ಬೀದರ್‌ | ಅಕ್ರಮ ಗಾಂಜಾ ಸಾಗಾಟ; ಆರೋಪಿಗಳ ಬಂಧನ

Date:

Advertisements

ಆಂಧ್ರಪ್ರದೇಶದಿಂದ ಭಾಲ್ಕಿ ಮಾರ್ಗವಾಗಿ ಸೋಲಾಪೂರಕ್ಕೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂರು ಜನ ಆರೋಪಿಗಳನ್ನು ಬೀದರ-ನಾಂದೇಡ ರಾಷ್ಟ್ರೀಯ ಹೆದ್ದಾರಿ 50ರ ಹಾಲಹಿಪ್ಪರ್ಗಾ ಕ್ರಾಸ್ ಬಳಿ ಬಂಧಿಸಲಾಗಿದೆ.

ಬಂಧಿತ ಆರೋಪಿಗಳಿಂದ 25.65 ಲಕ್ಷ ರೂ ಮೌಲ್ಯದ 25.65 ಕೆಜಿ ಗಾಂಜಾ ಹಾಗೂ 3 ಲಕ್ಷ ಮೌಲ್ಯದ ಟಾಟಾ ಇಂಡಿಕಾ ವಿಸ್ಟಾ ಕಾರು ವಶಕ್ಕೆ ಪಡೆಯಲಾಗಿದೆ ಎಂದು ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಬೀದರನ ಗುನ್ನಳ್ಳಿ ರಸ್ತೆ ಬಳಿಯ ರಿಕ್ಷಾ ಕಾಲೋನಿಯ ಮನೆಯೊಂದರಲ್ಲಿ ಗಾಂಜಾ ಶೇಖರಣೆ ಮಾಡಿ ಇಟ್ಟಿರುವುದಾಗಿ ತಿಳಿದು ಬಂದ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಿ ಶೋಧನೆ ಮಾಡಿದಾಗ ಅಲ್ಲಿಯೂ ಸಹ ಶೇಖರಣೆ ಮಾಡಿಟ್ಟಿರುವ 21.40 ಲಕ್ಷ ರೂ ಮೌಲ್ಯದ 21.44 ಕೆ.ಜಿ. ಗಾಂಜಾ ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ ಈ ಗಾಂಜಾವನ್ನು ಕಾವಲು ಕಾಯುತ್ತಿದ್ದ ಓರ್ವ ಆರೋಪಿಯನ್ನು ಸಹ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು 47.05 ಲಕ್ಷ ರೂ. ಮೌಲ್ಯದ 47.09 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ” ತಿಳಿಸಿದ್ದಾರೆ.

Advertisements

“ಆರೋಪಿಗಳು ಖಾನಾಪೂರ ಗ್ರಾಮದಲ್ಲಿ ಈ ಹಿಂದೆ ನಡೆದ ಮೂರು ದ್ವಿಚಕ್ರ ವಾಹನಗಳ ಮತ್ತು ಒಂದು ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಗಳು ವಿಚಾರಣೆ ವೇಳೆಯಲ್ಲಿ ತಿಳಿಸಿದ್ದಾರೆ. ಈ ಗಾಂಜಾ ಮಾರಾಟ ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನು ಮೂರು ಜನ ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರಿಗಾಗಿಯೂ ಶೋಧ ಕಾರ್ಯ ನಡೆದಿದೆ” ಎಂದು ಮಾಹಿತಿ ನೀಡಿದರು.

ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ:

“ಇತ್ತಿಚೇಗೆ ಬೀದರ ಜಿಲ್ಲೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ಮೂರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಆದರಿಂದ ಪೊಷಕರು ತಮ್ಮ ಮಕ್ಕಳ ಬ್ಯಾಂಕ್ ಖಾತೆಯ ಹಣ ವರ್ಗಾವಣೆಯ ಮೇಲೆ ನಿಗಾವಹಿಸಬೇಕು. ಜಿಲ್ಲೆಯ ನಾಗರಿಕರು ಹಾಗೂ ಯುವಕರು ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಬಾರದು. ಇಂತಹ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಚ್ಚರಿಕೆ ನೀಡಿದರು.

“ಜಿಲ್ಲೆಯಲ್ಲಿ ಮನೆ ಕಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲೆಯ ಸಾರ್ವಜನಿಕರು ಸಹಕರಿಸಬೇಕು. ತಮ್ಮ ಮನೆಗಳಿಗೆ ಸಿಸಿಟಿವಿ ಅಳವಡಿಸಬೇಕು. ತಾವು ಊರಿಗೆ ತೆರಳುವಾಗ ತಮ್ಮ ಮನೆಯ ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡಿ ತಮ್ಮ ಮನೆಯ ಮೇಲೆ ನಿಗಾ ಇಡುವಂತೆ ಹೇಳಬೇಕು. ಹೆಚ್ಚಿನ ದಿನಕ್ಕಾಗಿ ಊರಿಗೆ ತೆರಳುವಂತಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ತಮ್ಮ ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಗಳು ಸಂಚರಿಸುದನ್ನು ಕಂಡುಬಂದರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸವಣ್ಣನವರ ಭಾವಚಿತ್ರ ಸುಟ್ಟ ಕಿಡಿಕೇಡಿಗಳಿಗೆ ಕೂಡಲೇ ಬಂಧಿಸಿ : ಕೇಂದ್ರ ಸಚಿವ ಭಗವಂತ ಖೂಬಾ

ಈ ಸಂದರ್ಭದಲ್ಲಿ ಭಾಲ್ಕಿ ಪೊಲೀಸ್ ಉಪಾಧೀಕ್ಷಕ ಶಿವಾನಂದ ಪವಾಡಶೇಟ್ಟಿ, ಭಾಲ್ಕಿ ಗ್ರಾಮೀಣ ವೃತ್ತ ಸಿಪಿಐ ಗುರುಪಾದ ಎಸ್ ಬಿರಾದಾರ, ಪಿಎಸ್‌ಐ ವಿಶ್ವರಾಧ್ಯ ಸೇರಿದಂತೆ ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಇಲಾಖೆಯ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X