ಬಂಟ್ವಾಳ | ಪಾಣೆಮಂಗಳೂರು ಹಳೆ ಸೇತುವೆ ಮೇಲೆ ಸಂಚಾರ ನಿಷೇಧ: ಆದೇಶ ಹೊರಡಿಸಿದ ತಹಶೀಲ್ದಾರ್

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ ಮಾಡಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್ ಅವರು ಆದೇಶಿಸಿದ್ದಾರೆ.

ಸೇತುವೆಯ ಧಾರಣಾ ಸಾಮರ್ಥ್ಯ ಪರಿಶೀಲನೆ ಮಾಡಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ಈ ಬಗ್ಗೆ ಈದಿನ ಡಾಟ್ ಕಾಮ್ ಜೊತೆಗೆ ಮಾತನಾಡಿದ ತಹಶೀಲ್ದಾರ್ ಅರ್ಚನಾ ಡಿ.ಭಟ್, “ಮುಂದಿನ ದಿನಗಳಲ್ಲಿ ಅನಾಹುತ ಆಗಬಾರದೆಂಬ ನಿಟ್ಟಿನಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ಸೇತುವೆಯ ಧಾರಣಾ ಸಾಮರ್ಥ್ಯದ ಬಗ್ಗೆ ತಾಲೂಕು ಆಡಳಿತಕ್ಕೆ ಸಂಬಂಧಪಟ್ಟ ಇಂಜಿನಿಯರ್‌ಗಳಿಂದ ವರದಿ ಕೇಳಿದ್ದೆವು. ಆದರೆ ಈ ಬಗ್ಗೆ ಇನ್ನೂ ವರದಿ ಬಂದಿಲ್ಲ. ವರದಿ ಬಂದ ಬಳಿಕ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸುವ ಸಂಬಂಧ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸಂಚಾರ ನಿಷೇಧಿಸಿ ಆದೇಶ ಹೊರಡಿಸುವ ಬಗ್ಗೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲೂ ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆ” ಎಂದು ತಿಳಿಸಿದ್ದಾರೆ.

Advertisements
panemnaglore

ಪಾಣೆಮಂಗಳೂರು ಹಳೆ ಸೇತುವೆಯ ಹಿನ್ನೆಲೆ

ಪಾಣೆಮಂಗಳೂರು ಹಳೆ ಸೇತುವೆಯು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಯ ಮೇಲೆ ನಿರ್ಮಿತವಾದ ಬ್ರಿಟೀಷರ ಕಾಲದ ಒಂದು ಐತಿಹಾಸಿಕ ಸೇತುವೆಯಾಗಿದೆ. ಈ ಸೇತುವೆಯು ಪಾಣೆಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದ್ದು, ಸ್ಥಳೀಯರಿಗೆ ಸಂಚಾರದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ.

WhatsApp Image 2025 06 11 at 2.01.33 PM

ಪಾಣೆಮಂಗಳೂರಿನ ಉಕ್ಕಿನ ಸೇತುವೆ 111 ವರ್ಷವನ್ನು ಪೂರೈಸಿದ್ದು, ಅವಿಭಜಿತ ದ.ಕ. ಜಿಲ್ಲೆಯ ಮೊದಲ ಸಂಪರ್ಕ ಸೇತುವೆ ಎನ್ನುವ ಹೆಗ್ಗಳಿಕೆಯೂ ಇದಕ್ಕಿದೆ. ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡು ಇತಿಹಾಸದ ಕೊಂಡಿಯಾಗಿರುವ ಈ ಸೇತುವೆಯನ್ನು ಐತಿಹಾಸಿಕ ಸ್ಮಾರಕವಾಗಿ ರಕ್ಷಿಸಬೇಕು ಎನ್ನುವ ಬೇಡಿಕೆಯೂ ಇಲ್ಲಿನ ಜನರದ್ದು. ಈ ಸೇತುವೆಯಲ್ಲಿ ಘನವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ನಿಷೇಧಿಸಿದ್ದರೂ ಪಾಣೆಮಂಗಳೂರಿಗೆ ಸರಕು ಹೊತ್ತು ತರುತ್ತಿದ್ದ ಲಾರಿಗಳ ಸಂಚಾರ ನಿರಾತಂಕವಾಗಿ ಮುಂದುವರಿದಿತ್ತು. ಸೇತುವೆಯಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಎಚ್ಚೆತ್ತುಕೊಂಡ ಬಂಟ್ವಾಳ ಪುರಸಭೆಯ ಅಧಿಕಾರಿಗಳು, ಸೇತುವೆಯ ಎರಡೂ ಪಾರ್ಶ್ವಗಳಲ್ಲಿ ಘನ ವಾಹನಗಳು ಪ್ರವೇಶಿಸದಂತೆ ತಡೆಬೇಲಿ ನಿರ್ಮಿಸಿದ್ದರು. ಆದರೆ, ಕೆಲ ತಿಂಗಳುಗಳ ಹಿಂದೆ ಘನವಾಹನವೊಂದು ತಡೆಬೇಲಿಯನ್ನು ಗಮನಿಸದೆ ನೇರವಾಗಿ ನುಗ್ಗಿಸಿದ್ದರಿಂದ ತಡೆಬೇಲಿ ಹಿಗ್ಗಿ ಸೇತುವೆಯ ರಕ್ಷಣೆಗಿದ್ದ ಬೇಲಿಗೂ ಹಾನಿಯುಂಟಾಗಿತ್ತು.

ಪಾಣೆಮಂಗಳೂರು

ಪಾಣೆಮಂಗಳೂರು ಒಳಪೇಟೆ, ಶಂಭೂರು, ಬಂಟ್ವಾಳ ಒಳಪೇಟೆ, ನಂದಾವರ, ಸಜಿಪ, ಮೆಲ್ಕಾರ್, ಬೋಳಂಗಡಿ ಮತ್ತಿತರ ಭಾಗಗಳಿಂದ ಬರುವ ಜನರು ಈಗಲೂ ಪಾಣೆಮಂಗಳೂರಿನ ಈ ಹಳೆಯ ಉಕ್ಕಿನ ಸೇತುವೆಯನ್ನೇ ಅವಲಂಬಿಸಿಕೊಂಡಿದ್ದಾರೆ. ಸದ್ಯ ತಹಶೀಲ್ದಾರ್ ನಿಷೇಧ ಹೇರಿರುವುದರಿಂದ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X