ತುಮಕೂರು | ಸಿದ್ದರಾಮಯ್ಯ ಬಳಿಕ ದಲಿತರಿಗೆ ಸಿಎಂ ಸ್ಥಾನ ನೀಡಿ: ಜ್ಞಾನಪ್ರಕಾಶ್ ಸ್ವಾಮೀಜಿ

Date:

Advertisements

ಸಿದ್ದರಾಮಯ್ಯನವರ ಬಳಿಕ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮೈಸೂರಿನ ಜ್ಞಾನಪ್ರಕಾಶ್ ಸ್ವಾಮೀಜಿ ಒತ್ತಾಯಿಸಿದರು.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ತಾಲೂಕು ಛಲವಾದಿ ಮಹಾಸಭಾದಿಂದ ಆಯೋಜಿಸಿದ್ದ ಶ್ರೀಜ್ಞಾನಪ್ರಕಾಶ್ ಸ್ವಾಮೀಜಿ ಅವರಿಗೆ ಅಭಿನಂದನಾ ಸಮಾರಂಭ ಮತ್ತು ಚಲವಾದಿ ಮಹಾಸಭಾ ಪದಾಧಿಕಾರಿಗಳ ಪದಗ್ರಹಣ  ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಜನತೆಗೆ ಸಮುದಾಯಕ್ಕನುಗುಣವಾಗಿ ಜಾತಿವಾರು ಜನಸಂಖ್ಯೆ ತಿಳಿಯಬೇಕಿದೆ. ಜಾತಿಗಣತಿ ವರದಿಯನ್ನು ಸರ್ಕಾರ ಬಹಿರಂಗಪಡಿಸಬೇಕು ಸಂವಿಧಾನದ ಆಶಯದಂತೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದರು.

Advertisements

ಸ್ವಾಭಿಮಾನಿ ಸಮುದಾಯದ ಹಿತಕ್ಕಾಗಿ ಬದುಕಿರುತ್ತಾನೆ, ಸ್ವಾರ್ಥಿ ತನಗಾಗಿ ಬದುಕಿರುತ್ತಾನೆ. ಚಲವಾದಿ ಸಮುದಾಯಕ್ಕೆ ಅತ್ಯಂತ ಸ್ವಾಭಿಮಾನಿ ಪರಂಪರೆ ಇದೆ. ಅಂಬೇಡ್ಕರ್ ಅವರು ಮನಸ್ಮೃತಿಯನ್ನು ಸುಡುವ ಮೂಲಕ ಎಲ್ಲ ಸಮುದಾಯಗಳಿಗೂ ಬದುಕುವ ಹಕ್ಕನ್ನು ನೀಡಿದ್ದಾರೆ ಎಂದರು.

ಈ ದೇಶದಲ್ಲಿ ದಲಿತ ಸಮುದಾಯಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ದಲಿತ ಸಮುದಾಯಗಳು ಸಂಘಟಿತರಾದರೆ ಈ ದೇಶದಲ್ಲಿ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಬಹುದು. ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು ಆಗ ಮಾತ್ರ ಅಂಬೇಡ್ಕರ್ ವಾದಿಗಳಾಗಲು ಸಾಧ್ಯ ಎಂದು ತಿಳಿಸಿದರು.

ವೈದ್ಯ  ಡಾ. ನಾಗಭೂಷಣ್ ಮಾತನಾಡಿ ಭೀಮವಾದ ಸೋಲುವ ಆತಂಕ ಎದುರಾಗಿದೆ ಮನುಸ್ಮೃತಿ ವಿಜೃಂಭಿಸುತ್ತಿದೆ, ನಾವೆಲ್ಲಾ ವಿದ್ಯಾವಂತರು, ಪ್ರಜ್ಞಾವಂತರು ಈ ವಿಚಾರವನ್ನು ಗ್ರಹಿಸಬೇಕು ಗ್ರಹಿಸಿ ಜಾಗೃತರಾಗಿ ಹೋರಾಟ ಮಾಡಬೇಕು ಮುಂದಿನ ತಲೆಮಾರಿಗೆ ಹಾದಿ ಸುಗಮ ಮಾಡಿಕೊಡಬೇಕು ಮತ್ತು ಈ ದೇಶದ ಮೂಲ ನಿವಾಸಿಗಳಿಗೆ ಸಂವಿಧಾನಬದ್ಧವಾಗಿ ದೊರಕಬಹುದಾದ ಹಕ್ಕುಗಳಿಗಾಗಿ ಎಲ್ಲರೂ ಸಂಘಟಿತರಾಗಿ ಹೋರಾಟ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೀಬಸವವಾನಂದ ಸ್ವಾಮೀಜಿ, ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಈರಣ್ಣ, ಗೌರವಾಧ್ಯಕ್ಷ ಲೋಕೇಶ್, ಯುವ ಘಟಕದ ಅಧ್ಯಕ್ಷ ಎಚ್ ಕೆ ಮಧು, ಡಾ ನಾಗಭೂಷಣ್, ಶ್ವೇತ ಜಗದೀಶ್, ಸಾತೇನಹಳ್ಳಿ ರಮೇಶ್, ನಾಗರಾಜು, ವತ್ಸಲ,  ಹಾಗೂ ಚಲವಾದಿ ಮಹಾಸಭಾ ಪದಾಧಿಕಾರಿಗಳು ಮತ್ತು ಸಮುದಾಯದ ಜನರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X