ಮೈಸೂರು | ಸರ್ಕಾರಿ ನೌಕರರ ಆಸ್ತಿ ವಿವರಕ್ಕಾಗಿ ಪೋರ್ಟಲ್ ರೂಪಿಸುವಂತೆ ಒತ್ತಾಯ

Date:

Advertisements

ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ವತಿಯಿಂದ ‘ ಲೋಕಾಯುಕ್ತ ಸಂಸ್ಥೆಗೆ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಆಸ್ತಿ ವಿವರ ತಿಳಿಯುವಂತೆ ಪೋರ್ಟಲ್ ರೂಪಿಸಬೇಕು, ಪ್ರತಿವರ್ಷ ಆಸ್ತಿ ವಿವರವನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ತಹಶೀಲ್ದಾರ್ ರೇಖಾರವರಿಗೆ ಒತ್ತಾಯ ಪತ್ರ ಸಲ್ಲಿಸಿದರು.

ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಸಿ ಎಸ್ ಚಂದ್ರಶೇಖರ್ ಮಾತನಾಡಿ ” ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಪ್ರತಿ ವರ್ಷ ಆಸ್ತಿ ವಿವರವನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂಬ ನಿಯಮ ಇದೆ. ಅಧಿಕಾರಿಗಳು, ನೌಕರರ ಆಸ್ತಿ ವಿವರ ಲೋಕಾಯುಕ್ತ ಸಂಸ್ಥೆಗೆ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಲೋಕಾಯುಕ್ತರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು, ಇದರಿಂದ ಪಾರದರ್ಶಕ ಆಡಳಿತಕ್ಕೆ ಅನುವು ಮಾಡಿಕೊಟ್ಟಂತಾಗುತ್ತದೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ನೆರವಾಗುತ್ತದೆ. ಅಧಿಕಾರಿಗಳು, ನೌಕರರ ಆಸ್ತಿ ವಿವರ, ವರ್ಷವಾರು ಗಳಿಕೆ ಕ್ರೂಡಿಕರಿಸಿದರೆ ಸುಲಭವಾಗಿ ಆಡಳಿತ ಸುಧಾರಣೆ ತರಲು ಸುಲಭವಾಗುತ್ತದೆ ” ಎಂದರು.

” ಮದ್ರಾ ಸ್ ಹೈಕೊಟ್೯ ನ್ಯಾಯಮೂರ್ತಿ ಸಿ ವಿ ಕಾರ್ತಿಕೇಯನ್ ಅವರು ಸರ್ಕಾರಿ ನೌಕರರ ಆಸ್ತಿ ವಿವರ ಸಾರ್ವಜನಿಕ ಮಾಹಿತಿ ಎಂದು ತೀರ್ಪು ನೀಡಿದ್ದಾರೆ. ಸರ್ಕಾರಿ ಉದ್ಯೋಗಿಗಳ ಆಸ್ತಿ ವಿವರ ಲೋಕಾಯುಕ್ತ ಸಂಸ್ಥೆಗೆ ಲಭ್ಯವಾಗುವಂತೆ ವ್ಯವಸ್ಥೆಯನ್ನು ರೂಪಿಸಿ ಮಾರ್ಚ್ ಅಂತ್ಯದೊಳಗೆ ವಿವರ ಅಪಲೋಡ್ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು ಇದರಿಂದ ಲಂಚ ಪಡೆಯುವ ಭ್ರಷ್ಟರ ಸಂಖ್ಯೆ ಇಳಿಮುಖವಾಗಲಿದೆ ” ಎಂದರು.

Advertisements

ಕರ್ನಾಟಕ ಹಿತರಕ್ಷಣ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಮಾತನಾಡಿ ” ಆಸ್ತಿ ಬಹಿರಂಗ ಅತ್ಯಗತ್ಯವಾಗಿದೆ. ಸರಕಾರಿ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆಯಬಾರದು ಎಂಬ ಸದುದ್ದೇಶದಿಂದ ನೌಕರರು ತಮ್ಮ ಆಸ್ತಿ ವಿವರ ನೀಡುವುದು ಕಡ್ಡಾಯವಾಗಿದೆ. ಆದರೆ, ಲೋಕಾಯುಕ್ತ ಅಧಿಕಾರಿಗಳು ಮನವಿ ಮಾಡಿದರೂ ಆಯಾ ಇಲಾಖೆಯ ಮುಖ್ಯಸ್ಥರು ಮಾಹಿತಿ ನೀಡದೇ ಗೌಪ್ಯವಾಗಿರಿಸಿರುವುದು ಸರಿಯಲ್ಲ ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಜಿಲ್ಲಾಧಿಕಾರಿ ಭೇಟಿ ಮಾಡಿ ಕೆಎಸ್ಐಸಿ ಉಳಿಸುವಂತೆ ಮನವಿ ಮಾಡಿದ ದಸಂಸ

ಭಾರತೀಯ ಗ್ರಾಹಕ ಪಂಚಾಯತ್ ನ ಅಖಿಲ, ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಅಮಿತ್ ಕುಮಾರ್ ಒತ್ತಾಯ ಪತ್ರ ಸಲ್ಲಿಸುವಾಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X