ತುಮಕೂರು | ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ರಾತ್ರೋರಾತ್ರಿ ಪ್ರತಿಭಟನೆಗಿಳಿದ ವಿದ್ಯಾರ್ಥಿನಿಯರು

Date:

Advertisements

ತುಮಕೂರು ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ನಗರದ ಬಿಸಿಎಂ ಇಲಾಖೆಯ ಕಚೇರಿ ಎದುರು ಮಂಗಳವಾರ (ಜ.2) ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಬಿಸಿಡಬ್ಲೂ ಹಾಸ್ಟೆಲ್ ವಿದ್ಯಾರ್ಥಿನಿಯರು ಸಂಜೆ 8ಗಂಟೆ ಸಮಯದಲ್ಲಿ ಹಾಸ್ಟೆಲ್‌ನಿಂದ ನೇರವಾಗಿ ಬಿಸಿಎಂ ಕಚೇರಿ ಎದುರು ಬಂದು ದಿಢೀರನೆ ಪ್ರತಿಭಟನೆ ಕುಳಿತರು.

ಹಾಸ್ಟೆಲ್‌ನಿಂದ ಸುಮಾರು 1 ಕಿ.ಮೀವರೆಗೆ ನಡೆದುಕೊಂಡು ಬಂದ 100ಕ್ಕೂ ಅಧಿಕ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಇಲ್ಲಿ ಇರುವ 300 ವಿದ್ಯಾರ್ಥಿನಿಯರಿಗೆ ಸಮರ್ಪಕವಾದ ಶೌಚಾಲಯ ಇಲ್ಲ. ಒಂದುವರೆ ತಿಂಗಳಿನಿಂದ ಈ ಸಮಸ್ಯೆ ಇದೆ. ಇರುವ ಎರಡು ಶೌಚಾಲಯವನ್ನು 300 ವಿದ್ಯಾರ್ಥಿನಿಯರು ಬಳಸಿಕೊಳ್ಳಬೇಕು. ಇದರಿಂದಾಗಿ ಸಮಸ್ಯೆ ತೀವ್ರವಾಗಿದೆ ಎಂದು‌ ವಿದ್ಯಾರ್ಥಿನಿಯರು ತಮ್ಮ ಸಮಸ್ಯೆ ಹೇಳಿಕೊಂಡರು.

Advertisements

ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಶೌಚಾಲಯ ಸಮಸ್ಯೆಯಿಂದಾಗಿ ತರಗತಿಗೆ ಸರಿಯಾದ ‌ಸಮಯಕ್ಕೆ ಹೋಗಲಾಗುತ್ತಿಲ್ಲ. ರಾತ್ರಿ ಎರಡು ಗಂಟೆಗೆ ಎದ್ದು ಸ್ನಾನಕ್ಕೆ ಹೋಗುವಂತಹ ಪರಿಸ್ಥಿತಿ ಇದೆ. ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಇನ್ನು ರಾತ್ರಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರೂ, ಯಾವೊಬ್ಬ ಅಧಿಕಾರಿಗಳು ಕೂಡ ಸ್ಥಳಕ್ಕೆ ಬಂದಿಲ್ಲ, ಸಮಸ್ಯೆ ಆಲಿಸಿಲ್ಲ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X