ತುಮಕೂರು | ಗೃಹ ಸಚಿವರ ತವರು ಜಿಲ್ಲೆಯ ಆಸ್ಪತ್ರೆಗಳಲ್ಲಿ ಲಂಚಾವತಾರ; ದಂಗಾದ ಮುಖ್ಯ ಜಾಗೃತ ಅಧಿಕಾರಿ

Date:

Advertisements

ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರ ತವರು ಜಿಲ್ಲೆಯಾದ ತುಮಕೂರು ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಲಂಚಾವತಾರ ನೋಡಿ ಮುಖ್ಯ ಜಾಗೃತ ಅಧಿಕಾರಿ ಕುಪ್ಪೆ ಶ್ರೀನಿವಾಸ್ ದಂಗಾಗಿದ್ದಾರೆ.

ಗೃಹ ಸಚಿವರ ತವರು ಜಿಲ್ಲೆ ಹಾಗೂ ಸಹಕಾರ ಸಚಿವ ರಾಜಣ್ಣನವರ ಕ್ಷೇತ್ರಗಳಲ್ಲಿ ಇರುವ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಲು ಮತ್ತು ಇತರೆ ವೈದ್ಯಕೀಯ ಸೇವೆಗೆ ದೀನ ದುರ್ಬಲರು ಬಡವರು ಲಂಚ ನೀಡದೆ ಇದ್ದರೆ ಸೇವೆಯೇ ಇಲ್ಲ ಎಂಬಂತಾಗಿದೆ.

ಬ್ಯಾಲ್ಯ ಪ್ರಾಥಮಿಕ ಆಸ್ಪತ್ರೆಯ ವ್ಯಾಪ್ತಿಯ ವಡ್ಡರಹಟ್ಟಿ ಕಾವೇರಿ ಎಂಬ ಮಹಿಳೆಯಿಂದ ನರ್ಸ್ ಅನುಸೂಯಮ್ಮ ₹5,000ಗಳನ್ನು ಹೆರಿಗೆ ಮಾಡಿಸಲು ಪಡೆದಿದ್ದರು. ಹಾಗೆಯೇ ನಿಹಾರಿಕಾ ಎಂಬ ಮಹಿಳೆಯಿಂದ ಪಡೆದಿದ್ದ ₹1,300 ಮತ್ತು ದೊಡ್ಡೇರಿ ಹೋಬಳಿಯ ವೃದ್ಧೆ ಕಡೆಯ ರಂಗನಾಥ್ ಕಡೆಯಿಂದ ಪಡೆದ ₹3,800 ಲಂಚದ ಹಣವನ್ನು ತುಮಕೂರು ಘಟಕದ ನೈಜ ಹೋರಾಟಗಾರರ ವೇದಿಕೆಯ ಸದಸ್ಯರು ಆಡಳಿತ ವೈದ್ಯಾಧಿಕಾರಿ ಗಂಗಾಧರ್ ಅವರಿಂದ ವಾಪಸ್ ಕೊಡಿಸಿದ್ದಾರೆ.

Advertisements

ಬೆಂಗಳೂರಿನ ಆರೋಗ್ಯ ಸೌಧದಿಂದ ಮಧುಗಿರಿ ತಾಲೂಕು ಮತ್ತು ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಪುರವರ ಹೋಬಳಿ ಬ್ಯಾಲ್ಯ ಆಸ್ಪತ್ರೆಗಳಿಗೆ ಮುಖ್ಯ ಜಾಗೃತಾ ಅಧಿಕಾರಿ ಕುಪ್ಪೆ ಶ್ರೀನಿವಾಸ್ ಅವರು ಭೇಟಿ ನೀಡುವ ಮುನ್ಸೂಚನೆ ತಿಳಿದು, ತುಮಕೂರು ಘಟಕದ ನೈಜ ಹೋರಾಟಗಾರರ ವೇದಿಕೆಯ ಸದಸ್ಯ ಹಂದ್ರಾಳ್ ನಾಗಭೂಷಣ್, ಮಧುಗಿರಿ ಮಹೇಶ್, ಸತೀಶ್ ಟಿ ಪಿ ಅರಳಾಪುರ ರಮೇಶ್ ಅವರು ಮಧುಗಿರಿ ಮತ್ತು ಕೊರಟಗೆರೆ ವಿಧಾನಸಭಾ ವ್ಯಾಪ್ತಿಯ ವ್ಯಾಪ್ತಿಯ ಬ್ಯಾಲ್ಯ ಆಸ್ಪತ್ರೆಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮುಖ್ಯ ಜಾಗೃತ ದಳದ ಅಧಿಕಾರಿಗೆ ಲಂಚದ ಹಣದ ಸಹಿತ ವಾಸ್ತವ ಸ್ಥಿತಿಗಳನ್ನು ಕಣ್ಣೆದುರೇ ಬಿಚ್ಚಿಟ್ಟರು.

“ತುಮಕೂರು ಆಸ್ಪತ್ರೆಗಳ ಲಂಚದ ಬಗ್ಗೆ ಹಂದ್ರಾಳ್ ನಾಗಭೂಷಣ್ ಅವರು ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಇದು ತುಮಕೂರಿನ ಜಿಲ್ಲಾಡಳಿತದ ವೈಫಲ್ಯದಿಂದ ತಾಲೂಕಿನ ಆಸ್ಪತ್ರೆಗಳಲ್ಲಿ ಬಡವರು ಮತ್ತು ದೀನ ದುರ್ಬಲರಿಂದ ಲಂಚ ವಸೂಲಿಯಾಗುತ್ತಿದ್ದು, ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಲಂಚಾವತಾರ ನಡೆಯುತ್ತಿರುವುದು ದುರದೃಷ್ಟಕರ” ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಎಚ್ ಎಂ ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳಮೀಸಲಾತಿಗೆ ಆಗ್ರಹಿಸಿ ಡಿ.17ರಂದು ಮಾದಿಗ ಮುನ್ನಡೆ, ಮಾದಿಗರ ಆತ್ಮಗೌರವ ಸಮಾವೇಶ

“ನೈಜ ಹೋರಾಟಗಾರರ ವೇದಿಕೆಯು ಭ್ರಷ್ಟಾಚಾರದ ವಿರುದ್ಧ ಮತ್ತು ಜನಪರ ಕೆಲಸಗಳಲ್ಲಿ ನಿರಂತರವಾಗಿ ಹೋರಾಟ ಮಾಡುತ್ತಿದ್ದು, ಅವರ ಕಾರ್ಯಗಳು ನಿಜಕ್ಕೂ ಶ್ಲಾಘನೀಯ” ಎಂದು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X