯವೈಖರಿಗೆ ಧಾರ್ಮಿಕ ದತ್ತಿ ಮತ್ತು ಧರ್ಮದಾಯ ಇಲಾಖೆಯ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ಬಿ. ವರಲಕ್ಷ್ಮೀ ಪ್ರಕಾಶ್ ಇವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದವರನ್ನು ಅಭಿನಂದಿಸಿದ್ದಾರೆ.

ದೇವಸ್ಥಾನದಲ್ಲಿ ಆಗಸ್ಟ್ 11ರ ರಾತ್ರಿ ವ್ಯಕ್ತಿಯೊಬ್ಬ ಮಾಸ್ಕ್ ಧರಿಸಿ ನಡೆಸಿದ್ದ ಕಳ್ಳತನ ಪ್ರಕರಣ 12ರ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisements
1002056880

ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್‍ಪಿ ಅರವಿಂದ್ ಕಲಗುಜ್ಜಿ ಅವರ ಮಾರ್ಗದರ್ಶನದಲ್ಲಿ, ಇನ್ಸ್ಪೆಕ್ಟರ್ ಇಬ್ರಾನ್ ಬೇಗ್, ಸಬ್ ಇನ್ಸ್‍ಪೆಕ್ಟರ್ ಸುಷ್ಮಾ ನೇತೃತ್ವದಲ್ಲಿ ಹೆಡ್ ಕಾನ್‍ಸ್ಟೇಬಲ್ ಲಿಂಗೇಗೌಡ, ಕಾನ್ಸ್‍ಟೇಬಲ್‍ಗಳಾದ ಮಂಜುನಾಥ, ಸುರೇಶ್ ನಾಯ್ಕ, ವಿಜಯ ಕುಮಾರ್ ಕಾರ್ಯ ಪ್ರವೃತ್ತರಾಗಿ ದಾವಣಗೆರೆ ಜಿಲ್ಲೆಯ ಸೈಯದ್ ಉಮರ್‍ನನ್ನು (30 ) ಬಂಧಿಸಿರುವುದು ಶ್ಲಾಘನೀಯ ಎಂದರು.

ಅಂತೆಯೇ ತೀರ್ಥಹಳ್ಳಿ ಠಾಣಾ ಪೊಲೀಸರು ನ್ಯಾಮತಿಯ ಗಣೇಶ್ (34 ) ಎಂಬ ಆರೋಪಿಯನ್ನು ಬಂಧಿಸುವ ಮೂಲಕ ಕೋಣಂದೂರಿನಲ್ಲಿ ಇತ್ತೀಚೆಗೆ ನಡೆದಿದ್ದ ನಾಲ್ಕು ಕಳವು ಪ್ರಕರಣ ಬೇಧಿಸಿದ್ದಾರೆ.

ಕೋಣಂದೂರಿನ ಸುಣ್ಣಗಾರ್ ಕೇರಿಯ ಎರಡು ಮನೆಗಳವು, ಕೆನರಾ ಬ್ಯಾಂಕ್‍ನ ಎಟಿಎಂ ಒಡೆದು ಹಣ ಕಳವಿಗೆ ಯತ್ನ, ಕುವೆಂಪು ಬಡಾವಣೆಯ ಮುರಿಗೆಪ್ಪ ಅವರ ಬೈಕ್ ಕಳವು ಪ್ರಕರಣವನ್ನು ಪತ್ತೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X