ಟೊಮೆಟೊ ಬಂಪರ್ | 45 ದಿನಗಳಲ್ಲಿ ₹4 ಕೋಟಿ ಲಾಭ ಪಡೆದ ರೈತ

Date:

Advertisements

ಅಡುಗೆ ಸಾಮಗ್ರಿಗಳ ಬೆಲೆ ಗಗನಕ್ಕೇರುತ್ತಿದೆ. ಕಳೆದ ಎರಡು ತಿಂಗಳಿನಿಂದ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಕೆ.ಜಿ ಟೊಮೆಟೊ 120ರಿಂದ 140 ರೂ.ಗೆ ಮಾರಾಟವಾಗುತ್ತಿದೆ. ದುಬಾರಿ ಬೆಲೆಯ ಸಂದರ್ಭದಲ್ಲಿ ಟೊಮೆಟೊ ಬೆಳೆದಿದ್ದ ಆಂಧ್ರಪ್ರದೇಶದ ರೈತರೊಬ್ಬರು ಒಂದೂವರೆ ತಿಂಗಳಿನಲ್ಲಿ (45 ದಿನ) ಬರೋಬ್ಬರಿಗೆ 4 ಕೋಟಿ ರೂ. ಲಾಭ ಪಡೆದಿದ್ದಾರೆ.

ಆಂಧ್ರದ ಚಿತ್ತೂರು ಜಿಲ್ಲೆಯ ರೈತ ಮುರುಳಿ ಅವರು ತಮ್ಮ 22 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದು, 130 ಕಿ.ಮೀ. ದೂರದಲ್ಲಿರುವ ಕೋಲಾರ ಎಪಿಎಂಸಿಯಲ್ಲಿ ಉತ್ತಮ ಬೆಲೆ ಸಿಗುತ್ತದೆಯೆಂದು ಇಲ್ಲಿಗೆ ತಂದು ಮಾರಾಟ ಮಾಡುತ್ತಿದ್ದಾರೆ. 45 ದಿನಗಳಿಂದ ಆಗಾಗ್ಗೆ ಟೊಮೆಟೊ ಕಠಾವು ಮಾಡಿ, ಮಾರಾಟ ಮಾಡಿರುವ ಅವರು ಬರೋಬ್ಬರಿ 4 ಕೋಟಿ ರೂ. ಲಾಭ ಪಡೆದಿದ್ದಾರೆ.

“ಕಳೆದ ಎಂಟು ವರ್ಷಗಳಿಂದ ಟೊಮೆಟೊ ಬೆಳೆಯುತ್ತಿದ್ದೇನೆ. ಆದರೆ, ಎಂದೂ ಅಂತಹ ಲಾಭ ಪಡೆದಿರಲಿಲ್ಲ. ಈಗ ಉತ್ತಮ ಲಾಭ ಬಂದಿದೆ” ಎಂದು ರೈತ ಮುರುಳಿ ಹೇಳಿದ್ದಾರೆ.

Advertisements

“ಕಳೆದ ವರ್ಷ ಜುಲೈನಲ್ಲಿ ಬೆಲೆ ಕುಸಿತದಿಂದಾಗಿ ಭಾರಿ ನಷ್ಟವನ್ನು ಅನುಭವಿಸಿದ್ದೆವು. ಬೀಜ, ರಸಗೊಬ್ಬರ, ಕೂಲಿ, ಸಾಗಾಣಿಕೆ ಮತ್ತಿತರ ವೆಚ್ಚಗಳಿಂದಾಗಿ 1.5 ಕೋಟಿ ರೂ. ಸಾಲಕ್ಕೆ ಸಿಲುಕಿದ್ದೆವು. ಅಲ್ಲದೆ, ತಮ್ಮ ಗ್ರಾಮದಲ್ಲಿ ಸರಿಯಾದ ವಿದ್ಯುತ್ ಪೂರೈಕೆ ಇಲ್ಲದ ಕಾರಣ, ಇಳುವರಿಯೂ ಕುಸಿದಿತ್ತು” ಎಂದು ಅವರು ಹೇಳಿಕೊಂಡಿದ್ದಾರೆ.

“ಈ ಬಾರಿ ಅಧಿಕಾರದ ಪರಿಸ್ಥಿತಿ ಬದಲಾಗಿದೆ. ಉತ್ತಮ ಬೆಳೆ ಬಂದಿದೆ. ಇದುವರೆಗೆ 35 ಬಾರಿ ಟೊಮೆಟೊ ಕಟಾವು ಮಾಡಿದ್ದೇವೆ. ಇನ್ನೂ ಸುಮಾರು 15 ಬಾರಿ ಕಟಾವು ಮಾಡುವ ಸಾಧ್ಯತೆ ಇದೆ. 45 ದಿನಗಳಲ್ಲಿ ಇದ್ದ ಸಾಲವನ್ನೆಲ್ಲ ತೀರಿಸಿ, 2 ಕೋಟಿ ರೂ. ಉಳಿತಾಯ ಲಾಭ ಪಡೆದಿದ್ದೇವೆ” ಎಂದು ಅವರು ಹೇಳಿದ್ದಾರೆ.

ಲಾಭದ ಹಣದಲ್ಲಿ ಮತ್ತಷ್ಟು ಭೂಮಿ ಖರೀದಿಸಲು ಯೋಜಿಸುತ್ತಿದ್ದಾರೆ. ದೊಡ್ಡ ಪ್ರಮಾಣದಲ್ಲಿ ತೋಟಗಾರಿಕೆ ಕೃಷಿ ಮಾಡುವ ಚಿಂತನೆಯಲ್ಲಿದ್ದಾರೆ. ಕೃಷಿಯನ್ನು ನಂಬುವ ಮತ್ತು ಗೌರವಿಸುವವನು ಎಂದಿಗೂ ಎದೆಗುಂದ ಬಾರದು, ಒಂದೊಮ್ಮೆ ಕೃಷಿ ನಮ್ಮ ಕೈಹಿಡಿಯುತ್ತದೆ ಎಂದು ಅವರು ಹೇಳುತ್ತಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X