ತುಮಕೂರು | ಆರ್ಥಿಕ- ಸಾಮಾಜಿಕ ಅಸಮಾನತೆ ತೊಲಗಿಸಲು ಸಿಐಟಿಯು ಹೋರಾಟ : ಸೈಯದ್ ಮುಜೀಬ್

Date:

Advertisements

ಸೆಂಟರ್ ಆಫ್ ಇಂಡಿಯಾನ್ ಟೇಡ್ ಯೂನಿಯನ್ಸ್ ( ಸಿಐಟಿಯು ) ಕಳೆದ 55 ವರ್ಷಗಳಿಂದ ನಿರಂತರವಾಗಿ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಸಮಾನತೆಗಾಗಿ ಸಂಘಟಿತ – ಅಸಂಘಟಿತ ಕಾರ್ಮಿಕರ ಹಕ್ಕು ಭಾದ್ಯತೆಗಳಿಗಾಗಿ ನಿರಂತರವಾಗಿ ಶ್ರಮಿಸುತ್ತಾ ಬಂದಿರುತ್ತದೆ ಮತ್ತು ಮುಂದೆ ಸಹ ಇದಕ್ಕೆ ಕಟಿಬದ್ದವಾಗಿ ದುಡಿಯಲಿದೆ ಎಂದು ಸಿಐಟಿಯು ಜಿಲ್ಲಾ ಅಧ್ಯಕ್ಷ ಸೈಯದ್ ಮುಜೀಬ್ ತಿಳಿಸಿದರು.

ತುಮಕೂರು ನಗರದ ಜನ ಚಳುವಳಿ ಕೇಂದ್ರದಲ್ಲಿ ಸಿಐಟಿಯು ಸಂಸ್ಥಪನೆಯ 55 ನೇ ವರ್ಷಚಾರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಬೇಳೆಯುತ್ತಿರುವ ಅರ್ಥಿಕ – ಸಾಮಾಜಿಕ ಅಸಮಾನತೆಗಳು ಆರೋಗ್ಯಕರ ಸಮಾಜದ ಲಕ್ಷಣವಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. 

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಉಮೇಶ್   ಮಾತನಾಡಿ ದುಡಿವ ಜನರ ಹಿತರಕ್ಷಣೆಯನ್ನು ಸರ್ಕಾರಗಳು ಮರೆತು ಉಳ್ಳವರ ಪರ ನೀತಿಗಳನ್ನು ಜಾರಿಮಾಡುತ್ತಿರುವುದನ್ನು ಎಲ್ಲಾ ದುಡಿವ ಜನ ಐಕ್ಯತೆಯಿಂದ ಹಿಮ್ಮೆಟ್ಟಿಸಲು ಅಗತ್ಯ ಪ್ರತಿರೋಧ ಕಟ್ಟುವಲ್ಲಿ ಸಿಐಟಿಯು ಮುಂಚೂಣಿಯಲ್ಲಿದೆ ಎಂದರು.

Advertisements

ಮನೆ ಕೆಲಸಗಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಪಲ್ಲವಿ ಅವರು ಮಾತನಾಡಿ ಸರ್ಕಾರಗಳು ಮನೆ ಕೆಲಸಗಾರರಿಗೆ ಪಿಂಚಣಿ ಯೋಜನೆ, ಅನಾರೋಗ್ಯ ವೆಚ್ಚ ಭರಿಸು ಯೋಜನೆ, ಮಕ್ಕಳ ಶಿಕ್ಷಣಕ್ಕೆ ಸಹಾಯಕವಾಗುವಂತೆ ವಿಧ್ಯಾರ್ಥಿ ವೇತನಕ್ಕೆ ಸಂಘ ನಡೆಸುವ ಹೋರಾಟಕ್ಕೆ ಕೈ ಜೋಡಿಸುವಂತೆ ಕೊರಿದರು. 

ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಂಚಾಲಕಿ ಟಿ.ಆರ್ ಕಲ್ಪನಾ , ಕಟ್ಟಡ ಕಾರ್ಮಿಕ ಸಂಘದ ಕಲೀಲ್.ಸಿಐಟಿಯು ಜಿಲ್ಲಾ ಖಜಾಂಚಿ ಎ . ಲೊಕೇಶ್, ಡಿಸಾ ಕಾರ್ಮಿಕ ಸಂಘ ಷಣ್ಮಖಪ್ಪ, ಪಿ. ಎಫ್ . ಪಿಂಚಣಿದಾರರ ಸಂಘ ಸಂಚಾಲಕ ಟಿ.ಜಿ. ಶಿವಲಿಂಗಯ್ಯ, ಅವರು ಮಾತನಾಡಿದರು. 

ಅರಂಭದಲ್ಲಿ ಎನ್. ಕೆ ಸುಬ್ರಮಣ್ಯ ಸ್ವಾಗತಿಸಿ. ಮಧುಸೂದನ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X