ತುಮಕೂರು | ಸಿದ್ದರಾಮಯ್ಯನವರನ್ನು ಅಂಬೇಡ್ಕರ್‌ಗೆ ಹೋಲಿಸಿರುವುದು ಸ್ವೀಕಾರಾರ್ಹವಲ್ಲ : ಹೆತ್ತೇನಹಳ್ಳಿ ಮಂಜುನಾಥ್ ಆಕ್ಷೇಪ

Date:

Advertisements

 ಒಳಮೀಸಲಾತಿ ಜಾರಿಗೊಳಸಿದರೆ ನನಗೆ ಯಾವ ವಿಧಾನಪರಿಷತ್ ಹಾಗೂ ಸಚಿವ ಸ್ಥಾನವೂ ಬೇಡ, ಒಳ ಮೀಸಲಾತಿ ಜಾರಿ‌ಮಾಡಿದರೆ ನನಗೇ ಅದೇ ದೊಡ್ಡ ಸ್ಥಾನ ಮಾನ ನೀಡಿದಂತೆ ಎನ್ನುವ ಮೂಲಕ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಅವರು ಸಮುದಾಯ ಕಾಳಜಿ ಮೆರೆದಿರುವುದು ಸ್ವಾಗತಾರ್ಹ ಎಂದು ಮಂಜುನಾಥ್ ಹೆತ್ತೇನಹಳ್ಳಿ ಪ್ರತಿಕ್ರಿಯಿಸಿದರು. 

ತುಮಕೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ  ಮಾತನಾಡಿದ ಮಂಜುನಾಥ್, ಸ್ಥಾನ ಮಾನಗಳು ಅಥವ ಅವಕಾಶಗಳನ್ನು ಪಡೆಯುವ ಸಂದರ್ಭ ಬಂದಾಗ ಸ್ವಜಾತಿಗಳಲ್ಲೇ ಭಿನ್ನಾಭಿಪ್ರಾಯ, ಅವಕಾಶವಾದಿತನ ಮುನ್ನೆಲೆಗೆ ಬರುತ್ತವೆ. ಆದರೆ ಆಂಜನೇಯ ಅವರು ಈ ಆರೋಪಕ್ಕೆ ಅಪವಾದವಾಗಿ ನಿಲ್ಲುತ್ತಾರೆ‌ ಹಾಗೂ ತಮ್ಮ ನಿಸ್ವಾರ್ಥ ನಿಲುವಿನ ಮೂಲಕ ಸಮುದಾಯ ಕಾಳಜಿ ವಹಿಸಿ ಮುಂದಿನ ಪೀಳಿಗೆಗೆ ಮಾದರಿಯಾಗಿ ನಿಲ್ಲುತ್ತಾರೆ. ಅದಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಎರಡನೇ ಅಂಬೇಡ್ಕರ್ ಎಂದು ಹೇಳಿರುವುದು ಉತ್ಪ್ರೇಕ್ಷೆಯಲ್ಲದೆ ಬೇರೇನೂ ಅಲ್ಲ. ಸಿದ್ದರಾಮಯ್ಯನವರು ಅಂಬೇಡ್ಕರ್ ಅನುಯಾಯಿ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಅವರನ್ನೇ ಬಾಬಾ ಸಾಹೇಬರಿಗೆ ಹೋಲಿಸುವುದು ತರ್ಕಕ್ಕೆ ನಿಲುಕದ್ದು, ಸ್ವೀಕರಿಸಲು ಅನರ್ಹವಾದದ್ದು ಎಂಬ ಸೂಕ್ಷ್ಮ ವಿಷಯ ಮಾಜಿ ಸಚಿವರಿಗೆ ಇರಬೇಕು ಎಂದು ಹೇಳಿದರು.

Advertisements

ವರದಿ – ಹರೀಶ್ ಕಮ್ಮನಕೋಟೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X