ತುಮಕೂರು | ಆದಿಚುಂಚನಗಿರಿ ವಿವಿಗೆ ಬಸ್ ವ್ಯವಸ್ಥೆ : ಮನವಿಗೆ ಸ್ಪಂದಿಸಿದ ಶಾಸಕ ಎಸ್.ಆರ್ ಶ್ರೀನಿವಾಸ್

Date:

Advertisements

ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸಿದ ಕೆ ಎಸ್‌ ಆರ್‌ ಟಿ ಸಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಎಸ್.ಆರ್ ಶ್ರೀನಿವಾಸ್  ಮನವಿಗೆ ಸ್ಪಂದಿಸಿದ ಶಾಸಕರು ತುಮಕೂರು- ಕುಣಿಗಲ್‌- ಎಡೆಯೂರು ಮಾರ್ಗವಾಗಿ ಬಿ ಜಿ ನಗರಕ್ಕೆ ಬಸ್‌ ಓಡಾಡಲು ಹಸಿರು ನಿಶಾನೆ ತೋರಿದರು. 

ಹತ್ತಾರು ವರ್ಷಗಳ ವಿದ್ಯಾರ್ಥಿಗಳ, ಭಕ್ತರ ಮತ್ತು ರೋಗಿಗಳ ಬೇಡಿಕೆಯಾಗಿದ್ದ ತುಮಕೂರು-ಹೆಬ್ಬೂರು-ಕುಣಿಗಲ್ ಮಾರ್ಗವಾಗಿ ಶ್ರೀಕ್ಷೇತ್ರ ಆದಿಚುಂಚನಗಿರಿ ಹೋಗಲು ಅನುಕೂಲವಾಗುವಂತೆ ಆದಿಚುಂಚನಗಿರಿ ವಿಶ್ವವಿದ್ಯಾನಿಲಯಕ್ಕೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಎಸ್.ಆರ್ ಶ್ರೀನಿವಾಸ್ ಅವರಿಗೆ ಭೖರವೇಶ್ವರ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗೇಗೌಡ, ತುಮಕೂರು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ರವಿ ಗೌಡ, ಕಾಂಗ್ರೆಸ್ ಮುಖಂಡ ಹೆತ್ತೆನಹಳ್ಳಿ ಮಂಜುನಾಥ್, ವಕೀಲ ಸಿ. ಕೆ. ಮಹೇಂದ್ರ ನಿಯೋಗ ಅವರನ್ನೊಳಗೊಂಡ ಶುಕ್ರವಾರ ತುಮಕೂರಿನ ಅವರ ನಿವಾಸದಲ್ಲಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿತು.

ಶ್ರೀ ಆದಿಚುಂಚನಗಿರಿ ಧಾರ್ಮಿಕ ಕ್ಷೇತ್ರವು ಜಿಲ್ಲೆಯಲ್ಲಿ ಅಸಂಖ್ಯಾತ ಭಕ್ತವೃಂದವನ್ನು ಹೊಂದಿದ್ದು ಜೊತೆಗೆ ವಿದ್ಯಾರ್ಜನೆಯಲ್ಲಿ ಇಂದು ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದ್ದು ಉತ್ತಮ ಶಿಕ್ಷಣ ಕಲ್ಪಿಸುತ್ತಿದೆ. ಬಿ ಜಿ ನಗರದ ವಿಶ್ವವಿದ್ಯಾಲಯದ ಆವರಣದಲ್ಲಿ 9 ಶಾಲಾ ಕಾಲೇಜುಗಳು ಭಿನ್ನ, ಭಿನ್ನ ಕೋರ್ಸ್‌ ಗಳನ್ನು ಆಭ್ಯಸಿಸಲು ಅವಕಾಶವಿದೆ. ಇಲ್ಲಿನ ವಿವಿಧ ಕೋರ್ಸ್‌ ಗಳನ್ನು ಅಭ್ಯಾಸ ಮಾಡಲು ತುಮಕೂರು, ಕುಣಿಗಲ್‌ ಮಾರ್ಗದಿಂದ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿನ ನಿತ್ಯ ಓಡಾಡುತ್ತಾರೆ. 

