ತುಮಕೂರು | ರಾಷ್ಟ್ರೀಯ ಭಾಷಾ ಮತ್ತು ಉದ್ಯೋಗ ನೀತಿ ರಚನೆಗೆ ಬರಗೂರು ರಾಮಚಂದ್ರಪ್ಪ ಒತ್ತಾಯ

Date:

Advertisements

ರಾಷ್ಟ್ರದ ಎಲ್ಲಾ ರಾಜ್ಯಗಳ ಭಾಷೆಗಳು ಸಮಾನವೆನ್ನಲು ರಾಷ್ಟ್ರೀಯ ಭಾಷಾ ನೀತಿ ರಚನೆಯಾಗಬೇಕೆಂಬ ಹೋರಾಟ ನಮ್ಮದು ಎಂದು ಹಿರಿಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದರು. 

ತುಮಕೂರು ಜಿಲ್ಲಾಡಳಿತ ವತಿಯಿಂದ ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು-ನುಡಿ ಕುರಿತು ಶುಕ್ರವಾರ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, 

 ಹಿಂದಿ ಭಾಷೆಗೆ ದೊರೆಯುತ್ತಿರುವ ವಿಶೇಷ ಪ್ರಾಶಸ್ತ್ಯ ಇತರೆ ಭಾಷೆಗಳಿಗೆ ಸಿಗದಿರುವುದು ವಿಪರ್ಯಾಸ. ಹಿಂದಿ ಭಾಷೆ ರಾಷ್ಟ್ರ ಭಾಷೆಯಲ್ಲ. ಹಿಂದಿಯಂತೆ ಕನ್ನಡಕ್ಕೂ ಪ್ರಾಶಸ್ತ್ಯ ದೊರೆಯಬೇಕು. ಕನ್ನಡಕಷ್ಟೆ ಅಲ್ಲದೆ, ದೇಶದ ಇತರೆ ರಾಜ್ಯಗಳ ಭಾಷೆಗಳಿಗೂ ಪ್ರಾಶಸ್ತ್ಯ ದೊರೆಯಬೇಕೆಂದು ನಮ್ಮ ಆಗ್ರಹವಿದೆ. 

Advertisements

ಅದೇ ರೀತಿ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ದೊರೆಯಬೇಕು. ಇದಕ್ಕಾಗಿ ರಾಷ್ಟ್ರೀಯ ಉದ್ಯೋಗ ನೀತಿ ರಚನೆಯಾಗಬೇಕೆಂಬ ಹಕ್ಕೊತ್ತಾಯ ನಮ್ಮದು. ಇಲ್ಲದೆ ಹೋದರೆ ಎಲ್ಲ ರಾಜ್ಯ ಭಾಷೆಗಳು 2ನೇ ಹಾಗೂ 3ನೇ ದರ್ಜೆಯಲ್ಲಿಯೇ ಉಳಿಯಬೇಕಾದ ದುಸ್ಥಿತಿಗೆ ತಲುಪಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. 

ಕನ್ನಡಕ್ಕೆ 2008ರ ನವೆಂಬರ್ 1ರಂದು ಶಾಸ್ತ್ರೀಯ ಸ್ಥಾನಮಾನ ನೀಡಿದ್ದರೂ ಸಹ ಶಾಸ್ತ್ರೀಯ ಭಾಷೆಗೆ ಸಂಬಂಧಿಸಿದ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲು ಕರ್ನಾಟಕಕ್ಕೆ ಈವರೆಗೂ ಸಾಧ್ಯವಾಗಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ತಮಿಳು ನಾಡಿನಲ್ಲಿ ಇಂತಹದೊಂದು ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಕೇಂದ್ರದ ಮಾನವ ಸಂಪನ್ಮೂಲ ಇಲಾಖೆಯಿಂದ ಅನುಮತಿ ಪಡೆದು ಕನ್ನಡದ ಪ್ರತ್ಯೇಕ ಶಾಸ್ತ್ರೀಯ

ಭಾಷಾ ಸಂಸ್ಥೆ ಸ್ಥಾಪನೆಗೆ ಮುಂದಾಗಬೇಕೆಂದು ಗೃಹ ಸಚಿವರಲ್ಲಿ ಅವರು ಮನವಿ ಮಾಡಿದರಲ್ಲದೆ ಪ್ರತ್ಯೇಕ ಶಾಸ್ತ್ರೀಯ ಭಾಷಾ ಸಂಸ್ಥೆ ಸ್ಥಾಪನೆಯಿಂದ ರಾಜ್ಯ ಭಾಷೆಗಳು ಮತ್ತಷ್ಟು ಬಲಗೊಳ್ಳಲು ಸಾಧ್ಯವೆಂದು ತಿಳಿಸಿದರು. 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X