ತುಮಕೂರು | ಊರಾಚೆ ಗುಡಿಸಲಲ್ಲಿ ಮಗು ಸಾವು ಪ್ರಕರಣ; ಮೂವರ ವಿರುದ್ಧ ಪ್ರಕರಣ ದಾಖಲು

Date:

Advertisements

ಸೂತಕ-ಸಂಪ್ರದಾಯದ ಹೆಸರಿನಲ್ಲಿ ಹೆರಿಗೆ ನಂತರ ಬಾಣಂತಿ ಮತ್ತು ನವಜಾತ ಶಿಶುವನ್ನು ಊರಾಚೆಯ ಗುಡಿಸಲಲ್ಲಿ ಇಟ್ಟು ಮೌಢ್ಯ ಆಚರಣೆ ಮಾಡಿದ್ದ ಆರೋಪದ ಮೇಲೆ ಬಾಣಂತಿಯ ತಂದೆ, ತಾಯಿ ಮತ್ತು ಗಂಡನ ವಿರುದ್ಧ ಕೋರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಹೈಕೋರ್ಟ್‌ ನಿರ್ದೇಶನದ ಮೇರೆಗೆ ತುಮಕೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶೆ ನೂರುನ್ನಿಸಾ ಅವರು ಅಧಿಕಾರಿಗಳ ತಂಡದೊಂದಿಗೆ ಮಲ್ಲೇನಹಳ್ಳಿ ಗೊಲ್ಲರಹಟ್ಟಿ ಗುಡಿಸಲಿಗೆ ಗುರುವಾರ ಭೇಟಿ ನೀಡಿದ್ದರು.

ಕೋಳಿಗೂಡಿನಂತಹ ಪುಟ್ಟ ಗುಡಿಸಲಲ್ಲಿ ಇರಿಸಲಾಗಿದ್ದ ಬಾಣಂತಿ ಅಪೌಷ್ಟಿಕತೆಯಿಂದ ಬಳಲುತ್ತಿರುವುದನ್ನು ಕಂಡು ಕಿಡಿಕಾರಿದ ಅವರು ನವಜಾತ ಶಿಶುವಿನ ಸಾವಿಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Advertisements

ತಮ್ಮ ಸಮ್ಮುಖದಲ್ಲಿಯೇ ಗುಡಿಸಲು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗುಡಿಸಲು ತೆರವುಗೊಳಿಸಿದ ಬಳಿಕ ಬಾಣಂತಿಯನ್ನು ಗೊಲ್ಲರಹಟ್ಟಿಯ ಆಕೆಯ ಮನೆಗೆ ಕರೆದೊಯ್ಯುವ ಶಾಸ್ತ್ರ ಮುಗಿಸಲಾಯಿತು.

ಅಧಿಕಾರಿಗಳ ತಂಡದೊಂದಿಗೆ ಗೊಲ್ಲರಹಟ್ಟಿಗೆ ತೆರಳಿದ ನ್ಯಾಯಾಧೀಶೆ, ಆಂಬುಲೆನ್ಸ್‌ ತರಿಸಿ ಬಾಣಂತಿಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕಳಿಸಿಕೊಟ್ಟಿದ್ದು, ಆಕೆ ಗುಣಮುಖವಾಗುವವರಗೂ ಸೂಕ್ತ ಚಿಕಿತ್ಸೆ ನೀಡಿ ಆರೈಕೆ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಮಗು ಸತ್ತರೂ ಊರಾಚೆಯೇ ಉಳಿದಿದ್ದ ತಾಯಿ; ಮನೆಗೆ ಸೇರಿಸಿದ ನ್ಯಾಯಾಧೀಶೆ

ಗೊಲ್ಲರಹಟ್ಟಿಯ ಶಾಲೆಯ ಆವರಣದಲ್ಲಿ ಅಧಿಕಾರಿಗಳು, ಗೊಲ್ಲ ಸಮುದಾಯದ ಜನರು ಮತ್ತು ಮುಖಂಡರ ಸಭೆ ನಡೆಸಿದರು. ಸಂಪ್ರದಾಯದ ಹೆಸರಲ್ಲಿ ಮೌಢ್ಯಚಾರಣೆ ನಿಲ್ಲಿಸುವಂತೆ ತಿಳಿ ಹೇಳಿದರು.

“ಸಂಪ್ರದಾಯದ ಹೆಸರಲ್ಲಿ ಪಾಲಿಸುತ್ತಿರುವ ಮೌಢ್ಯ ತೊರೆಯುವಂತೆ ಸಮುದಾಯದವರಿಗೆ ಹೇಳಿದರೆ ನಮಗೇ ಬೆದರಿಕೆ ಹಾಕುತ್ತಾರೆ” ಎಂದು ಅಧಿಕಾರಿಗಳು ಅವಲತ್ತುಕೊಂಡರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸುಮಾರು ಎರಡು ವಾರಗಳಿಂದ ಈ ಪ್ರಕರಣ ಮೀಡಿಯಾದಲ್ಲಿ ಹರಿದಾಡುತ್ತಿದೆ. ಗೌರವಾನ್ವಿತ ನ್ಯಾಯಾಧೀಶೆಯರು ಮಧ್ಯಸ್ತಿಕೆ ವಹಿಸಿ ಕ್ರಮ ಕೈಗೊಂಡಿರುವದು ಅತ್ಯಂತ ಸ್ತುತ್ಯಾರ್ಹ ಕ್ರಮ. ಆದರೆ ಪೊಲೀಸ್ ಇಲಾಖೆಗೆ ಈ ಸುದ್ದಿ ಮುಟ್ಟಲೇ ಇಲ್ಲವೇ? ಅವರೇಕೆ ಸೂಮೋಟು ಪ್ರಕರಣ ದಾಖಲಿಸಿ ಸಂಬಂಧ ಪಟ್ಟವರ ಮೇಲೆ ಕ್ರಮ ಕೈಗೊಳ್ಳಲಿಲ್ಲ? ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಏನು ಮಾಡುತ್ತಿದೆ?

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X