ತುಮಕೂರು | ಅ.26ರಂದು ಭೀಮಜ್ಯೋತಿ ರಥಯಾತ್ರೆಗೆ ಚಾಲನೆ

Date:

Advertisements

ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಅಕ್ಟೋಬರ್ 26ರಂದು ಅಂಬೇಡ್ಕರ್ ಭವನದ ಪ್ರಗತಿಪರ ಚಿಂತಕರಿಂದ ಭೀಮಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಆದಿಜಾಂಬವ ಕ್ಷೇಮಾಭಿವೃದ್ಧಿ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಸಿ ಎಸ್ ಮೂರ್ತಿ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆದಿಜಾಂಬವ ಸೇವಾ ಸಮಿತಿ, ದಸಂಸ ಛಲವಾದಿ ಮಹಾಸಭಾ, ವಾಲ್ಮೀಕಿ ಮಹಾಸಭಾ ಹಾಗೂ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ನವೆಂಬರ್ ತಿಂಗಳಿನಲ್ಲಿ ತುರುವೇಕೆರೆಯಲ್ಲಿ ಭೀಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಎಲ್ಲ ಗ್ರಾಮಗಳಿಗೆ ಭೀಮಜ್ಯೋತಿ ಕೊಂಡೊಯ್ಯುವ ಮೂಲಕ ಜನಜಾಗೃತಿ ಮೂಡಿಸಲಾಗುವುದು. ಸಂವಿಧಾನದ ಆಶಯಗಳನ್ನು ಕಾಪಾಡುವ ಮಹತ್ವಾಕಾಂಕ್ಷೆಯ ಭೀಮೋತ್ಸವ ಕಾರ್ಯಕ್ರಮವನ್ನು ಜನರಿಗೆ ತಲುಪಿಸುವ ಸದುದ್ದೇಶವನ್ನು ಸಮಿತಿ ಹೊಂದಿದೆ” ಎಂದು ಮಾಹಿತಿ ನೀಡಿದರು.

“ಭೀಮಜ್ಯೋತಿ ರಥಯಾತ್ರೆಗೆ ಪೂರಕ ಸಿದ್ಧತೆಗಳು ಭರದಿಂದ ಸಾಗಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಭೀಮಜ್ಯೋತಿ ಸಂಚಾರಕ್ಕೆ ಪೂರಕವಾಗಿ ಯುವಪಡೆಯನ್ನು ಸಜ್ಜುಗೊಳಿಸಲಾಗಿದೆ. ಭೀಮಜ್ಯೋತಿ ರಥಯಾತ್ರೆ ಪ್ರತಿ ಗ್ರಾಮಗಳಲ್ಲಿ ಸಂಚರಿಸುವ ವೇಳೆ ಸ್ಥಳೀಯರು ಹೆಚ್ಚಿನ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ; ಕಾಲಮಿತಿಯೊಳಗೆ ಪೂರ್ಣಗೊಳಿಸಲು ಗೃಹ ಸಚಿವರ ಸೂಚನೆ

ಸುದ್ದಿಗೋಷ್ಠಿಯಲ್ಲಿ ಬೀಚನಹಳ್ಳಿ ರಾಮಣ್ಣ, ಜಿ.ಪಂ. ಮಾಜಿ ಸದಸ್ಯ ಹನುಮಂತಯ್ಯ, ಪ.ಪಂ. ಸದಸ್ಯ ಚಿದಾನಂದ್, ಬಡಾವಣೆ ಶಿವರಾಜ್, ರೋಹಿತ್, ವಸಂತ್, ಛಲವಾದಿ ಮಹಾಸಭಾದ ಜಗದೀಶ್, ಹೊನ್ನೇನಹಳ್ಳಿ ಕೃಷ್ಣಪ್ಪ, ಕೃಷ್ಣಮಾದಿಗ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X