ತುಮಕೂರು | ಗೃಹ ಸಚಿವರ ಸ್ವಕ್ಷೇತ್ರದಲ್ಲೇ ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಸ್ಮಶಾನವಿಲ್ಲದೆ ಪರದಾಟ!

Date:

Advertisements

ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಸ್ವಕ್ಷೇತ್ರದಲ್ಲೇ ದಲಿತ ಸಮುದಾಯದ ಮೃತ ವ್ಯಕ್ತಿಯ ಅಂತ್ಯಕ್ರಿಯೆಗೆ ಸ್ಮಶಾನವಿಲ್ಲದೆ ಪರದಾಡಿದ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿ ದಲಿತ ಯುವಕ ಹನುಮಂತರಾಯಪ್ಪ ಶುಕ್ರವಾರ ಸಂಜೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಗ್ರಾಮದ ಸಮೀಪದ ಭೂಮಿಯಲ್ಲಿ ಮೃತನ ಶವ ಸಂಸ್ಕಾರಕ್ಕೆ ಮುಂದಾದಾಗ, ಆ ಭೂಮಿಯ ಮಾಲೀಕ ಎನ್ನಲಾದ ಹನುಮಂತಯ್ಯ ಎಂಬುವವರು, ‘ಈ ಭೂಮಿ ನಮಗೆ ಸೇರಿದ್ದು’ ಎಂದು ಶವ ಸಂಸ್ಕಾರಕ್ಕೆ ಅವಕಾಶ ನೀಡದೆ ತಡೆದಿದ್ದು, ಕೆಲ ಕಾಲ ಶವ ಇಟ್ಟುಕೊಂಡ ಸ್ಥಳದಲ್ಲಿ ಗೊಂದಲ ಸೃಷ್ಟಿಯಾಯಿತು.

ಘಟನೆಯ ವಿಷಯ ತಿಳಿದ ಬಳಿಕ ಸ್ಥಳಕ್ಕೆ ತಹಶೀಲ್ದಾರ್ ಮಂಜುನಾಥ್ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿ ಜಮೀನು ಮಾಲೀಕನಿಗೆ ಈ ಬಾರಿ ಇಲ್ಲೇ ಶವ ಸಂಸ್ಕಾರ ಮಾಡಿಸುವಂತೆ ಸೂಚನೆ ನೀಡಿದರು. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಯವರು ಗುರುತಿಸಿರುವ ಜಾಗದಲ್ಲೇ ಶವ ಸಂಸ್ಕಾರ ಮಾಡುವಂತೆ ದಲಿತ ಸಮುದಾಯದವರಿಗೆ ಮನವೊಲಿಸುವ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

Advertisements

tumkur 1

“ಈ ಭೂಮಿ ನನ್ನ ಹೆಸರಿನಲ್ಲಿದೆ. ಹಾಗಾಗಿ ಇಲ್ಲಿ ಶವ ಸಂಸ್ಕಾರಕ್ಕೆ ಬಿಡುವುದಿಲ್ಲ” ಎಂದು ಜಮೀನು ಮಾಲೀಕ ಹನುಮಂತಯ್ಯ ಹಠ ಹಿಡಿದಿದ್ದರು. ಅದರೆ ಶತ-ಶತಮಾನಗಳಿಂದ ನಾವು ಇಲ್ಲೇ ಶವ ಸಂಸ್ಕಾರವನ್ನು ಮಾಡುತ್ತಿದ್ದೇವೆ. ಹಾಗಾಗಿ ನಾವು ಇಲ್ಲೇ ಶವ ಸಂಸ್ಕಾರ ಮಾಡುತ್ತೇವೆ ಎಂದು ದಲಿತ ಮುಖಂಡರು ಪಟ್ಟು ಹಿಡಿದಿದ್ದು ತಾಲೂಕು ಆಡಳಿತವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

ಈಗಾಲೇ ಗ್ರಾಮದಲ್ಲಿ ದಲಿತರ ಸ್ಮಶಾನಕ್ಕೆ ಕಂದಾಯ ಇಲಾಖೆ ಭೂಮಿ ಗುರುತಿಸಿದೆ. ಈ ಭೂಮಿ ಗ್ರಾಮದಿಂದ ಸುಮಾರು 3 ಕಿಲೋಮೀಟರ್ ದೂರ ಇದ್ದು, ಶವ ಸಾಗಿಸಲು ತೊಂದರೆಯಾಗುತ್ತಿದೆ. ಗುರುತಿಸಿರುವ ಸ್ಥಳ ಕಲ್ಲು ಬಂಡೆಗಳಿಂದ ಕೂಡಿದ್ದು ಗುಂಡಿ ತೆಗೆಯಲು ಅಸಾಧ್ಯವಾಗಿದೆ. ದಲಿತರಿಗೆ ಗ್ರಾಮದ ಅಕ್ಕಪಕ್ಕದಲ್ಲಿ ಸ್ಮಶಾನಕ್ಕೆ ಸ್ಥಳ ಗುರುತಿಸಿಕೊಡಬೇಕೆಂದು ಸ್ಥಳೀಯ ದಲಿತ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಸಮನ್ವಯತೆಯ ಕೊರತೆಯಿಂದ ತುಮಕೂರು ಜಿಲ್ಲೆಯಾದ್ಯಂತ ದಲಿತರಿಗೆ ಅಂತ್ಯಕ್ರಿಯೆಗೆ ಯೋಗ್ಯವಾದ ಭೂಮಿ ಗುರುತಿಸಿ, ಸ್ಮಶಾನ ಸಮಸ್ಯೆಯನ್ನು ಅಧಿಕಾರಿ ವರ್ಗ ಪರಿಹರಿಸಬೇಕಾಗಿತ್ತು. ಮಳೆ ಬಂದರೆ ಕೊಡೆ ಹಿಡಿಯುವಂತೆ ಅಂತ್ಯಸಂಸ್ಕಾರಕ್ಕೆ ತೊಂದರೆಯಾದಾಗ ಮಾತ್ರ ಪ್ರತ್ಯಕ್ಷವಾಗುವ ಅಧಿಕಾರಿಗಳು ಶಾಶ್ವತವಾದ ಪರಿಹಾರ ದೊರಕಿಸಿಕೊಡುವಲ್ಲಿ ವಿಫಲವಾಗಿದ್ದಾರೆ ಎನ್ನುತ್ತಾರೆ ದಲಿತ ಸಮುದಾಯದ ಮಂದಿ ಆಕ್ರೋಶ ಹೊರಹಾಕಿದರು.

ಇದನ್ನು ಓದಿದ್ದೀರಾ? ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ತನ್ನದೇ ಸಮುದಾಯದ ಜನರು ಅಂತ್ಯಕ್ರಿಯೆಗೆ ಸ್ಥಳಾವಕಾಶ ಇಲ್ಲದೆ ಪರದಾಡುತ್ತಿರುವಾಗ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪರಮೇಶ್ವರ್ ಅವರು ಎರಡು ಇಲಾಖೆಯವರು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಮಾಡುತ್ತಾರಾ? ಆ ಮೂಲಕ ದಲಿತರ ಅಂತ್ಯ ಸಂಸ್ಕಾರಗಳಿಗೆ ಅಡ್ಡಿಯಾಗಿರುವ ಸ್ಮಶಾನ ಸಮಸ್ಯೆಗೆ ಪೂರ್ಣವಿರಾಮ ಹಾಕುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X