Advertisements

ಅಲ್ಲದೇ ಆದಿಚುಂಚನಗಿರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ರಾಜಧಾನಿಯ ಯಾವ ಹೈ ಟೆಕ್ ಆಸ್ಪತ್ರೆಗಳಿಗೂ ಕಡಿಮೆ ಇಲ್ಲದಂತೆ ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿದೆ. ನರರೋಗ ವಿಭಾಗವು ಅತ್ಯಂತ ಸುಧಾರಿತ ವೈಶಿಷ್ಟ್ಯಗಳನ್ನೊಳಗೊಂಡಿದೆ. ಈ ಕಾರಣಕ್ಕೂ ದಿನಂಪ್ರತಿ ಕನಿಷ್ಟ 50-100 ಜನ ರೈತರು, ಬಡವರು ಚಿಕಿತ್ಸೆಗಾಗಿ ಹೋಗುತ್ತಿದ್ದಾರೆ. ಗೂಳೂರು, ನಾಗವಲ್ಲಿ, ಹೆಬ್ಬುರು ಕಡೆಯಿಂದ ವಿದ್ಯಾರ್ಥಿಗಳು, ರೋಗಿಗಳು, ಭಕ್ತರು ಪ್ರತಿದಿನ ಬಿ. ಜಿ. ನಗರದ ಆಸ್ಪತ್ರೆ ಗೆ ತೆರಳಲು ಪರದಾಡುತ್ತಾರೆ.

ಬಸ್ ಕಲ್ಪಿಸಿಕೊಡುವುದರಿಂದ ಬಡ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಸಮಯಕ್ಕೆ ಸರಿಯಾಗಿ ತಲುಪಲು ಅನುಕೂಲ ಆಗಲಿದೆ. ವಿಶ್ವವಿದ್ಯಾಲಯದ ಆವರಣದಲ್ಲಿರುವ ಆಸ್ಪತ್ರೆಯಲ್ಲಿ ಕಡಿಮೆ ವೆಚ್ಚದ ಚಿಕಿತ್ಸೆ ಪಡೆಯಲು ಬಡವರಿಗೆ ಅನುಕೂಲವಾಗಲಿದೆ ಎಂದು ಭೈರವೇಶ್ವರ ಬ್ಯಾಂಕಿನ ಅಧ್ಯಕ್ಷರಾದ ಚಿಕ್ಕ ರಂಗಣ್ಣ ಅವರು ಶಾಸಕರಿಗೆ ವಿದ್ಯಾರ್ಥಿಗಳ ಕಷ್ಟವನ್ನು ಮನವರಿಕೆ ಮಾಡಿಕೊಟ್ಟರು.

ವಿದ್ಯಾರ್ಥಿಗಳು ದಿನನಿತ್ಯ ಈ ಮಾರ್ಗವಾಗಿ ಪ್ರಯಾಣ ಬೆಳೆಸುತ್ತಿದ್ದು ಬಸ್ ನಲ್ಲಿ ಒಂದು ಗಂಟೆ ತೆಗೆದುಕೊಳ್ಳುವ ಪ್ರಯಾಣ ಎರಡು ಮೂರು ಬಸ್‌ ಹತ್ತಿ ಇಳಿದು ಅಲ್ಲಿಗೆ 3 ಗಂಟೆಯಾಗುತ್ತಿದೆ. ತುಮಕೂರಿನಿಂದ ನೇರವಾಗಿ ಆದಿಚುಂಚನಗಿರಿ ವಿಶ್ವವಿದ್ಯಾನಿಲಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದರೆ ವಿದ್ಯಾರ್ಥಿಗಳಿಗೆ, ಭಕ್ತರಿಗೆ, ರೋಗಿಗಳಿಗೆ, ಅನುಕೂಲವಾಗುತ್ತದೆಂಬ ನಿಯೋಗದ ಮನವಿಗೆ ಸ್ಪಂದಿಸಿದ ಶಾಸಕ ಎಸ್.ಆರ್ ಶ್ರೀನಿವಾಸ್ ರವರು ಒಂದು ವಾರದೊಳಗೆ ಶಾಲಾ ಕಾಲೇಜಿನ ಸಮಯಕ್ಕೆ ಅನುಕೂಲ ವಾಗುವಂತೆ ಬಸ್ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ತುಮಕೂರಿನಿಂದ ಬೆಳಗ್ಗೆ 7.10 ಕ್ಕೆ ಹೊರಡುವ ಈ ಬಸ್‌ ಕುಣಿಗಲ್‌ ಹಾಗೂ ಎಡೆಯೂರು ಮಾರ್ಗವಾಗಿ 8.50ಕ್ಕೆ ಬಿ ಜಿ ನಗರದ ವಿಶ್ವವಿದ್ಯಾನಿಲಯದ ಆವರಣ ತಲುಪಲಿದೆ. ಸಂಜೆ 4.10ಕ್ಕೆ ಅಲ್ಲಿಂದ ಹೊರಡಲಿದೆ. ರೋಗಿಗಳು, ವಿದ್ಯಾರ್ಥಿಗಳು ಮತ್ತು ಎಡೆಯೂರು ಹಾಗೂ ಶ್ರೀ ಕ್ಷೇತ್ರ ಆದಿಚುಂಚನಗಿರಿಯ ಭಕ್ತಾಧಿಗಳಿಗೂ ಅನುಕೂಲವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X