ತುಮಕೂರು | ದೂರುಗಳು ದುರುದ್ದೇಶಗಳಿಂದ ಕೂಡಿರಬಾರದು : ನ್ಯಾ. ಫಣೀಂದ್ರ

Date:

Advertisements

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ, ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು ಎಂದು ಕರ್ನಾಟಕ ರಾಜ್ಯ ಲೋಕಾಯುಕ್ತದ ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ತಿಳಿಸಿದರು.

ತುಮಕೂರು ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಶುಕ್ರವಾರ ಕರ್ನಾಟಕ ಲೋಕಾಯುಕ್ತ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲುಗಳ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ಧ್ಯೇಯದಂತೆ ಎಲ್ಲರಿಗೂ ಸಮಾನ ನ್ಯಾಯವನ್ನು ಒದಗಿಸುವುದೇ ಲೋಕಾಯುಕ್ತದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರ ಬಳಿಗೆ ಬಂದು ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ರಾಜ್ಯದ 17 ಜಿಲ್ಲೆಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ನಡೆಸಿ ಪರಿಹಾರ ನೀಡುವ ಪ್ರಯತ್ನ ಮಾಡಲಾಗಿದೆ. ಒಬ್ಬ ಸಾಮಾನ್ಯ ವ್ಯಕ್ತಿಗೂ ಸಹ ಉತ್ತಮ ಜೀವನ ರೂಪಿಸಿಕೊಳ್ಳಲು ಅವಕಾಶ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಮನುಷ್ಯ ಹುಟ್ಟಿದಾಗಿನಿಂದ ಸಾಯುವವರೆಗೂ ಗೌರವಯುತವಾಗಿ ಬದುಕಲು ಅಗತ್ಯವಿರುವ ಸಂವಿಧಾನಾತ್ಮಕ ಮೂಲಭೂತ ಹಕ್ಕುಗಳನ್ನು ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಹಕ್ಕುಗಳಿಗೆ ಚ್ಯುತಿ ಉಂಟಾದಾಗ ತನ್ನನ್ನು ತಾನು ರಕ್ಷಿಸಿಕೊಳ್ಳಲು ಕಾನೂನಿನ ಅರಿವು ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಕಾನೂನಿನ ಅರಿವನ್ನು ಹೊಂದಿರಬೇಕು ಎಂದು ತಿಳಿಸಿದರು.

Advertisements
1000557124

ಹಣ-ಅಧಿಕಾರದಿಂದ ಮಾತ್ರ ಸರ್ಕಾರಿ ಕೆಲಸ ನಡೆಯುತ್ತವೆ ಎಂಬ ನಂಬಿಕೆಯನ್ನು ದೂರ ಮಾಡಬೇಕು : ಸರ್ಕಾರಿ ಅಧಿಕಾರಿಗಳು ಸತ್ಯ, ನಿಷ್ಠೆಯಿಂದ ಕೆಲಸ ಮಾಡುವ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಸರ್ಕಾರಿ ಸೌಲಭ್ಯಗಳನ್ನು ತಲುಪಿಸಬೇಕು. ಹಣ ಮತ್ತು ಅಧಿಕಾರವಿದ್ದವರಿಗೆ ಮಾತ್ರ ಸರ್ಕಾರಿ ಸೇವೆ ದೊರೆಯುತ್ತವೆ ಎಂದು ಶೇ.80ರಷ್ಟು ಜನರಲ್ಲಿ ನಂಬಿಕೆ ಇದೆ. ಇಂಥಹ ನಂಬಿಕೆಯನ್ನು ತೊಲಗಿಸಲು ಸರ್ಕಾರಿ ಅಧಿಕಾರಿಗಳು ಅನಗತ್ಯ ವಿಳಂಬ ಮಾಡದೆ ಸಾರ್ವಜನಿಕರಿಗೆ ನ್ಯಾಯಯುತವಾಗಿ ನಿಗಧಿತ ಕಾಲಾವಧಿಯಲ್ಲಿ ಸೇವೆ ಒದಗಿಸಬೇಕು ಎಂದು ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ ಜಾರಿಗೆ ತರುವ ಆದೇಶಗಳನ್ನು ಸಮರ್ಪಕ ರೀತಿಯಲ್ಲಿ ಅನುಷ್ಠಾನಗೊಳಿಸುವ ಬಹುದೊಡ್ಡ ಜವಾಬ್ದಾರಿ ಕಾರ್ಯಾಂಗದ ಮೇಲಿದ್ದು, ಸರ್ಕಾರದ ಪ್ರಮುಖ ಆಧಾರ ಸ್ತಂಭವಾದ ಕಾರ್ಯಾಂಗವು ವ್ಯವಸ್ಥಿತವಾಗಿ ತನ್ನ ಕಾರ್ಯ ನಿರ್ವಹಿಸಿದಾಗ ಮಾತ್ರ ಗಾಂಧೀಜಿಯವರ ರಾಮ ರಾಜ್ಯದ ಕನಸನ್ನು ನನಸಾಗಿಸಲು ಸಾಧ್ಯವೆಂದು ತಿಳಿಸಿದರು.

1000557126

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಜಿಲ್ಲೆಯಲ್ಲಿ ಲೋಕಾಯುಕ್ತಕ್ಕೆ ಸಂಬಂಧಿಸಿದಂತೆ 180 ದೂರುಗಳು ದಾಖಲಾಗಿದ್ದು, ಅಕ್ಟೋಬರ್ 14ರಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಕಾನೂನಿನ ಚೌಕಟ್ಟಿನಡಿ ಬಾಕಿ ಇರುವ ದೂರು ಅರ್ಜಿಗಳನ್ನು ನಿಯಮಾನುಸಾರ ಶೀಘ್ರವಾಗಿ ವಿಲೇವಾರಿ ಮಾಡಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಭ್ರಷ್ಟಾಚಾರ ತಡೆಗಟ್ಟುವ ಉದ್ದೇಶದಿಂದ ಸಾರ್ವಜನಿಕ ಮಾಹಿತಿಗಾಗಿ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಪ್ರದರ್ಶಿಸಲಾಗಿದೆ ಎಂದು ತಿಳಿಸಿದರು.

1000557127

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ವಂದಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಲೋಕಾಯುಕ್ತ ಅಪರ ನಿಬಂಧಕ ಜೆ.ವಿ.ವಿಜಯಾನಂದ, ಉಪ ನಿಬಂಧಕರಾದ ಬಸವರಾಜಪ್ಪ ಕೆ.ಎಂ., ಅರವಿಂದ ಎನ್.ವಿ., ತುಮಕೂರು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ವಿ. ಲಕ್ಷ್ಮೀನಾರಾಯಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ ಮತ್ತು ಜಿಲ್ಲೆಯ ವಿವಿಧ ಅಧಿಕಾರಿಗಳು, ದೂರುದಾರರು, ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ದೂರು-ದುಮ್ಮಾನ ಹೊತ್ತು ತಂದಿದ್ದ 430ಕ್ಕೂ ಹೆಚ್ಚು ಸಾರ್ವಜನಿಕರಿಗೆ ಲೋಕಾಯುಕ್ತದಿಂದ ಟೋಕನ್ ವಿತರಿಸಲಾಗಿತ್ತು. ದೂರು ಅರ್ಜಿಗಳನ್ನು ಸ್ವೀಕರಿಸಿ ಪರಿಶೀಲಿಸಿದ ಉಪಲೋಕಾಯುಕ್ತ ಬಿ. ವೀರಪ್ಪ ಅವರು, ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X