ಬೀದರ್‌, ಯಾದಗಿರಿ ಜಿಲ್ಲೆಯಲ್ಲಿ ಮಳೆ ಅಬ್ಬರ; ಸಿಡಿಲಿಗೆ ಇಬ್ಬರು ಸಾವು

Date:

Advertisements

ಬಿರುಗಾಳಿ ಸಹಿತ ಮಳೆಗೆ ವಿವಿದೆಡೆ ಸಾವು-ನೋವು ಸಂಭವಿಸಿದೆ. ಬೀದರ್‌, ಯಾದಗಿರಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಹೊರಭಾಗದಲ್ಲಿ ಸೋಮವಾರ ನಸುಕಿನ ಜಾವ ಸಿಡಿಲು ಬಡಿದು ಓರ್ವ ಕುರಿಗಾಹಿ ಮೃತಪಟ್ಟಿದ್ದಾರೆ.

ಭಾನುವಾರ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿತ್ತು. ಈ ವೇಳೆ ಸಿಡಿಲು ಬಡಿದು ಕುರಿಗಾಹಿ ಬುಯೆಪ್ಪ (22) ಮೃತಪಟ್ಟಿದ್ದಾರೆ. ಕುರಿಗಾಹಿ ಜತೆಗೆ ಸ್ಥಳದಲ್ಲೇ 7 ಕುರಿಗಳು ಮೃತಪಟ್ಟಿವೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisements

ಬೀದರ್‌ ಜಿಲ್ಲೆಯಲ್ಲಿ ಭಾನುವಾರ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದೆ. ಚಿಟಗುಪ್ಪಾ ತಾಲೂಕಿನ ಇಟಗಾ ಗ್ರಾಮದ ಇನಾಯತ್‌ ಸೈಯದ್‌ (21) ಎಂಬುವರು ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿದು ಬಡಿದು ಮೃತಪಟ್ಟಿದ್ದಾರೆ. ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಐಕೂರು ಗ್ರಾಮದಲ್ಲಿ ಸಿಡಿಲು ಬಡಿದು 10 ಕುರಿಗಳು ಸಾವನ್ನಪ್ಪಿವೆ. ಐಕೂರು ಗ್ರಾಮದ ರಾಯಪ್ಪ ಎಂಬ ಕುರಿಗಾಹಿಗೆ ಸೇರಿದ ಕುರಿಗಳನ್ನು ಜಮೀನಿನಲ್ಲಿರುವ ಕುರಿಹಟ್ಟಿಯಲ್ಲಿ ಬಿಡಲಾಗಿತ್ತು. ನಿನ್ನೆ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ವೇಳೆ ಸಿಡಿಲು ಬಡಿದಿದೆ. ಪರಿಣಾಮ ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ.

ಬೀದರ್‌ ತಾಲೂಕಿನ ಇಸ್ಲಾಂಪುರ ತಾಂಡಾದ ರೈತ ಭೀಮ ಬನ್ಸಿ ಎಂಬುವರಿಗೆ ಸೇರಿದ ನಾಲ್ಕು ಮೇಕೆಗಳು ಸಿಡಿಲು ಬಡಿದು ಸಾವನಪ್ಪಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಗ್ರಾಮದ ಹೊರವಲಯದಲ್ಲಿ ಮೇಯಿಸಲು ಹೋದ ವೇಳೆ ಭಾನುವಾರ ಸಂಜೆ ಬಿರುಗಾಳಿ ಸಹಿತ ಸುರಿದಿದೆ. ಈ ವೇಳೆ ಸಿಡಿಲು ಬಡಿದು ಅಂದಾಜು 60 ಸಾವಿರ ರೂ. ಮೌಲ್ಯದ ನಾಲ್ಕು ಆಡುಗಳು ಮೃತಪಟ್ಟಿವೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕೆಂದು ರೈತ ಭೀಮ್‌ ಬನ್ಸಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X