ತುಮಕೂರು | ಅಂಬೇಡ್ಕರ್ ಉತ್ತರಾಧಿಕಾರಿ ಬಿ.ಬಸವಲಿಂಗಪ್ಪ ಮಾತ್ರ: ಪ್ರೊ. ಕಾಳೇಗೌಡ ನಾಗವಾರ

Date:

Advertisements

ಅಂಬೇಡ್ಕರ್ ಅವರ ಉತ್ತರಾಧಿಕಾರಿ ಎಂದರೆ ಅದು ಬಿ.ಬಸವಲಿಂಗಪ್ಪ ಅವರು ಮಾತ್ರ ಎಂದು ಲೇಖಕ ಪ್ರೊ. ಕಾಳೇಗೌಡ ನಾಗವಾರ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಸ್ಪತ್ರೆ ಸಭಾಂಗದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿ ಮತ್ತು ಬಂಡಾಯ ಸಾಹಿತ್ಯ ಸಂಘಟನೆ ಸಂಯುಕ್ತಾಶ್ರಯದಲ್ಲಿ ಭಾನುವಾರ (ನ.26) ಸಂಜೆ  ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಮತ್ತು ಬಿ. ಬಸವಲಿಂಗಪ್ಪ ಸ್ಮರಣ ಉಪನ್ಯಾಸ ಕಾರ್ಯಕ್ರಮವನ್ನು ಲೇಖಕ ಪ್ರೊ. ಕಾಳೇಗೌಡ ನಾಗವಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಬಿ. ಬಸವಲಿಂಗಪ್ಪ ಅವರು ಕನ್ನಡ ಸಾಹಿತ್ಯವನ್ನು ಬೂಸಾ ಎನ್ನಲಿಲ್ಲ. ಹೊಸ ಚಿಂತನೆ, ಹೊಸ ಆಯಾಮದ ಕಡೆಗೆ ಸಾಹಿತ್ಯ ಹೊರಳಬೇಕೆಂಬ ಉದ್ದೇಶದಿಂದ, ಬೂಸಾ ಎಂದರೆ ಹೊರತು ಸಾಹಿತ್ಯವನ್ನಲ್ಲ. ಆದರೆ 12ನೇ ಶತಮಾನದಲ್ಲಿ ಅಕ್ಕಮಹಾದೇವಿ ಹೇಳಿದ ಮಾತನ್ನು, 20ನೇ ಶತಮಾನದಲ್ಲಿ ಸತ್ಯ ಹೇಳಿ ಮಂತ್ರಿ ಪದವಿಯನ್ನೇ ಕಳೆದುಕೊಂಡ ಮಹಾವ್ಯಕ್ತಿ ಬಸವಲಿಂಗಪ್ಪ, ಮತ್ತೊಬ್ಬರು ಡಾ. ಬಿ.ಆರ್. ಅಂಬೇಡ್ಕರ್ ಎಂದರು.

Advertisements

ಮುಖ್ಯಮಂತ್ರಿಯಾಗಿದ್ದ ಕೆಂಗಲ್ ಹನುಮಂತಯ್ಯ ಅವರು ಬಡವರ ಹಣದಲ್ಲಿ ದೇಗುಲ ನಿರ್ಮಾಣ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿ ಪತ್ರ ಬರೆದ ನನ್ನ ದೈರ್ಯವನ್ನು ಮೆಚ್ಚಿ, ತಮ್ಮ ಅಪ್ತ ಬಳಗಕ್ಕೆ ಸೇರಿಸಿಕೊಂಡರು. ಅವರಿಗೆ ಎಲ್ಲ ವರ್ಗದ ಪ್ರಗತಿಪರ ಬರಹಗಾರರ ಸ್ನೇಹವಿತ್ತು. ಕೊನೆಯವರೆಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಉತ್ತರಾಧಿಕಾರಿಯಾಗಿ ಉಳಿದವರು ಬಿ. ಬಸವಲಿಂಗಪ್ಪ ಮಾತ್ರ ಎಂದರು.

ಬಸವಲಿಂಗಪ್ಪ ಅವರು ತಳಸಮುದಾಯದ ಯುವಕರು ವಿದ್ಯಾವಂತರಾಗಿ ಉದ್ಯೋಗಸ್ಥರಾಗಬೇಕೆಂದು ಬಯಸಿದರು, ದಲಿತರ ದೇವರ ಪೂಜೆಗೆ ವಿರೋಧ ವ್ಯಕ್ತಪಡಿಸಿದರು. ತಲೆ ಮೇಲೆ ಮಲ ಹೊರುವ ಪದ್ಧತಿಯನ್ನು ನಿಷೇಧಿಸಿ ತನ್ನದೇ ಆದ ರೀತಿಯಲ್ಲಿ ಸಮಾಜವನ್ನು ಸುಧಾರಿಸಿದರು. ಬಸವಲಿಂಗಪ್ಪ ಅವರು ಮುಖ್ಯಮಂತ್ರಿಯಾಗಿದ್ದರೆ ದೇವರಾಜ ಅರಸು ಅವರಿಗಿಂತ ಉತ್ತಮ ಆಡಳಿತ ನೀಡುತ್ತಿದ್ದರು ಎನ್ನುವ ಭಯ ಸ್ವತಃ ದೇವರಾಜ ಅರಸರಲ್ಲಿತ್ತು. ದೇವರಾಜ ಅರಸು ಉತ್ತಮ ಆಡಳಿತ ನೀಡುತ್ತಿದ್ದರು ಸಹ ಸಮಾಜ ಸುಧಾರಣೆಗೆ ಇನ್ನಷ್ಟು ಕ್ರಮ ತೆಗೆದುಕೊಳ್ಳಬೇಕೆಂದು ಬಸವಲಿಂಗಪ್ಪ ಒತ್ತಾಯ ಮಾಡುತ್ತಿದ್ದರು ಎಂದು ಸ್ಮರಿಸಿದರು.

