ತುಮಕೂರು | ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸೈಕಿಯಾಟ್ರಿಕ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

Date:

Advertisements

 ಪ್ರಸ್ತುತ ಯುವ ಜನತೆಯು ಮೋಜು ಮಸ್ತಿ ತಡರಾತ್ರಿಯ ಪಾರ್ಟಿ ಎಂದು ಜೀವನ ಶೈಲಿಯನ್ನು ಬದಲಾಯಿಸಿಕೊಂಡಿದ್ದಾರೆ. ಹದಿಹರೆಯದ ವಯಸ್ಸಿನಲ್ಲಿ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.  ಸಮಾಜದ ಭವಿಷ್ಯ ರೂಪಿಸುವ ಇಂದಿನ ಯುವ ಜನತೆ ಮಾದಕ ವ್ಯಸನದ ಹಿಂದೆ ಬಿದ್ದು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಇದರಿಂದ ಈ ಯುವ ಸಮೂಹವನ್ನ ರಕ್ಷಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸೈಕಿಯಾಟ್ರಿಕ್ ನರ್ಸಿಂಗ್ ವಿಭಾಗದ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಭಿತ್ತಿ ಪತ್ರ ಹಿಡಿದು ಜಾಥಾ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

1001670187

ಟೌನ್ ಹಾಲ್ ವೃತ್ತದಿಂದ ನರ್ಸಿಂಗ್ ವಿದ್ಯಾರ್ಥಿಗಳು ಯುವಕರೇ ಎಚ್ಚೆತ್ತುಕೊಳ್ಳಿ ಮದ್ಯಪಾನ, ಧೂಮಪಾನದ ದಾಸರಾಗಬೇಡಿ ಮಾದಕ ವ್ಯಸನಕ್ಕೆ ಒಳಗಾಗಬೇಡಿ ಎಂದು ಘೋಷ ವಾಕ್ಯಗಳೊಂದಿಗೆ ಬಿತ್ತಿ ಪತ್ರಗಳನ್ನು ಹಿಡಿದು ನಗರದ ಚರ್ಚ್ ಸರ್ಕಲ್ ಮೂಲಕ ದೇವರಾಜು ಅರಸು ಸರ್ಕಾರಿ ಬಸ್ ಟರ್ಮಿನಲ್ ಗೆ ಆಗಮಿಸಿ ಸಾರ್ವಜನಿಕರು ಮತ್ತು ಪ್ರಯಾಣಿಕರಿಗೆ ಫ್ಲಾಶ್ ಮೊಬ್ ಮೂಲಕ ಆಕರ್ಷಿತ ನೃತ್ಯ ಮತ್ತು ನಾಟಕ ಪ್ರದರ್ಶನದೊಂದಿಗೆ ಇಂದಿನ ಯುವ ಜನಾಂಗ ಎತ್ತ ಸಾಗುತ್ತಿದೆ ಎನೆಲ್ಲ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂಬುದರ ಕುರಿತು ವಿದ್ಯಾರ್ಥಿಗಳು ಅರಿವು ಮೂಡಿಸಿದರು. 

ನರ್ಸಿಂಗ್ ವಿಭಾಗದ ಮುಖ್ಯ ಉಪನ್ಯಾಸಕರಾದ ಮೂರ್ಸಿ ದೇವಪ್ರಿಯಾ ಮಾತನಾಡಿ ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿ ಕಾನೂನುಬಾಹಿರ ಚಟುವಟಿಕೆ ಎಂದು ತಿಳಿದಿದ್ದರು. ಇದರಲ್ಲಿ ತೊಡಗಿಸಿಕೊಂಡಿರುವ ಯುವಕರು ಈ ಚಟುವಟಿಕೆಗಳಲ್ಲಿ ಭಾಗಿಗಳಾಗುತ್ತಿದ್ದಾರೆ ನಶೆ ಏರಿಸುವ ಮಾದಕ ಸೇವನೆಯಿಂದ ಅಪಾಯದ ಮುನ್ಸೂಚನೆಗಳಿದ್ದರೂ ಇಂದಿನ ಯುವಕರು ಹಾದಿತಪ್ಪುತ್ತಿದ್ದಾರೆ ಸರ್ಕಾರಗಳು ಎಷ್ಟೇ ಸೂಕ್ತ ಕ್ರಮಗಳನ್ನು ಕೈಗೊಂಡರು ಯುವ ಸಮೂಹ ಮಾದಕ ಸೇವನೆಯ ದಾಸರಾಗುತ್ತಿದ್ದಾರೆ ಇದರಿಂದ ಯುವ ಸಮೂಹವನ್ನ ಕಾಪಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

Advertisements
1001670179

ನರ್ಸಿಂಗ್ ವಿಭಾಗದ ಉಪನ್ಯಾಸಕಿ ಶಿಲ್ಪ  ಮಾತನಾಡಿ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ತುಮಕೂರು ನಗರದ ಪ್ರಮುಖ ರಸ್ತೆಗಳಲ್ಲಿ ಬಿತ್ತಿ ಪತ್ರಗಳನ್ನು ಹಿಡಿದ ನಮ್ಮ ವಿದ್ಯಾರ್ಥಿಗಳು ಜನತೆಗೆ ಮಾದಕ ವ್ಯಸನ ದುಷ್ಪಾರಿಣಾಮಗಳ ಕುರಿತು ಅರಿವು ಮೂಡಿಸುವ ಕೆಲಸವನ್ನು ಮಾಡಿದರು. ಒಟ್ಟು ನೂರು 120 ವಿದ್ಯಾರ್ಥಿಗಳ ತಂಡ ನಗರದ ದೇವರಾಜ ಅರಸು ಸರ್ಕಾರಿ ಬಸ್ ನಿಲ್ದಾಣದಲ್ಲಿ ಬರುವ ಪ್ರಯಾಣಿಕರು ಮತ್ತು ಸಾರ್ವಜನಿಕರಿಗೆ ಯುವಕರು ಇಂದು ಮಾದಕ ವ್ಯಸನಕ್ಕೆ ಹೇಗೆ ದಾಸರಾಗುತ್ತಿದ್ದಾರೆ ಎಂಬ ವಿಷಯವನ್ನು ಪ್ಲಾಶ್ ಮೊಬ್ ಮೂಲಕ ,ನಾಟಕ ಪ್ರದರ್ಶನದ ಮೂಲಕ ಸಾರ್ವಜನಿಕರ ಗಮನ ಸೆಳೆದು ಮಾದಕ ವ್ಯಸನದಿಂದ ಯುವ ಸಮೂಹವನ್ನು ರಕ್ಷಿಸುವಂತೆ ಜನರಲ್ಲಿ ಜಾಗೃತಿಗೊಳಿಸುವ ಕೆಲಸವನ್ನು ಮಾಡಿದ್ದೇವೆ ಇದಕ್ಕೆ ಸಹಕರಿಸಿದ ಪೋಲಿಸ್ ಇಲಾಖೆ ಮತ್ತು ಕೆಎಸ್ ಆರ್ ಟಿಸಿ ನಿಗಮ ಅಧಿಕಾರಿಗಳಿಗೆ ಧನ್ಯವಾದಗಳು ಎಂದು ತಿಳಿಸಿದರು.

 ಇದೇ ಸಂದರ್ಭದಲ್ಲಿ ವಿಭಾಗದ ಮಾರ್ಸಿದೇವಪ್ರಿಯ, ಶಿಲ್ಪ, ಚೇತನ್, ಅನುಪಮಾ, ಗಗನ, ಶ್ವೇತಾ ಸೇರಿದಂತೆ ಇತರರು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X