ತುಮಕೂರು | ರೈಲ್ವೆ ಖಾಸಗೀಕರಣಕ್ಕೆ ಸಿಐಟಿಯು ವಿರೋಧ – ಪ್ರತಿಭಟನೆ

Date:

Advertisements

ಜನತೆ ಹಣದಲ್ಲಿ ಕಟ್ಟಿರುವ ಜನರ ರೈಲನ್ನು ಖಾಸಗೀಕರಿಸುವ ನಡೆ ದೇಶ ವಿರೋಧಿಯಾಗಿದೆ. 7-8 ದಶಕಗಳ ಕಾಲ ಜನತೆಯು ಕಟ್ಟಿದ ಸಾರ್ವಜನಿಕ ಉದ್ದಿಮೆಗಳನ್ನು ಮಾರುತ್ತಿರುವ ಬಿಜೆಪಿ ಸರ್ಕಾರವು ದೇಶದ ಲೂಟಿ ಮಾಡುತ್ತಿದೆ ಎಂದು ಸಿಐಟಿಯು ತುಮಕೂರು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಹೇಳಿದರು.

ರೈಲ್ವೆ ಖಾಸಗೀಕರಣದ ವಿರುದ್ಧ ತುಮಕೂರಿನಲ್ಲಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಮುಜೀದ್, “70 ವರ್ಷಗಳಲ್ಲಿ ಕಟ್ಟಲಾಗಿರುವ ದೇಶದ ವಿವಿಧ ಅಸ್ತಿಗಳನ್ನು ಕೇಂದ್ರ ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ. ಇದು ಜನತೆಯನ್ನು ಸಂಕಷ್ಟಕ್ಕೆ ಸಿಲುಕಿಸುವ ನಡೆಯಾಗಿದೆ” ಎಂದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷೆ ಎಸ್.ಡಿ ಪಾರ್ವತಮ್ಮ ಮಾತನಾಡಿ,  “ರೈಲ್ವೆಯನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರ ಮಾಡಿ, ಟಿಕೆಟ್ ದರವನ್ನು ಶೇ.43ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧಾರ ಮಾಡಿದೆ. ತನ್ನ ನಿರ್ಧಾರವನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

Advertisements

ಪ್ರತಿಭಟನೆಯಲ್ಲಿ ರಂಗಧಾಮಯ್ಯ, ಬಿ. ಉಮೇಶ್, ರಪೀಕ್ ಪಾಷ, ಎನ್.ಕೆ.ಸುಬ್ರಮಣ್ಯ, ಕಲೀಲ್, ವೆಂಕಟೇಶ್, ಬೀದಿಬದಿ ವ್ಯಾಪಾರಿಗಳ ಸಂಘದ ರಾಜಶೇಖರ್, ಜಗದೀಶ್. ಮುತ್ತುರಾಜ್, ವಸೀಂ ಅಕ್ರಂ , ಅಟೋ ಚಾಲಕರ ಯೂನಿಯನ್ ನ ಇಂತೀಯಾಜ್ ಪಾಷ, ಹಮಾಲಿ ಕಾರ್ಮಿಕ ಸಂಘ ರಾಮಾಂಜೀನಿ, ಆಂಗನವಾಡಿ ನೌಕರರ ಸಂಘದ ಶಿವಗಂಗಮ್ಮ, ಗೌರಮ್ಮ, ಜಬೀನಾ ಖಾತೋನ್,ಲಕ್ಮಿಕಾಂತ , ಸಮುದಾಯದ ಅಧಕ್ಷ ಅಶ್ವಥ್, ಪಿ.ಎಫ್. ಪಿಂಚಣಿದಾರರು ಬಾಲಕೃಷ್ಣ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X