ದೇವರಾಜ ಅರಸು ಪ್ರಗತಿಪರರಾಗಿದ್ದರೂ, ಕೆಲ ಕಾನೂನು ತರಲು ಹಿಂಜರಿಯುತ್ತಿದ್ದರು. ಬಸವಲಿಂಗಪ್ಪ ಅವರು ಪೆರಿಯಾರ್ ಅವರು ಮೈಸೂರಿಗೆ ಬಂದಿದ್ದಾಗ ಅವರನ್ನು ನೋಡಲು ಬಯಸಿದ್ದರು. ಆದರೆ, ಅರಸು ಅದು ಸರಕಾರದ ಕಾರ್ಯಕ್ರಮವಾಗುತ್ತದೆ, ಭಾಗವಹಿಸಬೇಡಿ ಎಂದು ಒತ್ತಡ ಹೇರಿದ್ದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾರದೆ ಪರಿತಪಿಸಿದರು. ಆನಂತರ ತಮಿಳುನಾಡಿನ ಜನತೆ ಬಸವಲಿಂಗಪ್ಪ ಅವರನ್ನು ಆಹ್ವಾನಿಸಿ ಕರ್ನಾಟಕದ ಪೆರಿಯಾರ್ ಎಂದು ಅಭಿಮಾನದಿಂದ ಕರೆದಾಗ, ಪೆರಿಯಾರ್ ಕಾರ್ಯಕ್ರಮದಲ್ಲಿ ಭಾಗವಹಿಸದೆ ನಾನೆಂತಹ ತಪ್ಪು ಮಾಡಿದೆ ಎಂದು ಹಲವು ಬಾರಿ ಮರುಗಿದ್ದರು ಎಂದು ಡಾ.ಕಾಳೇಗೌಡ ನಾಗವಾರ ಹೇಳಿದರು.

ದೇಶದಲ್ಲಿ 2600 ವರ್ಷಗಳ ಹಿಂದೆ ಇದ್ದ ಬುದ್ಧನ ನಡೆಯನ್ನು ಅನುಕರಿಸಿದ ಅಂಬೇಡ್ಕರ್ ದೇಶಕ್ಕೆ ಸಂವಿಧಾನ ನೀಡಿದರು. ಅವರು ಅನುಭವಿಸಿದ ಜಾತೀಯತೆಯನ್ನು ಇಂದಿಗೂ ಕಾಣುತ್ತಿರುವುದು ದುರದೃಷ್ಟಕರ. ಕುವೆಂಪು, ಮಾಸ್ತಿ, ಶಿವರಾಮ ಕಾರಂತ ಅವರು ಬುದ್ಧನ ವೈಜ್ಞಾನಿಕ ತತ್ವವನ್ನು ಅನುಕರಿಸಿದರು. ದೇಶದ ಪುರೋಹಿತ ಶಾಹಿಯ ವಿರುದ್ಧ ಹೊರಬಂದ ಮೊದಲ ಕನ್ನಡಿಗ ಬಸವಣ್ಣ. ಅವರು ನಿಜವಾಗಿಯೂ ಪೌರೋಹಿತ್ಯಕ್ಕೆ ವಿರುದ್ಧವಾಗಿ ಧರ್ಮವನ್ನು ಕಟ್ಟಿದರು ಎಂದರು.

ಸಂವಿಧಾನ ಅರ್ಪಣಾ ದಿನದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾಷಣದ ಅಂಶಗಳನ್ನು ಒಳಗೊಂಡ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.

ಎಸ್ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ವೈ.ಕೆ. ಬಾಲಕೃಷ್ಣಪ್ಪ, ಚಿಂತಕ ದೊರೈರಾಜು, ಜಿ.ಪಂ. ಮಾಜಿ ಸದಸ್ಯ ಕೆಂಚಮಾರಯ್ಯ, ಕಲಾವಿದ ಹನುಮಂತೇಗೌಡ, ಡಾ.ಬಸವರಾಜು, ನರಸೀಯಪ್ಪ, ಸಿಎಒ ನರಸಿಂಹಮೂರ್ತಿ, ಚಂದ್ರಪ್ಪ, ಡಾ.ಒ.ನಾಗರಾಜು, ವಕೀಲ ಮಂಜುನಾಥ್ ಎಚ್.ವಿ. ನಾಗಭೂಷಣ್ ಬಗ್ಗನಡು ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X