ತುಮಕೂರು | ರೈತ ಭವನ ನಿರ್ಮಾಣಕ್ಕೆ ಆಗ್ರಹ

Date:

Advertisements

ಪಾವಗಡ ನಗರದ ಹಳೇ ಸಂತೆ ಮೈದಾನದಲ್ಲಿ ರೈತ ಭವನ ಕಟ್ಟಿಸಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪೂಜಾರಪ್ಪ ಆಗ್ರಹಿಸಿದ್ದಾರೆ.

ತುಮಕೂರು ಜಿಲ್ಲೆ ಪಾವಗಡ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. “ನಗರದ ಹಳೇ ಸಂತೆ ಮೈದಾನದಲ್ಲಿ ಸುಮಾರು 2 ಎಕರೆಗಳಿಗಿಂತಲೂ ಹೆಚ್ಚು ಜಮೀನಿದೆ. ಈ ಜಮೀನಿನಲ್ಲಿ ಹಲವಾರು ಸಾರ್ವಜನಿಕರು ಶೆಡ್‌ಗಳನ್ನು ಹಾಕಿಕೊಂಡು ಸದರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಪುರಸಭೆಗೆ ಯಾವುದೇ ಆದಾಯ ಇರುವುದಿಲ್ಲ. ಅಲ್ಲದೆ ಈ ಸ್ಥಳವನ್ನು ಪ್ರಭಾವಶಾಲಿಗಳು ಒತ್ತುವರಿ ಮಾಡಿದ್ದಾರೆ. ಇದನ್ನು ಕೂಡಲೇ ತೆರವುಗೊಳಿಸಬೇಕು” ಎಂದು ಒತ್ತಾಯಿಸಿದರು.

“ರೈತ ಸಂಘ ಈ ಬಗ್ಗೆ 20 ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬಂದರೂ ಕೂಡ ನಮಗೆ ರೈತ ಭವನವಿರುವುದಿಲ್ಲ. ಈಗ ಮೇಲ್ಕಂಡ ಸಂತೆ ಜಮೀನಿನಲ್ಲಿ ನಮಗೆ ಪೂರ್ವ-ಪಶ್ಚಿಮವಾಗಿ 60 ಅಡಿಗಳು, ಉತ್ತರ-ದಕ್ಷಿಣವಾಗಿ 60 ಅಡಿಗಳು ಖಾತೆ ವಗೈರೆ ಲೈಸೆನ್ಸ್ ಮಂಜೂರು ಮಾಡಿಕೊಡಬೇಕು” ಎಂದರು.

Advertisements

“ಪುರಸಭೆ ಮುಖ್ಯಾಧಿಕಾರಿಗಳು, ಪುರಸಭೆ ಅಧ್ಯಕ್ಷರು, ಎಲ್ಲ ಸದಸ್ಯರುಗಳು ಒಮ್ಮತದಿಂದ ರೈತಭವನ ಕಟ್ಟಿಕೊಳ್ಳಲು ಅನುಮತಿ ನೀಡಿ, ಸಹಕರಿಸಿ ಒಂದು ವಾರದೊಳಗೆ ರೈತ ಭವನ ನಿರ್ಮಾಣಕ್ಕೆ  ಅನುಕೂಲ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಬಳಕೆಯಾಗದೇ ಪಾಳುಬಿದ್ದಿದೆ ʼಕಮಲನಗರ ಬಸ್ ನಿಲ್ದಾಣʼ

ರೈತ ಭವನ ನಿರ್ಮಾಣಕ್ಕೆ ವಿಳಂಬ ಮಾಡಿದರೆ ಮುಂದಿನ ದಿನಗಳಲ್ಲಿ ಪುರಸಭೆ ಕಾರ್ಯಲಯದ ಎದುರು ಕರ್ನಾಟಕ ರೈತ ಸಂಘದ ಅಧ್ಯಕ್ಷರು ಮತ್ತು ರೈತ ಸಂಘದ ಪದಾಧಿಕಾರಿಗಳು  ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ರೈತ ಸಂಘದ ಪದಾದಿಕಾರಿಗಳು, ಸದಸ್ಯರು ಹಾಗೂ ಕಾರ್ಯಕರ್ತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X