ದೇಶದಲ್ಲಿಯೇ ಮುಂಚೂಣಿ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆ ಕೆಎಸ್‌ಆರ್‌ಟಿಸಿಯದ್ದು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Date:

  • ಕೆಎಸ್‌ಆರ್‌ಟಿಸಿಯ 62ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ
  • ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವ

‘ಸಾರ್ವಜನಿಕರಿಗೆ ಸಮರ್ಪಕವಾದ ಸೇವೆಯನ್ನು ಒದಗಿಸುವ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಸಾರಿಗೆ ಸಂಸ್ಥೆಯೆಂಬ ಹೆಗ್ಗಳಿಕೆಯನ್ನು ಹೊಂದಿದೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

- Advertisement -

ನಿಗಮದ 62ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

‘ಕೋವಿಡ್ ಸಂದರ್ಭದಲ್ಲಿ ಉಂಟಾದ ಆರ್ಥಿಕ ಸಂಕಷ್ಟದಿಂದ ನೂತನ ವಾಹನಗಳನ್ನು ಖರೀದಿಸಲಾಗದ ಪರಿಸ್ಥಿತಿಯಲ್ಲಿದ್ದಾಗ 8 ರಿಂದ 9 ಲಕ್ಷ ಕಿ.ಮಿ. ಕ್ರಮಿಸಿದ ತನ್ನ ಹಳೆಯ ಕವಚ ದುರಸ್ತಿ ವಾಹನಗಳನ್ನು ಪುನಶ್ಚೇತನಗೊಳಿಸಲಾಗಿದೆ. ಆ ಮೂಲಕ ಇನ್ನೂ ಆ ವಾಹನಗಳನ್ನು 4-5 ಲಕ್ಷ ಕಿ.ಮಿ.ವರೆಗೆ ಕಾರ್ಯಾಚರಣೆಗೊಳಿಸಲು ಯೋಜನೆಯನ್ನು ರೂಪಿಸಿ, ಹಳೆಯ ವಾಹನಗಳನ್ನು ಹೊಸ ವಾಹನಗಳಂತೆ ಪರಿವರ್ತಿಸಿ ಚಾಲನೆಗೆ ಬಳಸಿಕೊಳ್ಳುತ್ತಿರುವುದು ಖುಷಿ ಕೊಟ್ಟಿದೆ’ ಎಂದು ಸಿಬ್ಬಂದಿಗೆ ಸಚಿವರು ಅಭಿನಂದನೆ ಸಲ್ಲಿಸಿದರು.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಲ್ಲಿನ ಲಭ್ಯವಿರುವ ಅನುಕಂಪಕದ ಅವಲಂಬಿತ ಖಾಲಿ ಹುದ್ದೆಗಳನ್ನು ಯಾವುದೇ ವಿಳಂಬವಿಲ್ಲದೇ ತುಂಬಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದರು.

‘ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆಯಾದ ‘ಶಕ್ತಿ ಯೋಜನೆ’ಯು ಮಹಿಳೆಯರ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ. ಆದರೆ ಉಚಿತ ಪ್ರಯಾಣ ಕೊಟ್ಟಿರುವುದು ಕೆಲವರಿಗೆ ತಡೆಯಲಿಕ್ಕಾಗುತ್ತಿಲ್ಲ. ಪ್ರತಿದಿನ ನಾಲ್ಕೂ ನಿಗಮದಲ್ಲಿ ಒಂದು ಲಕ್ಷದ ಐವತ್ತಾರು ಸಾವಿರ ಟ್ರಿಪ್ ನೀಡಲಾಗುತ್ತಿದೆ. ಯಾವುದಾದರೊಂದು ಸಣ್ಣ ಘಟನೆ ಆಗಿಬಿಟ್ಟರೆ ಅದನ್ನೇ ದೊಡ್ಡದು ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ ಹಾಕಲಾಗುತ್ತಿದೆ. ಆದರೆ ಎಲ್ಲ ರಾಜಕೀಯ ಅಪಪ್ರಚಾರ ಮೀರಿ ಶಕ್ತಿ ಯೋಜನೆ ಯಶಸ್ಸು ಕಂಡಿದೆ. ಇದಕ್ಕೆ ಸಿಬ್ಬಂದಿಯ ಪ್ರಯತ್ನ ಕೂಡ ಕಾರಣ’ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಸಮಾರಂಭದಲ್ಲಿ ಅಪಘಾತ ಪರಿಹಾರ ನಿಧಿ ಯೋಜನೆಯಡಿ 20 ನೂತನ ಬೊಲೆರೋ ವಾಹನಗಳ ಸೇರ್ಪಡೆ, ‘ಶಕ್ತಿ’ ಯೋಜನೆಯ ಕುರಿತ ವಿಶೇಷ ಆಂತರಿಕ ನಿಯತಕಾಲಿಕ ‘ಸಾರಿಗೆ ಸಂಪದ’ ಬಿಡುಗಡೆ, ಸಾರಿಗೆ ಮಿತ್ರ ಹೆಚ್.ಆರ್.‌ಎಂ.ಎಸ್‌ ಯೋಜನೆ ಹಾಗೂ ಸಾರಿಗೆ ವಿದ್ಯಾ ಚೇತನ ಯೋಜನೆಗೆ ಚಾಲನೆ, ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್, ಬಿ.ಎಂ.ಟಿ.ಸಿ ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ ಜಿ, ಆಡಳಿತ ಮಂಡಳಿ, ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು, ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....