ತುಮಕೂರು | ದಸರಾ ಉದ್ಘಾಟಕರ ಆಯ್ಕೆಯ ವಿಷಯದಿಂದ ಬಿಜೆಪಿ ಮುಖವಾಡ ಅನಾವರಣ : ಮಂಜುನಾಥ್ ಹೆತ್ತೇನಹಳ್ಳಿ

Date:

Advertisements

ಅಸಮಾನತೆಯನ್ನೇ ತನ್ನ ಆಂತರ್ಯದಲ್ಲಿರಿಸಿಕೊಂಡಿರುವ ಬಿಜೆಪಿ ಮುಖವಾಡ ದಸರಾ ಉದ್ಘಾಟಕರ ಆಯ್ಕೆಯ ವಿಷಯದಲ್ಲಿ ಅನಾವರಣವಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ್ ಹೆತ್ತೇನಹಳ್ಳಿ ಹೇಳಿದರು.

ಕನ್ನಡದ ಘಮಲನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಪಸರಿಸಿರುವ ಬಾನು ಮುಷ್ತಾಕ್
ಅವರ ಸಾಧನೆಗೆ ಧಕ್ಕೆ ಬರುವಂತೆ ಬಿಜೆಪಿ ನಡೆದು ಕೊಳ್ಳುತ್ತಿದೆ. ಮಹಿಳೆಯರು ಮತ್ತು ಕನ್ನಡ ನಾಡಿಗೆ ಸೇವೆ ಸಲ್ಲಿಸಿದವರ ಬಗೆಗಿನ ಬಿಜೆಪಿಯ ಕೊಳಕು ಮನಸ್ಥಿತಿ ಈಗ ಅನಾವರಣವಾಗಿದೆ. ಮುಸ್ಲಿಮರನ್ನು ದ್ವೇಷಿಸಲು ಹೋಗಿ ಬಹುಜನರ ಆಹಾರ ಪದ್ಧತಿಯಬಗ್ಗೆ ಅವಹೇಳನ ಮಾಡುತ್ತಿರುವುದು ಖಂಡನೀಯ. ಬಿಜೆಪಿಗೆ ಈಗ ಸ್ಪಷ್ಟನೆ ನೀಡುವ ಸವಾಲೊಂದು ಎದುರಾಗಿದೆ. ಮಹಿಳಾ ವಿರೋಧಿ, ಮಾಂಸಹಾರ ವಿರೋಧಿ ಹೇಳಿಕೆಯನ್ನು ಬಿಜೆಪಿ ನೇರವಾಗಿ ನೀಡುವ ಮೂಲಕ ತಮ್ಮ ನಿಲುವನ್ನು ಸಾಭೀತುಪಡಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಸರ್ವರಿಗೂ ಘನತೆಯಿಂದ ಬದುಕುವ ಹಕ್ಕು ನೀಡಿರುವ ಸಂವಿಧಾನದ ವಿರೋಧಿ ಹೇಳಿಕೆ‌ ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆ ಖಂಡನೀಯ. ಅವರ ಸ್ಥಾನಕ್ಕೆ ಘನತೆ ಬರುವಂತೆ ಅವರು ನಡೆದುಕೊಳ್ಳಬೇಕು ಎಂದರು.

ಸಿದ್ದರಾಮಯ್ಯ ನವರ ಆಯ್ಕೆ ಸಾಮಾಜಿಕ‌ ನ್ಯಾಯವನ್ನು ಎತ್ತಿ ಹಿಡಿದಿದೆ. ಈ ಬಾರಿ ದಸರಾ ಉದ್ಘಾಟಕರನ್ನಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡುವ ಮೂಲಕ ನಾಡಹಬ್ಬವನ್ನು ಅರ್ಥಪೂರ್ಣ ಹಬ್ಬವನ್ನಾಗಿ ಮಾಡಿದ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು ಎಂದು ಮಂಜುನಾಥ್ ಹೆತ್ತೇನಹಳ್ಳಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X