ಮಂಗಳೂರು-ಬೆಂಗಳೂರು ನಡುವೆ ಆರು ತಿಂಗಳು ರೈಲು ಸಂಚಾರ ರದ್ದು

Date:

ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ನಾನಾ ಕಾಮಗಾರಿಗಳನ್ನು ಆರಂಭಿಸಲಾಗುತ್ತಿದೆ. ಹೀಗಾಗಿ, ಆರು ತಿಂಗಳ ಕಾಲ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.

- Advertisement -

ಪ್ರಕರಣೆ ಹೊರಡಿಸಿರುವ ರೈಲ್ವೇ ಇಲಾಖೆ, “ಜೂನ್‌ 1ರಿಂದ ನವೆಂಬರ್ 1ರವರೆಗೆ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದಲ್ಲಿ ರೈಲ್ವೇ ವಿದ್ಯುದ್ಧೀಕರಣ, ಸುರಕ್ಷತೆ ಸೇರಿದಂತೆ ಕೆಲವು ಪ್ರಮುಖ ಕಾಮಗಾರಿಗಳು ನಡೆಯಲಿವೆ. ಈ ಅವಧಿಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ಬಹುತೇಕ ಎಲ್ಲ ರೈಲುಗಳ ಸಂಚಾರ ರದ್ದಾಗಲಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಸಂಚಾರ ಸ್ಥಗಿತಗೊಂಡ ರೈಲುಗಳ ವಿವರ;

  • ಯಶವಂತಪುರ-ಮಂಗಳೂರು ಜಂಕ್ಷನ್‌ ಸಾಪ್ರಾಹಿಕ ಎಕ್ಸ್‌ಪ್ರೆಸ್ (16540): ಪ್ರತಿ ಶನಿವಾರ ಯಶವಂತಪುರದಿಂದ ಮಂಗಳೂರಿಗೆ ತೆರಳುವ ಈ ರೈಲು ಸಂಚಾರವು ಮೇ 31ರಿಂದ ನವೆಂಬರ್ 1ರವರೆಗೆ ರದ್ದಾಗಲಿದೆ.
  • ಮಂಗಳೂರು ಜಂಕ್ಷನ್ – ಯಶವಂತಪುರ ಸಾಪ್ರಾಹಿಕ ಎಕ್ಸ್‌ಪ್ರೆಸ್ (16539): ಪ್ರತಿ ಭಾನುವಾರ ಮಂಗಳೂರು ಜಂಕ್ಷನ್‌ನಿಂದ ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರಯಾಣಿಸುತ್ತಿದ್ದ ಈ ರೈಲು ಜೂನ್ 1ರಿಂದ ನವೆಂಬರ್ 2ರವರೆಗೆ ರದ್ದಾಗಲಿದೆ.
  • ಯಶವಂತಪುರ – ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16575): ಪ್ರತಿ ಮಂಗಳವಾರ, ಗುರುವಾರ ಮತ್ತು ಭಾನುವಾರ ಯಶವಂತಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲು ಜೂನ್ 1 ರಿಂದ ಅಕ್ಟೋಬರ್ 30ರವರೆಗೆ ರದ್ದಾಗಲಿದೆ.
  • ಮಂಗಳೂರು – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576): ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಂಗಳೂರಿನಿಂದ ಯಶವಂತಪುರಕ್ಕೆ ಪ್ರಯಾಣಿಸುತ್ತಿದ್ದ ರೈಲು ಜೂನ್ 2ರಿಂದ ಅಕ್ಟೋಬರ್ 31ರವರೆಗೆದಂದು ಸ್ಥಗಿತಗೊಳ್ಳಲಿದೆ.
  • ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16515): ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಯಶವಂತಪುರದಿಂದ ಕಾರವಾರಕ್ಕೆ ತೆಳುತ್ತಿದ್ದ ರೈಲು ಸಂಚಾರವು ಜೂನ್ 2 ರಿಂದ ಅಕ್ಟೋಬರ್ 31ರವರೆಗೆ ರದ್ದಾಗಲಿದೆ.
  • ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16516): ಪ್ರತಿ ಮಂಗಳವಾರ, ಗುರುವಾರ ಮತ್ತು ಶನಿವಾರ ಕಾರವಾರದಿಂದ ಯಶವಂತಪುಕ್ಕೆ ಪ್ರಯಾಣಿಸುತ್ತಿದ್ದ ರೈಲು ಜೂನ್ 3ರಿಂದ ನವೆಂಬರ್ 1ರವರೆಗೆ ತನ್ನ ಸಂಚಾರವನ್ನು ಸ್ಥಗಿತಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...