ತುಮಕೂರು | ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ : ಸಚಿವರುಗಳ‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕೆಡಿಪಿ ಸಭೆಯಿಂದ ಹೊರನಡೆದ ಬಿಜೆಪಿ ಶಾಸಕ ಸುರೇಶ್ ಗೌಡ

Date:

Advertisements

ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.‌ಜಿ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆತ್ತಿರುವ 2024-25 ನೇ ಸಾಲಿನ ಮೂರನೇ  ತ್ರೈಮಾಸಿಕ ಕೆಡಿಪಿ‌ ಸಭೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಮಾತ್ರವೇ ಚರ್ಚೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಭೆಯಯಲ್ಲಿ ಸಚಿವರುಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿ  ತುಮಕೂರು ಗ್ರಾಮಾಂತರ ಬಿಜೆಪಿ  ಶಾಸಕ ಸುರೇಶ್  ಗೌಡ ಕೆಡಿಪಿ ಸಭೇ ಬಹಿಷ್ಕರಿಸಿ ಸಭೆಯಿಂದ ಹೊರನಡೆದರು.

1001092900

ಗ್ಯಾರಂಟಿ ಬಗ್ಗೆ ಚರ್ಚೆ ನಡೆಸಲು ಮತ್ತೊಂದು ಸಭೆ ಮಾಡಿ‌ಕೊಳ್ಳಿ. ಮೂರು ತಿಂಗಳಿಗೆ   ಮಾಡುವ  ಸಭೆಯನ್ನು  ಆರು ತಿಂಗಳಿಗೆ‌ ಮಾಡುತ್ತೀರ. ಈ ಸಭೆಯಲ್ಲಿ ಮುಖ್ಯವಾಗಿ ರೈತರ‌ ಹಲವಾರು ಸಮಸ್ಯೆಗಳಿವೆ. ಅದರ ಬಗ್ಗೆ ಚರ್ಚೆ ಯಾಗಬೇಕು. ಜನರು ಸಮಸ್ಯೆಯಿಂದ ಬಾಯಿ ಬಡಿದುಕೊಳ್ಳುತ್ತಿದ್ದಾರೆ ಎಂದು ಶಾಸಕ ಸುರೇಶ್ ಗೌಡ  ಸಚಿವರುಗಳ‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕೆಡಿಪಿ ಸಭೆಯಿಂದ ಹೊರನಡೆದರು.

ನಂತರ ಮಾಧ್ಯಮದವರೊಂಗೆ ಮಾತನಾಡಿದ ಶಾಸಕ ಸುರೇಶ್ ಗೌಡ,  ಇದೊಂದು ಟೈಂ ಪಾಸ್ ಸಭೆ. ಮೂರು ತಿಂಗಳಿಗೊಮ್ಮೆ ನಡೆಯುವ ಸಭೆಯನ್ನು  ಆರು ತಿಂಗಳಿಗೆ ನಡೆಸುತ್ತಿದ್ದಾರೆ. ನಾವು ಆರು ತಿಂಗಳ‌ ಹಿಂದಿನಿಂದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಹೇಮಾವತಿ ನೀರಿನ ಬಗ್ಗೆ, ಬೇಸಿಗೆ ಆರಂಭದಲ್ಲಿ ಕುಡಿಯುವ ನೀರಿನ ಸಮಸ್ಯೆ.ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಆದರೆ ಗಂಟೆಗಟ್ಟಲೆ ಗ್ಯಾರಂಟಿ ಬಗ್ಗೆಯೇ ಚರ್ಚೆ ಮಾಡುತ್ತಿದ್ದಾರೆ. 

Advertisements
1001092899

ಗ್ಯಾರಂಟಿ ಯೋಜನೆಗಳ  ಪ್ರಗತಿ ಪರಿಶೀಲನೆಗೆ  ಪ್ರತ್ಯೇಕ ಸಭೆ  ಮಾಡಿಕೊಳ್ಳಲಿ. ಪ್ರಸ್ತುತ ಸಮಸ್ಯೆಗಳ ಚರ್ಚೆಗೆ ಸಭೆಯಲ್ಲಿ  ಹೆಚ್ಚಿನ ಆದ್ಯತೆ ನೀಡಬೇಕು. ರೇವಣ್ಣ ಅವರು ಯಾವೋದು ಕ್ಯಾಬಿನೆಟ್ ರ್ಯಾಂಕ್ ತಗೊಂಡು ಬಂದು ಮೀಟಿಂಗ್ ಮಾಡಿಕೊಂಡು ಕುಳಿತಿದ್ದಾರೆ. ಈತರ ಮೀಟಿಂಗ್ ಗಳು ಆಗಬಾರದು. ಸಚಿವ  ಪರಮೇಶ್ವರ್ ಅವರು  ಮೂರು  ತಿಂಗಳಿಗೊಮ್ಮೆ ಸಭೆ ನಡೆಸಲಿ.  ಈ ರೀತಿಯ ಟೈಂ ಪಾಸ್ ಮಾಡೋ ಮೀಟಿಂಗ್ ಗೆ ಟಿ‌ ಕಾಫಿಗೆ ಯಾಕೆ ಬರಬೇಕು. ಅದಕ್ಕೆ ಸಭೆ ಬಹಿಷ್ಕರಿಸಿ   ಹೊರಬಂದಿದ್ದೇನೆ ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X